Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್ ಕ್ರಿಕೆಟ್ ಅರ್ಹತಾ ಟೂರ್ನಿ...

ವಿಶ್ವಕಪ್ ಕ್ರಿಕೆಟ್ ಅರ್ಹತಾ ಟೂರ್ನಿ ಫೈನಲ್ ;ಭಾರತದ ವನಿತೆಯರಿಗೆ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ21 Feb 2017 11:55 PM IST
share
ವಿಶ್ವಕಪ್ ಕ್ರಿಕೆಟ್ ಅರ್ಹತಾ ಟೂರ್ನಿ ಫೈನಲ್ ;ಭಾರತದ ವನಿತೆಯರಿಗೆ ರೋಚಕ ಜಯ

ಕೊಲಂಬೊ, ಫೆ.21: ಮಹಿಳೆಯರ ವಿಶ್ವಕಪ್ ಅರ್ಹತಾ ಟೂರ್ನಿಯ ಫೈನಲ್‌ನಲ್ಲಿ ಇಂದು ದಕ್ಷಿಣ ಆಫ್ರಿಕ ವಿರುದ್ಧ ಭಾರತ 1 ವಿಕೆಟ್ ಅಂತರದ ರೋಚಕ ಜಯ ಗಳಿಸಿದೆ.

ಪಿ.ಸಾರಾ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 245 ರನ್‌ಗಳ ಸವಾಲನ್ನು ಪಡೆದ ಭಾರತದ ವನಿತೆಯರ ತಂಡ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟದಲ್ಲಿ ಗೆಲುವಿನ ದಡ ಸೇರಿತು. ಇದರೊಂದಿಗೆ ಭಾರತ ಟೂರ್ನಿಯಲ್ಲಿ ಸೋಲರಿಯದ ಅಜೇಯ ತಂಡವಾಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.
 ಕೊನೆಯ ಎಸೆತದಲ್ಲಿ ಗೆಲುವಿಗೆ 2 ರನ್‌ಗಳ ಆವಶ್ಯಕತೆ ಇತ್ತು. ಹಂಗಾಮಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಅಗತ್ಯದ ರನ್ ದಾಖಲಿಸಿ ಭಾರತವನ್ನು ಗೆಲುವಿನ ದಡ ಸೇರಿಸಿದರು. ಅವರು ಔಟಾಗದೆ 41 ರನ್(74ನಿ, 41ಎ, 2ಬೌ,1ಸಿ) ಗಳಿಸಿದರು.
 ತಂಡದ ಪರ ಆಲ್‌ರೌಂಡ್ ಪ್ರದರ್ಶನ ನೀಡಿದ ದೀಪ್ತಿ ಶರ್ಮ ಪಂದ್ಯಶ್ರೇಷ್ಠ ಮತ್ತು ದಕ್ಷಿಣ ಆಫ್ರಿಕದ ಸುನೆ ಲೂಯಿಸ್ ಸರಣಿಶ್ರೇಷ್ಠ ಪುರಸ್ಕಾರಕ್ಕೆ ಭಾಜನರಾದರು.
 ಭಾರತ ಮೊದಲ ವಿಕೆಟ್‌ನ್ನು ಬೇಗನೆ ಕಳೆದುಕೊಂಡಿತ್ತು. ಆರಂಭಿಕ ಆಟಗಾರ್ತಿ ತಿರುಶಿ ಕಾಮಿನಿ 10 ರನ್ ಗಳಿಸಿ ಔಟಾದರು. ಎರಡನೆ ವಿಕೆಟ್‌ಗೆ ಮೊನಾ ಮೆಶ್ರಮ್ ಮತ್ತು ದೀಪ್ತಿ ಶರ್ಮ 124 ರನ್‌ಗಳ ಜೊತೆಯಾಟ ನೀಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಶರ್ಮ 99 ನಿಮಿಷಗಳ ಬ್ಯಾಟಿಂಗ್‌ನಲ್ಲಿ 89 ಎಸೆತಗಳನ್ನು ಎದುರಿಸಿದರು. 8 ಬೌಂಡರಿಗಳ ಸಹಾಯದಿಂದ 71 ರನ್ ಸೇರಿಸಿ ನಿರ್ಗಮಿಸಿದರು.
