Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಪಾಕ್ ಭಯೋತ್ಪಾದಕ ದೇಶ' ಘೋಷಣೆಗೆ ಮೋದಿ...

'ಪಾಕ್ ಭಯೋತ್ಪಾದಕ ದೇಶ' ಘೋಷಣೆಗೆ ಮೋದಿ ಸರ್ಕಾರದ ವಿರೋಧ

ವಾರ್ತಾಭಾರತಿವಾರ್ತಾಭಾರತಿ22 Feb 2017 4:36 PM IST
share
ಪಾಕ್ ಭಯೋತ್ಪಾದಕ ದೇಶ ಘೋಷಣೆಗೆ ಮೋದಿ ಸರ್ಕಾರದ ವಿರೋಧ

ಹೊಸದಿಲ್ಲಿ,ಫೆ.22: ಪಾಕಿಸ್ತಾನದಂತಹ ದೇಶಗಳನ್ನು ಭಯೋತ್ಪಾದಕ ರಾಷ್ಟ್ರಗಳೆಂದು ಘೋಷಿಸಬೇಕು ಎಂದು ಕೋರಿ ಪಕ್ಷೇತರ ಸದಸ್ಯ ರಾಜೀವ ಚಂದ್ರಶೇಖರ ಅವರು ಇತ್ತೀಚಿಗೆ ಮಂಡಿಸಿರುವ ಮಸೂದೆಯನ್ನು ಕೇಂದ್ರವು ವಿರೋಧಿಸಲಿದೆ.

ಚಂದ್ರಶೇಖರ ಅವರು ಮಂಡಿಸಿರುವ,ಭೀತಿವಾದವನ್ನು ಉತ್ತೇಜಿಸುವ ರಾಷ್ಟ್ರಗಳ ನಾಗರಿಕರ ಮೇಲೆ ಕಾನೂನಾತ್ಮಕ,ಆರ್ಥಿಕ ಮತ್ತು ಪ್ರವಾಸ ನಿರ್ಬಂಧಗಳನ್ನು ಹೇರಲು ‘ಭೀತಿವಾದ ಪ್ರಾಯೋಜಕ ಮಸೂದೆ,2016 ’ಅನ್ನು ಫೆ.3ರಂದು ಚರ್ಚೆಗೆತ್ತಿಕೊಳ್ಳಲಾಗಿತ್ತು.

  ಈ ಮಸೂದೆಯು ಜಿನೆವಾ ನಿರ್ಣಯದಡಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಹದಗೆಡಿಸುವುದರಿಂದ ತಾನು ಅದನ್ನು ವಿರೋಧಿಸುತ್ತೇನೆ ಎಂದು ಗೃಹ ಸಚಿವಾಲಯವು ಸಂಸತ್ ಸಚಿವಾಲಯಕ್ಕೆ ಪತ್ರವನ್ನು ಬರೆದಿದೆ.

 ನೆರೆಯ ದೇಶದೊಂದಿಗೆ ನಾವು ರಾಜತಾಂತ್ರಿಕ ಸಂಬಂಧವನ್ನು ಹೊಂದಿದ್ದು, ರಾಯಭಾರಿ ಕಚೇರಿಗಳು ಮತ್ತು ವ್ಯಾಪಾರ ಬಾಂಧವ್ಯಗಳು ಇದರಲ್ಲಿ ಸೇರಿವೆ. ಭಾರತವು ಅಂತರರಾಷ್ಟ್ರೀಯ ನಿಯಮಗಳಿಗೆ ಬದ್ಧವಾಗಿರುವುದರಿಂದ ಯಾವುದೇ ದೇಶವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸುವುದು ಬುದ್ಧಿವಂತಿಕೆಯಲ್ಲ ಎಂದು ಹಿರಿಯ ಸರಕಾರಿ ಅಧಿಕಾರಿಯೋರ್ವರು ಹೇಳಿದರು.

