Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಹೈಕಮಾಂಡ್‌ಗೆ ಚೆಕ್ ಮೂಲಕ ಹಣ :...

ಬಿಜೆಪಿ ಹೈಕಮಾಂಡ್‌ಗೆ ಚೆಕ್ ಮೂಲಕ ಹಣ : ‘ನರೇಂದ್ರಮೋದಿ ಕ್ರಮ ಕೈಗೊಳ್ಳುತ್ತಾರಾ’ ಎಚ್‌ಡಿಕೆ ಸವಾಲು

ವಾರ್ತಾಭಾರತಿವಾರ್ತಾಭಾರತಿ22 Feb 2017 9:59 PM IST
share
ಬಿಜೆಪಿ ಹೈಕಮಾಂಡ್‌ಗೆ ಚೆಕ್ ಮೂಲಕ ಹಣ : ‘ನರೇಂದ್ರಮೋದಿ ಕ್ರಮ ಕೈಗೊಳ್ಳುತ್ತಾರಾ’ ಎಚ್‌ಡಿಕೆ ಸವಾಲು

ಬೆಂಗಳೂರು, ಫೆ.22: ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಬಿಜೆಪಿ ಹೈಕಮಾಂಡ್‌ಗೆ ಚೆಕ್ ಮೂಲಕ ಹಣ ನೀಡಿರುವ ದಾಖಲೆಗಳಿವೆ. ಅದನ್ನು ಬಿಡುಗಡೆ ಮಾಡಿದರೆ ಪ್ರಧಾನಿ ನರೇಂದ್ರಮೋದಿ ಕ್ರಮ ಕೈಗೊಳ್ಳುತ್ತಾರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಬುಧವಾರ ನಗರದ ಆದಿಚುಂಚನಗಿರಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್‌ಗೆ ಚೆಕ್ ಮೂಲಕ ಹಣ ಪಾವತಿ ಮಾಡಿರುವ ಕುರಿತು ದಾಖಲೆಗಳಿದ್ದರೆ ಬಿಡುಗಡೆ ಮಾಡುವಂತೆ ಯಡಿಯೂರಪ್ಪ ಹೇಳಿದ್ದಾರೆ. ನಾನು ದಾಖಲೆಗಳನ್ನು ಬಿಡುಗಡೆ ಮಾಡಲು ಸಿದ್ಧ. ಆದರೆ, ಕ್ರಮ ಕೈಗೊಳ್ಳುವವರು ಯಾರೂ ಎಂದು ಪ್ರಶ್ನಿಸಿದರು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಯಡಿಯೂರಪ್ಪ ಸಾರ್ವಜನಿಕವಾಗಿ ಹೇಳಿಕೆ ನೀಡಲಿ, ನಾನು ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರಮೋದಿಗೆ ಹೇಳುವ ತಾಕತ್ತು ಇದೆಯೆ ಅವರಿಗೆ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ನಾನು ಯಡಿಯೂರಪ್ಪ ಅವರಂತೆ ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಒಂದು ಡೈರಿಯ ವಿಚಾರವನ್ನು ಮುಂದಿಟ್ಟುಕೊಂಡು ಮಾತನಾಡುವುದಿಲ್ಲ. ಚೆಕ್‌ಮೂಲಕ ಹಣ ಪಡೆದಿರುವ ಪ್ರಕರಣಗಳೆ ನ್ಯಾಯಾಲಯದಲ್ಲಿ ನಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್‌ಕುಮಾರ್ ನಡುವೆ ನಡೆದಿರುವ ಹಣ ಪಾವತಿ ಕುರಿತ ಸಂಭಾಷಣೆಯ ಸಿಡಿಯನ್ನು ಕಾಂಗ್ರೆಸ್‌ನವರೆ ಬಿಡುಗಡೆ ಮಾಡಿದ್ದು, ಎಲ್ಲ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ ಎಂದು ಅವರು ಹೇಳಿದರು.

