Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇತಿಹಾಸದ ಪುಟ ಸೇರಲಿರುವ ಐಎನ್‌ಎಸ್...

ಇತಿಹಾಸದ ಪುಟ ಸೇರಲಿರುವ ಐಎನ್‌ಎಸ್ ವಿರಾಟ್

ವಾರ್ತಾಭಾರತಿವಾರ್ತಾಭಾರತಿ22 Feb 2017 11:55 PM IST
share

ಮುಂಬೈ,ಫೆ.22: 350 ಕೆ.ಜಿ.ಅಕ್ಕಿ, 7,000 ಪರಾಠಾಗಳು, 200 ಕೆ.ಜಿ. ಮಟನ್, 80 ಕೆ.ಜಿ. ಬೇಳೆ ಮತ್ತು 300 ಕೆ.ಜಿ. ತರಕಾರಿಗಳು... ಇವು ಭಾರತದ ರಾಜಗಾಂಭೀರ್ಯದ ವಿಮಾನ ವಾಹಕ ನೌಕೆ ಐಎನ್‌ಎಸ್ ವಿರಾಟ್ ಸೇವೆಯಲ್ಲಿದ್ದಾಗ ಹಡಗಿನಲ್ಲಿ ಬಳಕೆಯಾಗುತ್ತಿದ್ದ ದೈನಂದಿನ ಅಡುಗೆ ಸಾಮಗ್ರಿಗಳು.

