Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಪಾಳು ಬಾವಿಯಲ್ಲಿದ್ದ ಜೋಡಿ...

ಉಡುಪಿ: ಪಾಳು ಬಾವಿಯಲ್ಲಿದ್ದ ಜೋಡಿ ಹೆಬ್ಬಾವಿನ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ22 Feb 2017 9:15 PM IST
share
ಉಡುಪಿ: ಪಾಳು ಬಾವಿಯಲ್ಲಿದ್ದ ಜೋಡಿ ಹೆಬ್ಬಾವಿನ ರಕ್ಷಣೆ

ಉಡುಪಿ, ಫೆ.22: ಎರಡು ತಿಂಗಳ ಹಿಂದೆ ಉಪ್ಪೂರು ಗ್ರಾಮದ ಅಮ್ಮುಂಜೆ ಎಂಬಲ್ಲಿರುವ ಪಾಳು ಬಾವಿಯೊಂದಕ್ಕೆ ಬಿದ್ದು ಆಹಾರವಿಲ್ಲದೆ ದುರ್ಬಲಗೊಂಡಿದ್ದ ಜೋಡಿ ಹೆಬ್ಬಾವುಗಳನ್ನು ಉರಗ ತಜ್ಞ ಗುರುರಾಜ್ ಸನಿಲ್ ನೇತೃತ್ವದಲ್ಲಿ ಬುಧವಾರ ರಕ್ಷಿಸಲಾಯಿತು.

ಅಮ್ಮುಂಜೆಯ ಹಾಡಿಯಲ್ಲಿ ಆವರಣ ಹಾಗೂ ನೀರಿಲ್ಲದ ಪಾಳು ಬಾವಿ ಯಲ್ಲಿ ಎರಡು ಹೆಬ್ಬಾವು ಇರುವುದನ್ನು ಸ್ಥಳೀಯರು ಎರಡು ತಿಂಗಳ ಹಿಂದೆ ನೋಡಿದ್ದರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದರೂ ಅದನ್ನು ರಕ್ಷಿಸುವ ಯಾವುದೇ ಪ್ರಯತ್ನಗಳು ನಡೆದಿರಲಿಲ್ಲ.

ಇತ್ತೀಚೆಗೆ ಸ್ಥಳೀಯರು ಈ ವಿಚಾರದ ಕುರಿತು ಸಮಾಜ ಸೇವಕ ನಿತ್ಯಾ ನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ಅವರು ಇದನ್ನು ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ತಿಳಿಸಿ ಬಾವಿಯಲ್ಲಿರುವ ಹೆಬ್ಬಾವುಗಳನ್ನು ರಕ್ಷಿಸಲು ಮುಂದಾದರು. ಅದರಂತೆ ಗುರುರಾಜ್ ಸನಿಲ್, ನಿತ್ಯಾನಂದ ಒಳಕಾಡು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬುಧವಾರ ಬೆಳಗ್ಗೆ 11:30ಕ್ಕೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಗಿಳಿದರು.

ಏಣಿ ಮೂಲಕ ಬಾವಿಗೆ ಇಳಿದ ಗುರುರಾಜ್ ಸನಿಲ್ ಬಾವಿಯಲ್ಲಿದ್ದ ಹೆಣ್ಣು ಹೆಬ್ಬಾವವನ್ನು ಮೊದಲು ರಕ್ಷಿಸಿ ಮೇಲಕ್ಕೆ ತಂದರು. ನಂತರ ಗಂಡು ಹೆಬ್ಬಾವಿಗಾಗಿ ಹುಡುಕಾಟ ನಡೆಸಲಾಯಿತು. ಬಾವಿಯಲ್ಲಿನ ಬಿಲದೊಳಗೆ ಅವಿತಿದ್ದ ಗಂಡು ಹೆಬ್ಬಾವವನ್ನು ಹೊರಗೆ ತರಲು ಹರ ಸಾಹಸ ಪಡಬೇಕಾ ಯಿತು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಿಲವನ್ನು ಅಗೆದು ಹೆಬ್ಬಾವು ರಕ್ಷಿಸಲು ಸಹಕರಿಸಿದರು.
 
ಸತತ ಶ್ರಮದಿಂದ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಗಂಡು ಹೆಬ್ಬಾವನ್ನೂ ರಕ್ಷಿಸಿ ಮೇಲಕ್ಕೆ ತರಲಾಯಿತು. ಇವುಗಳನ್ನು ನೋಡಲು ಸ್ಥಳೀಯರು ಕುತೂಹಲದಿಂದ ಸ್ಥಳದಲ್ಲಿ ಜಮಾಯಿಸಿದ್ದರು. ಹೆಣ್ಣು 10 ಅಡಿ ಉದ್ದವಿದ್ದರೆ, ಗಂಡು ಸುಮಾರು ಎಂಟು ಅಡಿ ಉದ್ದವಿತ್ತು. ಬಳಿಕ ಈ ಎರಡು ಹೆಬ್ಬಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಯಿತು. 

ಡಿಸೆಂಬರ್ ತಿಂಗಳು ಹೆಬ್ಬಾವುಗಳ ಮಿಲನದ ಸಮಯ. ಮಿಲನಕ್ಕಾಗಿ ಹೆಣ್ಣು ಹೆಬ್ಬಾವನ್ನು ಅರಸಿಕೊಂಡು ಬಂದ ಗಂಡು ಹೆಬ್ಬಾವು ಆಯ ತಪ್ಪಿ ಆವರಣ ಇಲ್ಲದ ಬಾವಿಗೆ ಬಿದ್ದಿದೆ. ಇದೀಗ ಎರಡು ಹೆಬ್ಬಾವನ್ನು ರಕ್ಷಿಸ ಲಾಗಿದೆ. ಇನ್ನು ಹೆಣ್ಣು ಹಾವು ಮಾರ್ಚ್ ತಿಂಗಳಲ್ಲಿ ಮೊಟ್ಟೆ ಇಡುತ್ತದೆ. ಎರಡು ತಿಂಗಳ ಕಾಲ ಸರಿಯಾದ ಆಹಾರ ಇಲ್ಲದೆ ಹೆಣ್ಣು ಹೆಬ್ಬಾವು ತೀರಾ ದುರ್ಬಲಗೊಂಡಿದೆ. ಈ ಹೆಬ್ಬಾವುಗಳನ್ನು ನೀರು ಇರುವ ಪ್ರದೇಶದಲ್ಲಿ ಬಿಟ್ಟರೆ ಅದೇ ಆಹಾರವನ್ನು ಹುಡುಕಿಕೊಳ್ಳುತ್ತದೆ
-ಗುರುರಾಜ ಸನಿಲ್, ಉರಗ ತಜ್ಞ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X