ಆದಾಯ ತೆರಿಗೆ ದಾಳಿ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುವುದು ಸಾಮಾನ್ಯ ಪ್ರಕ್ರಿಯೆ. ಯಾರ ಮೇಲಾದರೂ ಆದಾಯ ತೆರಿಗೆ ದಾಳಿ ನಡೆದಿದೆ ಎಂದರೆ, ಅದು ಮಹಾ ಅಪರಾಧವೇನಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

ಅಕ್ರಮ ಆಸ್ತಿ, ಆದಾಯಕ್ಕಿಂತ ಮೀರಿದ ಸಂಪತ್ತು ಕ್ರೋಢಿಕರಣ ಆಗಿರುವ ಕುರಿತು ಮಾಹಿತಿ, ಅನುಮಾನ ಲಭ್ಯವಾದರೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸು ತ್ತಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿಪಾಸ್ತಿಯಿದ್ದರೆ ನೋಟಿಸ್ ನೀಡಿ ವಿವರಣೆ ಯನ್ನು ಕೇಳುತ್ತಾರೆ. ಆದುದರಿಂದಲೆ, ನಾನು ಸಚಿವ ರಮೇಶ್‌ಜಾರಕಿಹೊಳಿ, ಶಾಸಕ ಎಂಟಿಬಿ ನಾಗರಾಜ್ ಮೇಲೆ ನಡೆದ ದಾಳಿಯ ಕುರಿತು ಯಾವುದೆ ಪ್ರತಿಕ್ರಿಯೆ ನೀಡಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ: ಕಾಂಗ್ರೆಸ್ ಪಕ್ಷದಿಂದ ಮೂರು ಅಲ್ಲ, ನೂರು ಜನ ಮುಖಂಡರನ್ನು ಸೇರಿಸಿಕೊಳ್ಳಲ್ಲಿ. ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಆಗಿದೆ ಎಂಬ ರೀತಿಯಲ್ಲಿ ವರ್ತಿಸುತ್ತಿರುವ ಬಿಜೆಪಿ ನಾಯಕರು, ಇನ್ನೇಕೆ ಅನ್ಯ ಪಕ್ಷಗಳ ಮುಖಂಡರ ನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಅವರ ಮನೆಬಾಗಿಲಿಗೆ ಹೋಗುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಪಾಂಡವರಿಗೆ ಅಭಿನಂದನೆ  : ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದು ಪಂಚ ಪಾಂಡವರಾದ ನಾವೇ ಎಂಬ ಜೆಡಿಎಸ್‌ನಿಂದ ಉಚ್ಛಾಟನೆಯಾಗಿರುವ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಮುಖ್ಯಮಂತ್ರಿ ಮಾಡಿದ್ದು ಅವರೆ, ಆದುದರಿಂದಲೆ, ಜನರಿಗೆ ಒಂದಷ್ಟು ಒಳ್ಳೆಯ ಕೆಲಸ ಮಾಡಲು ಸಾಧ್ಯವಾಯಿತು. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.


ಒಕ್ಕಲಿಗರ ಸಂಘದಲ್ಲಿ ಉಲ್ಬಣಗೊಂಡಿರುವ ಸಮಸ್ಯೆಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಾಯಕತ್ವ ಹಾಗೂ ಆದಿಚುಂಚನಗಿರಿ ಶ್ರೀಗಳ ಮಾರ್ಗ ದರ್ಶನದಲ್ಲಿ ಬಗೆಹರಿಸಲಾಗುವುದು. ಇನ್ನೊಂದು ವಾರದಲ್ಲಿ ಎಲ್ಲ ಸಮಸ್ಯೆಗಳು ಬಗೆಹರಿದು, ಸಂಘವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದೆ. ಸಂಘದ 35 ನಿರ್ದೇಶಕರು ಸ್ವಪ್ರತಿಷ್ಠೆ ಬಿಟ್ಟು, ಮುಂದುವರೆಯಬೇಕು.
-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X