Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಪಾದನೆ ಸುಳ್ಳಾದರೆ ರಾಜಕೀಯ ನಿವೃತ್ತಿ:...

ಆಪಾದನೆ ಸುಳ್ಳಾದರೆ ರಾಜಕೀಯ ನಿವೃತ್ತಿ: ಯಡಿಯೂರಪ್ಪ ಸವಾಲು

‘ರಾಜ್ಯದ ಜನತೆಗೆ ಸತ್ಯಾಂಶ ತಿಳಿಸಿ ರ‍್ಯಾಲಿ ಮಾಡಲಿ’

ವಾರ್ತಾಭಾರತಿವಾರ್ತಾಭಾರತಿ22 Feb 2017 10:04 PM IST
share
ಆಪಾದನೆ ಸುಳ್ಳಾದರೆ ರಾಜಕೀಯ ನಿವೃತ್ತಿ: ಯಡಿಯೂರಪ್ಪ ಸವಾಲು

ಕಲಬುರಗಿ, ಫೆ.22: ‘ಸತ್ಯಮೇವ ಜಯತೆ ರ್ಯಾಲಿ’ ನಡೆಸುವ ಮುನ್ನ ಗೋವಿಂದ ರಾಜು ಮನೆಯಲ್ಲಿ ಡೈರಿ ಸಿಕ್ಕಿರುವುದು ಹಾಗೂ ಅದರಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ನೀಡಿರುವ ಮಾಹಿತಿ ಇರುವುದು ಸತ್ಯವೆ ಅಥವಾ ಸುಳ್ಳೊ ಎಂಬುದನ್ನು ರಾಜ್ಯದ ಜನತೆಗೆ ಮೊದಲು ತಿಳಿಸಿ ಎಂದು ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರಿಗೆ ಈಗಲಾದರೂ ಸತ್ಯ ಗೊತ್ತಾಗಿ ರ್ಯಾಲಿ ನಡೆಸುತ್ತಿರುವುದು ಸ್ವಾಗತಾರ್ಹ. ಆದರೆ, ಅದಕ್ಕೂ ಮುಂಚಿತವಾಗಿ ಸಿಬಿಐ ದಾಳಿ ಸಂದರ್ಭದಲ್ಲಿ ಡೈರಿ ಸಿಕ್ಕಿರುವುದು, ಹೈಕಮಾಂಡ್‌ಗೆ ಕಪ್ಪ ನೀಡಿರುವ ಮಾಹಿತಿ ಇರುವುದು ಸತ್ಯವೆ ಅಥವಾ ಸುಳ್ಳೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.

ನಾನು ಮಾಡಿರುವ ಆಪಾದನೆ ಸುಳ್ಳಾಗಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಸವಾಲು ಹಾಕಿದ ಯಡಿಯೂರಪ್ಪ, ಸಂಸದರು ಪತ್ರ ಬರೆದು ದಾಳಿ ವೇಳೆ ಸಿಕ್ಕಿರುವ ಡೈರಿ ಬಗ್ಗೆ ಮಾಹಿತಿ ಕೇಳಿದರೆ, ಸಿಬಿಐನವರು ನೀಡುತ್ತಾರೆ. ರಾಜ್ಯದ ಕೆಲ ಸಂಸದರು ಸಿಬಿಐ ಮುಖ್ಯಸ್ಥರಿಗೆ ಬರೆದಿರುವ ಪತ್ರಗಳು ಇಲ್ಲಿವೆ ಎಂದು ಪ್ರದರ್ಶಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದುಬಾರಿ ಬೆಲೆಯ ವಜ್ರಖಚಿತ ಕೈಗಡಿಯಾರ, ಅರ್ಕಾವತಿ ಡಿ ನೋಟಿಫಿಕೇಷನ್ ಸೇರಿದಂತೆ ಅನೇಕ ಗುರುತರವಾದ ಆರೋಪಗಳನ್ನು ಜನ ಇನ್ನು ಮರೆತಿಲ್ಲ. ಸುಲಭವಾಗಿ ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಲು ತಾನು ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಯಾರು ತಪ್ಪು ಮಾಡಿದ್ದರೂ ಅದನ್ನು ಬಯಲಿಗೆಳೆಯಬೇಕಾದ್ದು ಮುಖ್ಯಮಂತ್ರಿಯಾದವರ ಕರ್ತವ್ಯ. ಬಿಜೆಪಿಯವರು ತಪ್ಪು ಮಾಡಿದ್ದರೆ ಅದನ್ನು ದಾಖಲೆ ಸಹಿತವಾಗಿ ಬಹಿರಂಗಪಡಿಸಲಿ ಎಂದು ಆಗ್ರಹಿಸಿದ ಅವರು, ನಾನು ಜವಾಬ್ದಾರಿ ಸ್ಥಾನದಲ್ಲಿದ್ದು, ಆಧಾರ ರಹಿತವಾದ ಆರೋಪಗಳನ್ನು ಮಾಡುವುದಿಲ್ಲ ಎಂದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತನ್ನ ವಿರುದ್ಧ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲೆಗಳಿದ್ದರೆ ಅದನ್ನು ಬಿಡುಗಡೆ ಮಾಡಲಿ ಎಂದ ಅವರು, ಬಿಬಿಎಂಪಿಗೆ ನಗರದ ಜನತೆ ನೀಡಿರುವ ತೆರಿಗೆಯ ಪಾಲು ಸಮಾರು 3 ಸಾವಿರ ಕೋಟಿ ರೂ.ಗಳಿಗೆ ಸಂಬಂಧಿಸಿದ ಸೂಕ್ತವಾದ ದಾಖಲಾತಿಗಳನ್ನು ನೀಡದೆ ಕಾಂಗ್ರೆಸ್ ಸರಕಾರ ಹಣವನ್ನು ಲೂಟಿ ಮಾಡಿದೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X