ಮೆಶ್ರಮ್ 59 ರನ್ (139ನಿ, 82ಎ, 7ಬೌ,1ಸಿ) ಗಳಿಸಿದರು. ಇವರು ಔಟಾದ ಬಳಿಕ ಹಂಗಾಮಿ ನಾಯಕಿ ಕೌರ್ ಕ್ರೀಸ್‌ಗೆ ಆಗಮಿಸಿದರು. ಕೌರ್ ಮತ್ತು ವೇದಾ ಕೃಷ್ಣಮೂರ್ತಿ 4ನೆ ವಿಕೆಟ್‌ಗೆ 38 ರನ್ ಸೇರಿಸಿದರು. ಕೃಷ್ಣ ಮೂರ್ತಿ 31 ರನ್ ಗಳಿಸಿ ಔಟಾದರು.
 ಅಗ್ರ ಸರದಿಯ ಆಟಗಾರ್ತಿ ವೇದಾ ಕೃಷ್ಣ ಮೂರ್ತಿ ಔಟಾದ ಬಳಿಕ ತಂಡದ ಕುಸಿತದ ಹಾದಿ ಹಿಡಿಯಿತು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ, ಇನ್ನೊಂದು ತುದಿಯಲ್ಲಿ ಕೌರ್ ಕ್ರೀಸ್‌ಗೆ ಅಂಟಿಕೊಂಡು ಬ್ಯಾಟಿಂಗ್ ನಡೆಸಿದರು.
  ಭಾರತ ಅಂತಿಮ 6 ಓವರ್‌ಗಳಲ್ಲಿ 36 ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿತ್ತು. ಮಧ್ಯಮ ವೇಗಿ ಅಯಬೊಂಗ ಖಾಕ ಬೇಗನೆ ಎರಡು ವಿಕೆಟ್‌ಗಳನ್ನು ಉರುಳಿಸಿ ಭಾರತವನ್ನು ಒತ್ತಡಕ್ಕೆ ಸಿಲುಕಿಸಿದರು. ಭಾರತ 49.1 ಓವರ್‌ನಲ್ಲಿ 9 ವಿಕೆಟ್ ನಷ್ಟದಲ್ಲಿ 237 ರನ್ ಗಳಿಸಿದ್ದ ಭಾರತ ಗೆಲುವಿನ ಹಾದಿಯಲ್ಲಿ ಮುಗ್ಗರಿಸುವ ಸಾಧ್ಯತೆ ಇತ್ತು.ಲೆಟ್‌ಸೊಲೊ ಅವರ ಮೊದಲ ಎಸೆತದಲ್ಲಿ ಪೂನಮ್ ಯಾದವ್ ರನೌಟಾದಾಗ ಕೌರ್ ಒತ್ತಡಕ್ಕೆ ಸಿಲುಕಲಿಲ್ಲ. ಉಳಿದ ಮೂರು ಎಸೆತಗಳಲ್ಲಿ ರನ್ ಗಳಿಸುವ ಗೋಜಿಗೆ ಹೋಗದೆ ಎಚ್ಚರಿಕೆಯಿಂದ ಆಡಿದ ಕೌರ್ ಕೊನೆಯ ಎರಡು ಎಸೆತಗಳಲ್ಲಿ 1 ಸಿಕ್ಸರ್ ಇರುವ 8 ರನ್ ಕಬಳಿಸಿ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿದರು. ಭಾರತವನ್ನು ಗೆಲುವಿನ ದಡ ಸೇರಿಸಿದರು.