ಭಾರತದ ನೌಕಾಪಡೆಗೆ ಸೇರ್ಪಡೆಗೊಳ್ಳುವ ಮುನ್ನ ಐಎನ್‌ಎಸ್ ವಿರಾಟ್ ‘ಎಚ್‌ಎಂಎಸ್ ಹರ್ಮಿಸ್’ ಎಂಬ ತನ್ನ ಪೂರ್ವನಾಮದೊಡನೆ ಬ್ರಿಟನ್ನಿನ ರಾಯಲ್ ನೇವಿಯಲ್ಲಿ 27 ವರ್ಷಗಳ ಸೇವೆ ಸಲ್ಲಿಸಿತ್ತು ಮತ್ತು ಬ್ರಿಟಿಷ್ ಸಿಂಹಾಸನಕ್ಕೆ ಉತ್ತರಾಧಿಕಾರಿಯಾಗಿರುವ ಪ್ರಿನ್ಸ್ ಚಾರ್ಲ್ಸ್ ಅವರು ಈ ನೌಕೆಯಲ್ಲಿ ಸೇವೆ ಸಲ್ಲಿಸಿದ್ದರು. ದೇಶದ ಎರಡನೇ ಸೆಂಟಾರ್ ವರ್ಗದ ವಿಮಾನ ವಾಹಕ ನೌಕೆಯಾದ ಐಎನ್‌ಎಸ್ ವಿರಾಟ್ ಭಾರತೀಯ ನೌಕಾಪಡೆಯಲ್ಲಿ 29 ವರ್ಷಗಳ ಸೇವೆಯನ್ನು ಸಲ್ಲಿಸಿದೆ. ತನ್ಮೂಲಕ ಒಟ್ಟು 56ವರ್ಷಗಳ ಕಾಲ ಕಾರ್ಯನಿರತವಾಗಿದ್ದ ಈ ನೌಕೆ ಸೇವೆಯಲ್ಲಿರುವ ವಿಶ್ವದ ಅತ್ಯಂತ ಹಳೆಯ ಯುದ್ಧನೌಕೆ ಎಂಬ ಗಿನ್ನೆಸ್ ದಾಖಲೆಗೂ ಪಾತ್ರವಾಗಿದೆ.
ಆಪರೇಷನ್ ಜ್ಯುಪಿಟರ್, ಆಪರೇಷನ್ ಪರಾಕ್ರಮ್ ಮತ್ತು ಆಪರೇಷನ್ ವಿಜಯ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐಎನ್‌ಎಸ್ ವಿರಾಟ್ ಮಾರ್ಚ್ 6ರಂದು ನೌಕಾಪಡೆಯಲ್ಲಿ ತನ್ನ ಸೇವೆಗೆ ವಿದಾಯ ಹೇಳಲಿದೆ. ಈ ಸಂಬಂಧ ಮುಂಬೈನಲ್ಲಿ ನಡೆಯಲಿರುವ ಸಮಾರಂಭದ ಅಧ್ಯಕ್ಷತೆಯನ್ನು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಸುನೀಲ್ ಲಾಂಬಾ ಅವರು ವಹಿಸಲಿದ್ದಾರೆ.
226.5 ಮೀ. ಉದ್ದ ಮತ್ತು 48.78 ಮೀ. ಅಗಲ ಹೊಂದಿರುವ ಐಎನ್‌ಎಸ್ ವಿರಾಟ್‌ನಲ್ಲಿ 150 ಅಧಿಕಾರಿಗಳು ಮತ್ತು 1,500 ನಾವಿಕ ಸಿಬ್ಬಂದಿಯಿದ್ದಾರೆ. ಪುಟ್ಟ ನಗರದಂತಿರುವ ಈ ನೌಕೆ ಗ್ರಂಥಾಲಯ, ಜಿಮ್ನಾಷಿಯಂ, ಎಟಿಎಂ, ಟಿವಿ ಮತ್ತು ವೀಡಿಯೊ ಸ್ಟುಡಿಯೊ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಒಳಗೊಂಡಿದೆ.
ಎಲ್ಲ ತುರ್ತುಸ್ಥಿತಿಗಳಿಗೂ ಸ್ಪಂದಿಸಲು ಸುಸಜ್ಜಿತ ಆಸ್ಪತ್ರೆ ಮತ್ತು ದಂತ ಚಿಕಿತ್ಸಾ ಕೇಂದ್ರವೂ ನೌಕೆಯಲ್ಲಿದೆ. ಬ್ರಿಟಿಷ್ ನಿರ್ಮಿತ ಯುದ್ಧನೌಕೆಗಳು ಶಾಂತಿಕಾಲದಲ್ಲಿಯೂ ಸಹ ಅದರಲ್ಲಿರುವವರ ಅನುಕೂಲಕ್ಕಾಗಿ ಎಲ್ಲ ಸೌಲಭ್ಯಗಳೊಂದಿಗೆ ಸಜ್ಜಿತವಾಗಿರುತ್ತವೆ.
ನೌಕೆಯಲ್ಲಿರುವ ಲಾಂಡ್ರಿ ಪ್ರತಿ ದಿನ 800 ಜೋಡಿಗೂ ಅಧಿಕ ಸಮವಸ್ತ್ರಗಳನ್ನು ಒಗೆದು ಸ್ವಚ್ಛಗೊಳಿಸುತ್ತದೆ, ಟೇಲರಿಂಗ್ ಶಾಪ್ ಮತ್ತು ಕ್ಷೌರಕ್ಕಾಗಿ ಸಲೂನ್ ಕೂಡ ಇದೆ. ಭಾರತೀಯ ನೌಕಾಪಡೆಯ ಇತರ ಯಾವುದೇ ನೌಕೆಯಲ್ಲಿಲ್ಲದ, ತನ್ನ ಬ್ರಿಟಿಷ್ ಮೂಲವನ್ನು ನೆನಪಿಸುವ ಕ್ರೈಸ್ತರ ಕಿರು ಇಗರ್ಜಿ ‘ಚಾಪೆಲ್’ ಮತ್ತು ಸ್ಮಶಾನ ಐಎನ್‌ಎಸ್ ವಿರಾಟ್‌ನಲ್ಲಿವೆ.
ನೌಕೆಯ ಅಗ್ರತುದಿಯಲ್ಲಿ ಗರುಡ ಮತ್ತು ಐದು ಬಾಣಗಳ ಸಂಕೇತವಿದ್ದು, ಗರುಡ ವಾಯುಶಕ್ತಿಯನ್ನು ಸೂಚಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X