ಸಂಬಂಧ ಮುಂದುವರಿಕೆ

ಪಾಕಿಸ್ತಾನವು ಭಯೋತ್ಪಾದಕ ದಾಳಿಗಳನ್ನು ಪ್ರಚೋದಿಸುತ್ತಿದೆ ಎಂದು ಭಾರತವು ಆರೋಪಿಸಿದೆಯಾದರೂ ಕಾರ್ಗಿಲ್ ಯುದ್ಧ ಮತ್ತು ಆಪರೇಷನ್ ಪರಾಕ್ರಮ್‌ನಂತಹ ಸಂದರ್ಭಗಳಲ್ಲಿಯೂ ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳನ್ನು ಕಾಯ್ದುಕೊಂಡಿವೆ.

ಭಾರತವು ಕಳೆದ ವರ್ಷ ತಮ್ಮ ಮಕ್ಕಳನ್ನು ಪಾಕಿಸ್ತಾನದಲ್ಲಿಯ ಶಾಲೆಗಳಿಗೆ ಕಳುಹಿಸದಂತೆ ಮತ್ತು ಅವರನ್ನು ಸ್ವದೇಶಕ್ಕೆ ವಾಪಸ್ ಕಳುಹಿಸುವಂತೆ ಅಲ್ಲಿಯ ತನ್ನ ರಾಯಭಾರಿ ಕಚೇರಿಯಲ್ಲಿನ ಅಧಿಕಾರಿಗಳಿಗೆ ಸೂಚಿಸಿತ್ತು.

ದಶಕಗಳಿಂದಲೂ ಭಾರತ ಮತ್ತು ಪ್ರದೇಶದಲ್ಲಿಯ ಇತರ ರಾಷ್ಟ್ರಗಳು ಪಾಕಿಸ್ತಾನ ಮೂಲದ ಗುಂಪುಗಳ ಭಯೋತ್ಪಾದಕ ದಾಳಿಗಳಿಗೆ ಬಲಿಪಶುಗಳಾಗುತ್ತಿವೆ. ಆದರೂ ಪಾಕಿಸ್ತಾನವನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವಾಗಿ ನಾವು ದಶಕಗಳಿಂದಲೂ ಅದರೊಂದಿಗೆ ಸಂಬಂಧವನ್ನು ಮುಂದುವರಿಸಿದ್ದೇವೆ. ಪಾಕಿಸ್ತಾನವು ಸುದೀರ್ಘ ಸಮಯದಿಂದಲೂ ಭೀತಿವಾದವನ್ನು ಮತ್ತು ಭಯೋತ್ಪಾದಕರನ್ನು ಪೋಷಿಸುತ್ತಿದೆ ಎನ್ನುವುದು ನಿರ್ವಿವಾದವಾಗಿದೆ. ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸುವಂತೆ ಇತರ ರಾಷ್ಟ್ರಗಳಿಗೆ ದುಂಬಾಲು ಬೀಳುವುದನ್ನು ಬಿಟ್ಟು ನಾವೇ ಈ ಕೆಲಸ ಮಾಡುವ ಕಾಲವೀಗ ಬಂದಿದೆ ಎಂದು ಮಸೂದೆ ಮಂಡನೆ ಸಂದರ್ಭ ಚಂದ್ರಶೇಖರ್ ಹೇಳಿದ್ದರು.

ಖಾಸಗಿ ಸದಸ್ಯರು ಮಂಡಿಸುವ ಮಸೂದೆ ಸದನ ಸಮಿತಿಯಿಂದ ಪರಿಶೀಲಿಸಲ್ಪಟ್ಟು ಬಹುಮತದಿಂದ ಅಂಗೀಕಾರಗೊಂಡರೆ ಅದನ್ನು ಶಾಸನವನ್ನಾಗಿ ಜಾರಿಗೊಳಿಸಬಹುದು. ಸಂಸತ್ ಅಧಿವೇಶನ ಮಾ,9ರಂದು ಪುನರಾರಂಭಗೊಳ್ಳಲಿದ್ದು, ಚಂದ್ರಶೇಖರ ಅವರ ಮಸೂದೆಯು ಪುನಃ ಚರ್ಚೆಗೆ ಬರುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X