Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಪೊಲೀಸರು ಮಲ ತಿನ್ನಿಸಿದರು, ಖಾಲಿ...

‘‘ಪೊಲೀಸರು ಮಲ ತಿನ್ನಿಸಿದರು, ಖಾಲಿ ಕಾಗದಗಳಿಗೆ ಸಹಿ ಮಾಡಿಸಿದರು’’

2005 ದಿಲ್ಲಿ ಸ್ಪೋಟದಲ್ಲಿ 12 ವರ್ಷಗಳ ಬಳಿಕ ದೋಷಮುಕ್ತ ಮೊಹಮ್ಮದ್ ಹುಸೇನ್ ಫಾಝಿಲಿ

ವಾರ್ತಾಭಾರತಿವಾರ್ತಾಭಾರತಿ22 Feb 2017 1:47 PM IST
share
‘‘ಪೊಲೀಸರು ಮಲ ತಿನ್ನಿಸಿದರು, ಖಾಲಿ ಕಾಗದಗಳಿಗೆ ಸಹಿ ಮಾಡಿಸಿದರು’’

ಶ್ರೀನಗರ, ಫೆ.22: ‘‘ಪೊಲೀಸರು ನಮ್ಮ ಬಾಯಿಗೆ ಮಲ ತುರುಕಿಸಿ, ನಂತರ ರೋಟಿ ಹಾಗೂ ನೀರನ್ನು ನೀಡಿ ನಾವು ಅದನ್ನು ನುಂಗುವಂತೆ ಮಾಡಿದ್ದರು’’ ಎಂದು ತಾವು 50 ದಿನಗಳ ಕಾಲ ಪೊಲೀಸ್ ರಿಮಾಂಡಿನಲ್ಲಿದ್ದಾಗಿನ ಭಯಾನಕ ಅನುಭವವನ್ನು ಸುರುಳಿಸುರುಳಿಯಾಗಿ ಬಿಚ್ಚಿಡುತ್ತಾರೆ 42 ವರ್ಷದ ಮುಹಮ್ಮದ್ ಹುಸೈನ್ ಫಾಝಿಲಿ.

2005ರ ದಿಲ್ಲಿ ಸ್ಫೋಟದಲ್ಲಿ ಆರೋಪಿಯಾಗಿ ಬಂಧಿಸಲ್ಪಟ್ಟಿದ್ದ ಅವರು 12 ವರ್ಷಗಳ ಜೈಲುವಾಸದ ಬಳಿಕ ಕಳೆದ ಶನಿವಾರ ಶ್ರೀನಗರದಲ್ಲಿರುವ ತಮ್ಮ ಮನೆಗೆ ಮರಳಿದ್ದಾರೆ. ಫಾಝಿಲ್ ಹಾಗೂ ಈ ಪ್ರಕರಣದ ಇನ್ನೊಬ್ಬ ಆರೋಪಿ ಮುಹಮ್ಮದ್ ರಫೀಕ್ ಶಾಹ್ ಕಳೆದ ವಾರವಷ್ಟೇ ದಿಲ್ಲಿ ಕೋರ್ಟಿನಿಂದ ದೋಷಮುಕ್ತಗೊಂಡಿದ್ದರು. ತಪ್ಪು ಮಾಡಿದ್ದೇವೆಂದು ಒಪ್ಪಿಕೊಳ್ಳುವ ಸಲುವಾಗಿ ಪೊಲೀಸರು ತಮ್ಮನ್ನು ಸರ್ವ ವಿಧದಲ್ಲೂ ಹಿಂಸಿಸಿದ್ದರು ಎಂದು ಅವರು ವಿವರಿಸುತ್ತಾರೆ.

‘‘ನಮ್ಮ 50 ದಿನಗಳ ಕಾಲದ ಯಾತನೆ ತಮ್ಮನ್ನು ತಿಹಾರ್ ಜೈಲಿಗೆ ಸೇರಿಸಿದ ನಂತರ ಅಂತ್ಯಗೊಂಡಿತು. ನಂತರ ನಮ್ಮನ್ನು ಯಾರೂ ಹಿಂಸಿಸದೇ ಇದ್ದರೂ ಜೈಲಿನಲ್ಲಿರುವ ಇತರ ಕೈದಿಗಳಿಂದ ಹಲ್ಲೆಗೊಳಗಾಗುವ ಭಯವಿತ್ತು’’ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿರುವ ವೇಳೆ ಪೊಲೀಸರು ತಮ್ಮಿಂದ ಸುಮಾರು 200 ಖಾಲಿ ಹಾಳೆಗಳಿಗೆ ಬಲವಂತವಾಗಿ ಸಹಿ ಹಾಕಿಸಿದ್ದರು ಎಂದು ಹೇಳಿದ ಅವರು, ‘‘ನಾವು ನಿರ್ದೋಷಿಗಳು ಎಂದು ತಮಗೆ ತಿಳಿದಿದೆಯೆಂದು ಹೇಳುತ್ತಿದ್ದ ಪೊಲೀಸರು ನಮ್ಮನ್ನು ದೋಷಿಗಳನ್ನಾಗಿಸಲು ಅವರ ಬಳಿ ನೂರು ವಿಧಗಳಿತ್ತು ಎಂದು ಹೇಳಿಕೊಳ್ಳುತ್ತಿದ್ದರು’’ ಎಂದು ನೆನಪಿಸಿಕೊಂಡಿದ್ದಾರೆ.

ಇನ್ನೊಂದು ಪೊಲೀಸ್ ಹಿಂಸೆಯ ಘಟನೆಯ ಬಗ್ಗೆ ಹೇಳಿದ ಅವರು, ‘‘ಪೊಲೀಸರು ಲೋಧಿ ಕಾಲನಿ ಠಾಣೆಯಲ್ಲಿ ಬೆಂಚೊಂದರಲ್ಲಿ ನನ್ನನ್ನು ಮಲಗಿಸಿದ್ದರು. ನಂತರ ಇಬ್ಬರು ನನ್ನ ಕಾಲು ಹಾಗೂ ಹೊಟ್ಟೆಯ ಮೇಲೆ ನಡೆದರು. ಇನ್ನೊಬ್ಬ ಡಿಟರ್ಜೆಂಟ್ ಹಾಕಲ್ಪಟ್ಟ ನೀರನ್ನು ನನಗೆ ಬಲವಂತವಾಗಿ ಕುಡಿಸಿದ್ದ’’ ಎಂದು ಹೇಳುತ್ತಾರೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸುವಾಗ ಸತ್ಯವೇನಾದರೂ ಹೇಳಿದರೆ ಇದಕ್ಕಿಂತಲೂ ಹೆಚ್ಚಿನ ಹಿಂಸೆ ನೀಡುವುದಾಗಿಯೂ ಬೆದರಿಸಿದ್ದರು ಎಂದು ವೃತ್ತಿಯಲ್ಲಿ ಶಾಲುಗಳನ್ನು ನೇಯುವವರಾದ ಫಾಝಿಲಿ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X