Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೂಲಿ ಕಾರ್ಮಿಕರ ನಕಲಿ ಎನ್‌ಕೌಂಟರ್:...

ಕೂಲಿ ಕಾರ್ಮಿಕರ ನಕಲಿ ಎನ್‌ಕೌಂಟರ್: ನಾಲ್ವರು ಪೊಲೀಸರಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ23 Feb 2017 9:07 AM IST
share
ಕೂಲಿ ಕಾರ್ಮಿಕರ ನಕಲಿ ಎನ್‌ಕೌಂಟರ್: ನಾಲ್ವರು ಪೊಲೀಸರಿಗೆ ಜೀವಾವಧಿ ಶಿಕ್ಷೆ

ಗಾಝಿಯಾಬಾದ್, ಫೆ.23: ನಕಲಿ ಎನ್‌ಕೌಂಟರ್‌ನಲ್ಲಿ ನಾಲ್ವರು ಕೂಲಿ ಕಾರ್ಮಿಕರನ್ನು ಕೊಂದ ಆರೋಪದಲ್ಲಿ ನಾಲ್ವರು ಪೊಲೀಸರಿಗೆ ಸಿಬಿಐ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

1996ರ ನವೆಂಬರ್ 8ರಂದು ದೀಪಾವಳಿಗೆ ನಾಲ್ಕು ದಿನ ಮುನ್ನ ಭೋಜ್‌ಪುರದ ಜಸ್ಬೀರ್ (23), ಜಲಾಲುದ್ದೀನ್ (17), ಅಶೋಕ್ (17) ಹಾಗೂ ಪ್ರವೇಶ್ (17) ಎಂಬ ನಾಲ್ವರು ಯುವಕರು ದೀಪಾವಳಿಗೆ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಪಿಲ್ಕ್ವಾನಾಗೆ ತೆರಳಿದ್ದರು. ಅವರು ಮನೆಗೆ ಮರಳುತ್ತಿದ್ದಾಗ, ಪೊಲೀಸ್ ಠಾಣೆ ಸಮೀಪದ ಮಕ್ಚಾರಿ ಚೌಕ್‌ನ ಚಹಾ ಅಂಗಡಿ ಬಳಿ ಅವರನ್ನು ತಡೆಯಲಾಯಿತು. ಕೆಲ ಗಂಟೆಗಳ ಬಳಿಕ ನಕಲಿ ಎನ್‌ಕೌಂಟರ್‌ನಲ್ಲಿ ಹಾಡಹಗಲೇ ಅವರನ್ನು ಹತ್ಯೆ ಮಾಡಲಾಯಿತು.

ಭೋಜ್‌ಪುರ ಠಾಣೆಯ ಮುಖ್ಯಸ್ಥ ಲಾಲ್‌ ಸಿಂಗ್, ಸಬ್ ಇನ್‌ಸ್ಪೆಕ್ಟರ್ ಜೋಗಿಂದರ್ ಸಿಂಗ್, ಪೇದೆಗಳಾದ ಸೂರ್ಯ ಭಾನ್ ಹಾಗೂ ಸುಭಾಶ್ಚಂದ್ ಅವರ ವಿರುದ್ಧ ಹತ್ಯೆ, ಸುಳ್ಳು ಪುರಾವೆ ಒದಗಿಸಿದ್ದು ಹಾಗೂ ಸಾಕ್ಷ್ಯ ನಾಶ ಮಾಡಿದ ಆರೋಪಕ್ಕಾಗಿ ಶಿಕ್ಷೆ ವಿಧಿಸಲಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಧೀಶ ರಾಜೇಶ್ ಚೌಧರಿ ಪ್ರಕಟಿಸಿದ್ದಾರೆ.

"ಕೊನೆಗೂ ನ್ಯಾಯ ದೊರಕಿದೆ. ಹತ್ಯೆಗೀಡಾದ ನಾಲ್ಕು ಮಂದಿಯ ವಿರುದ್ಧ ಯಾವ ಅಪರಾಧ ಕೃತ್ಯದ ದೂರು ಕೂಡಾ ಇರಲಿಲ್ಲ. ವಿನಾ ಕಾರಣ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಕ್ರೌರ್ಯಕ್ಕೆ ಕಾರಣರಾದವರನ್ನು ನ್ಯಾಯಾಲಯ ಶಿಕ್ಷಿಸಿದೆ. 20 ವರ್ಷಗಳಿಂದ ಸಂತ್ರಸ್ತರ ಕುಟುಂಬಗಳು ಅನುಭವಿಸುತ್ತಿದ್ದ ನರಳಿಕೆಗೆ ನ್ಯಾಯ ಸಿಕ್ಕಿದೆ" ಎಂದು ಸಾರ್ವಜನಿಕ ಅಭಿಯೋಜಕ ರಾಜನ್ ದಹಿಯಾ ಹೇಳಿದ್ದಾರೆ.

ಹತ್ಯೆಗೀಡಾದವರು ಅಪರಾಧಿಗಳು ಎಂದು ಆರಂಭಿಕ ತನಿಖೆಯಲ್ಲಿ ಹೇಳಲಾಗಿತ್ತು. ಆದರೆ ಅದಕ್ಕೆ ಪೊಲೀಸರು ಸಲ್ಲಿಸಿದ ಪುರಾವೆಗಳು ಅದನ್ನು ಸಮರ್ಥಿಸುವಂತಿರಲಿಲ್ಲ. ಇವರು ದೇಸಿ ಪಿಸ್ತೂಲ್‌ಗಳನ್ನು ಹೊಂದಿದ್ದು, ಇದರ ಮೂಲಕ ಗುಂಡು ಹಾರಿಸಿದ್ದರು ಎಂದು ಹೇಳಲಾಗಿತ್ತು. ಇದನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾಗಿ ಪೊಲೀಸರು ಹೇಳಿದ್ದರು. ಆದರೆ ಅಪರಾಧ ಸ್ಥಳದಲ್ಲಿ ಈ ಪಿಸ್ತೂಲಿನಿಂದ ಹೊಡೆದ ಯಾವ ಗುಂಡೂ ಪತ್ತೆಯಾಗಿರಲಿಲ್ಲ ಎಂದು ದಹಿಯಾ ವಿವರಿಸಿದ್ದಾರೆ. ಇದರ ಬದಲು ಜಸ್ಬೀರ್ ದೇಹದಲ್ಲಿ ಪತ್ತೆಯಾದ ಒಂದು ಗುಂಡು ಐಪಿಎಸ್ ಅಧಿಕಾರಿಯ ಅಧಿಕೃತ ಪಿಸ್ತೂಲಿನಿಂದ ಸಿಡಿದದ್ದು ಎನ್ನುವುದು ಸಾಬೀತಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X