ಹರ್ಮನ್‌ಪ್ರೀತ್ ಕೌರ್ ಆಸ್ಟ್ರೇಲಿಯದಲ್ಲಿ ಮಹಿಳೆಯರ ಬಿಗ್ ಬ್ಯಾಶ್ ಲೀಗ್(ಬಿಬಿಎಲ್)ನಲ್ಲಿ ಆಡಿದ್ದರು. ಒತ್ತಡದ ಪರಿಸ್ಥಿತಿಯಲ್ಲಿ ಯಾವ ರೀತಿಯಲ್ಲಿ ಆಡಬೇಕೆನ್ನುವುದನ್ನು ಚೆನ್ನಾಗಿ ಅರಿತುಕೊಂಡಿದ್ದರು. ಅವರು ಗಳಿಸಿದ ಅನುಭವ ನೆರವಿಗೆ ಬಂತು. ದಕ್ಷಿಣ ಆಫ್ರಿಕದ ಮರಿಝನ್ನೆ ಕಪ್ಪ್ 36ಕ್ಕೆ 2 ಮತ್ತು ಖಾಕ 55ಕ್ಕೆ 2 ವಿಕೆಟ್ ಪಡೆದರು. ಟಾಸ್ ಜಯಿಸಿದ ದಕ್ಷಿಣ ಆಫ್ರಿಕ ಬ್ಯಾಟಿಂಗ್ ಆಯ್ದುಕೊಂಡಿತ್ತು. ಭಾರತದ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್‌ವಾಡ್ (51ಕ್ಕೆ 3), ಮಧ್ಯಮ ವೇಗಿ ಶಿಖಾ ಪಾಂಡೆ (41ಕ್ಕೆ 2) , ಎಕ್ತಾ ಬಿಸ್ತ್ (39ಕ್ಕೆ 1), ಪೂನಮ್ ಯಾದವ್ (37ಕ್ಕೆ 1) ಮತ್ತು ದೀಪ್ತಿ ಶರ್ಮ(46ಕ್ಕೆ 1) ದಾಳಿಗೆ ಸಿಲುಕಿದ ದಕ್ಷಿಣ ಆಫ್ರಿಕ 49.4 ಓವರ್‌ಗಳಲ್ಲಿ 244 ರನ್‌ಗಳಿಗೆ ಆಲೌಟಾಗಿತ್ತು.

 ದಕ್ಷಿಣ ಆಫ್ರಿಕದ ಮಿಗ್ನಾನ್ ಡು ಪ್ರೀಝ್ (40), ಲಿಝ್ಲೆ ಲೀ (37), ನಾಯಕಿ ಡ್ಯಾನೆ ವ್ಯಾನ್ ನಿಯೆಕ್ರೆಕ್ (37), ಮತ್ತು ಸುನೆ ಲೂಯಿಸ್ (35) ಎರಡಂಕೆಯ ಕೊಡುಗೆ ನೀಡಿದರು.
ಸಂಕ್ಷಿಪ್ತ ಸ್ಕೋರ್ ವಿವರ
     ದಕ್ಷಿಣ ಆಫ್ರಿಕದ ಮಹಿಳೆಯರ ತಂಡ 49.4 ಓವರ್‌ಗಳಲ್ಲಿ ಆಲೌಟ್ 244 ( ಪ್ರೀಝ್ 40, ಲಿಝ್ಲೆ ಲೀ 37, ನಿಯೆಕ್ರೆಕ್ 37, ಸುನೆ ಲೂಯಿಸ್ 35; ಗಾಯಕ್‌ವಾಡ್ 51ಕ್ಕೆ 3, ಪಾಂಡೆ 41ಕ್ಕೆ 2).
   ಭಾರತದ ಮಹಿಳೆಯರ ತಂಡ 50 ಓವರ್‌ಗಳಲ್ಲಿ 245/9( ದೀಪ್ತಿ 71, ಮೆಶ್ರಮ್ 59, ಕೌರ್ ಔಟಾಗದೆ 41; ಮರಿಝನ್ನೆ 36ಕ್ಕೆ 2 , ಖಾಕ 55ಕ್ಕೆ 2)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X