Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಚ್1-ಬಿ ವೀಸಾದಲ್ಲಿ ಪಾರದರ್ಶಕತೆ:...

ಎಚ್1-ಬಿ ವೀಸಾದಲ್ಲಿ ಪಾರದರ್ಶಕತೆ: ಅಮೆರಿಕಕ್ಕೆ ಭಾರತ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Feb 2017 8:23 PM IST
share
ಎಚ್1-ಬಿ ವೀಸಾದಲ್ಲಿ ಪಾರದರ್ಶಕತೆ: ಅಮೆರಿಕಕ್ಕೆ ಭಾರತ ಆಗ್ರಹ

ಹೊಸದಿಲ್ಲಿ,ಫೆ.21: ಅಮೆರಿಕವು ತನ್ನ ವೀಸಾ ನೀಡಿಕೆ ವ್ಯವಸ್ಥೆಯಲ್ಲಿ ನಿಶ್ಚಿತತೆಯನ್ನು ಕಾಯ್ದುಕೊಳ್ಳಬೇಕೆಂದು ಭಾರತವು ಮಂಗಳವಾರ ಆಗ್ರಹಿಸಿದ್ದು, ಸುಸ್ಥಿರವಾದ ವಾತಾವರಣದಲ್ಲಿ ಮಾತ್ರವೇ ಉದ್ಯಮಗಳು ಪ್ರಗತಿ ಹೊಂದಲು ಸಾಧ್ಯವೆಂದು ಅದು ಪ್ರತಿಪಾದಿಸಿದೆ.

ಎಚ್1-ಬಿ ವೀಸಾ ನೀಡಿಕೆಗೆ ಸಂಬಂಧಿಸಿದ ನಿರ್ಬಂಧಗಳನ್ನು ಟ್ರಂಪ್ ಆಡಳಿತವು ಬಿಗಿಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಭವಿಸಿರುವ ಸಮಸ್ಯೆಗಳ ಬಗ್ಗೆ ತಾನು ಅಮೆರಿಕ ಕಾಂಗ್ರೆಸ್‌ನ ಸಂಸದರ ಜೊತೆ ಚರ್ಚಿಸಿರುವುದಾಗಿ ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

‘‘ ಉದ್ಯಮಗಳು ಯಾವತ್ತೂ ನಿಶ್ಚಿತತೆ ಹಾಗೂ ಪಾರದರ್ಶಕತೆಯ ವಾತಾವರಣದಲ್ಲಿ ಉನ್ನತಿಯನ್ನು ಹೊಂದುತ್ತವೆ. ಹೀಗಾಗಿ ವೀಸಾ ನೀಡಿಕೆಯ ವಿಷಯದಲ್ಲಿಯೂ ಖಚಿತತೆ ಹಾಗೂ ಪಾರದರ್ಶಕತೆ ಇರುವುದನ್ನು ನಾವು ಬಯಸುತ್ತಿದ್ದೇವೆ’’ ಎಂದು ನಿರ್ಮಲಾ ಹೊದಿಲ್ಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

 ಎಚ್1-ಬಿ ವೀಸಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಅಮೆರಿಕದ ಕಾಂಗ್ರೆಸ್ ಸದಸ್ಯರು ತಮ್ಮ ಪಾತ್ರವನ್ನು ವಹಿಸುವರೆಂಬ ವಿಶ್ವಾಸವನ್ನು ನಿರ್ಮಲಾ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

 ಸೀತಾರಾಮನ್ ಅವರು ವಿಶ್ವಸಂಸ್ಥೆಯ ವರದಿಯೊಂದರ ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡುತ್ತಿದ್ದರು. ಭಾರತಕ್ಕೆ ಆಗಮಿಸಿದ್ದ ಅಮೆರಿಕದ ನಿಯೋಗದ ನೇತೃತ್ವವನ್ನು ಅಮೆರಿಕನ್ ಪ್ರತಿನಿಧಿ ಸಭೆಯ ನ್ಯಾಯಾಂಗ ಸಮಿತಿಯ ಅಧ್ಯಕ್ಷರಾದ ಬಾಬ್ ಗೂಡ್‌ಲ್ಯಾಟ್ ವಹಿಸಿದ್ದರು.

ಅಮೆರಿಕವು ಎಚ್1-ಬಿ ವೀಸಾ ವ್ಯವಸ್ಥೆಯಲ್ಲಿ ಮಾರ್ಪಾಡುಗಳನ್ನು ಮಾಡುವ ಪ್ರಸ್ತಾಪವನ್ನು ಮಂಡಿಸಿರುವುದು ಭಾರತದ ಮಾಹಿತಿತಂತ್ರಜ್ಞಾನ ವಲಯದಲ್ಲಿ ಆತಂಕವನ್ನು ಮೂಡಿಸಿದೆ. ಭಾರತದ ಐಟಿ ವಲಯವು ದೇಶದ ಒಟ್ಟು ಆಂತರಿಕ ಉತ್ಪನ್ನಕ್ಕೆ ಶೇ.9.3ರಷ್ಟು ಕೊಡುಗೆ ನೀಡುತ್ತಿದ್ದು, 30.70 ಲಕ್ಷಕ್ಕೂ ಅಧಿಕ ಉದ್ಯೋಗಿಗಳನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X