Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಎಂಸಿ ಚುನಾವಣೆ: ಶಿವಸೇನೆಗೆ ಸ್ಪಷ್ಟ...

ಬಿಎಂಸಿ ಚುನಾವಣೆ: ಶಿವಸೇನೆಗೆ ಸ್ಪಷ್ಟ ಮುನ್ನಡೆ, ಬಿಜೆಪಿ, ಕಾಂಗ್ರೆಸ್‌ಗೆ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ23 Feb 2017 3:15 PM IST
share
ಬಿಎಂಸಿ ಚುನಾವಣೆ: ಶಿವಸೇನೆಗೆ ಸ್ಪಷ್ಟ ಮುನ್ನಡೆ, ಬಿಜೆಪಿ, ಕಾಂಗ್ರೆಸ್‌ಗೆ ಹಿನ್ನಡೆ

ಮುಂಬೈ, ಫೆ.23: ಆಡಳಿತಾರೂಢ ಬಿಜೆಪಿ ಹಾಗೂ ಶಿವಸೇನೆಗೆ ಪ್ರತಿಷ್ಠೆಯ ಕಣವಾಗಿದ್ದ ದೇಶದ ಶ್ರೀಮಂತ ಮಹಾನಗರ ಪಾಲಿಕೆ ಮುಂಬೈನ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್(ಬಿಎಂಸಿ) ಚುನಾವಣೆಯಲ್ಲಿ ಶಿವಸೇನೆ ಸ್ಪಷ್ಟ ಮುನ್ನಡೆಯಲ್ಲಿದ್ದು, ಬಿಜೆಪಿ ಎರಡನೆ ಹಾಗೂ ಕಾಂಗ್ರೆಸ್ ಮೂರನೆ ಸ್ಥಾನದಲ್ಲಿವೆ.

25 ವರ್ಷಗಳ ಬಳಿಕ ಬಿಜೆಪಿ ಬೆಂಬಲವಿಲ್ಲದೇ ಏಕಾಂಗಿಯಾಗಿ ಚುನಾವಣೆಯ ಕಣಕ್ಕಿಳಿದಿದ್ದ ಶಿವಸೇನೆ ಅಧಿಕಾರವನ್ನು ಉಳಿಸಿಕೊಳ್ಳುವುದು ಖಚಿತವಾಗಿದೆ. ಶಿವಸೇನೆ 1997ರಿಂದ ಬಿಎಂಸಿಯಲ್ಲಿ ಅಧಿಕಾರದಲ್ಲಿದೆ.

  ಈ ಫಲಿತಾಂಶ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ-ಶಿವಸೇನೆ ಮೈತ್ರಿಕೂಟದ ಸರಕಾರಕ್ಕೆ ನೇರ ಪರಿಣಾಮಬೀರುವ ಸಾಧ್ಯತೆಯಿದೆ. ಮತ ಎಣಿಕೆ ಗುರುವಾರ ಬೆಳಗ್ಗೆ ಆರಂಭವಾಗಿದ್ದು, ಆಡಳಿತರೂಢ ಶಿವಸೇನೆ 85 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ತಕ್ಷಣ ಪಕ್ಷದ ಕಾರ್ಯಕರ್ತರು ದಾದರ್‌ನಲ್ಲಿರುವ ಶಿವಸೇನಾ ಭವನದ ಎದುರು ಜಮಾಯಿಸಿ ಸಂಭ್ರಮಾಚರಣೆ ಆಚರಿಸತೊಡಗಿದರು.

ಬಿಎಂಸಿ ಹಾಗೂ ಮಹಾರಾಷ್ಟ್ರದ ಇತರ 9 ಮುನ್ಸಿಪಲ್ ಕಾರ್ಪೊರೇಶನ್‌ಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟಗೊಳ್ಳಲಿದೆ. ಒಟ್ಟು 227 ವಾರ್ಡ್‌ಗಳ ಪೈಕಿ ಶಿವಸೇನೆ 93ರಲ್ಲಿ ಮುನ್ನಡೆಯಲ್ಲಿದ್ದು, ಶಿವಸೇನೆಗೆ ತೀವ್ರ ಸ್ಪರ್ಧೆಯೊಡ್ಡುತ್ತಿರುವ ಬಿಜೆಪಿ 77 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 22 ವಾರ್ಡ್‌ಗಳಲ್ಲಿ ಮುನ್ನಡೆಯಲ್ಲಿದೆ.

ಶಿವಸೇನೆ ಪಕ್ಷ ಕಳೆದ 20 ವರ್ಷಗಳಿಂದ ಬಿಎಂಸಿಯಲ್ಲಿ ಅಧಿಕಾರದಲ್ಲಿದೆ. 1992 ರಿಂದ ಬಿಜೆಪಿಯೊಂದಿಗೆ ಮೈತ್ರಿ ಹೊಂದಿದ್ದ ಶಿವಸೇನೆ ಈ ಬಾರಿ ಏಕಾಂಗಿಯಾಗಿ ಸ್ಪರ್ಧಿಸಿದೆ. ಈ ಬಾರಿಯ ಬಿಎಂಸಿ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಿರುವ ಉದ್ಧವ್ ಠಾಕ್ರೆ ನೇತೃತ್ವವ ಶಿವಸೇನೆ ಹಾಗೂ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುಂದಾಳತ್ವದ ಬಿಜೆಪಿಯ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.

ಮಂಗಳವಾರ ನಡೆದ ಬಿಎಂಸಿ ಚುನಾವಣೆಯಲ್ಲಿ 55 ಶೇ.ರಷ್ಟು ಮತದಾನ ನಡೆದಿದ್ದು, 25 ವರ್ಷಗಳ ಬಳಿಕ ಗರಿಷ್ಠ ಪ್ರಮಾಣದ ಮತದಾನವಾಗಿದೆ. ಬಿಎಂಸಿಯ ವಾರ್ಷಿಕ ಬಜೆಟ್ 37,000 ಕೋಟಿ. ರೂ. ಆಗಿದ್ದು, ಇದು ಕೆಲವು ರಾಜ್ಯಗಳ ಬಜೆಟ್‌ಗಿಂತಲೂ ಹೆಚ್ಚಿನದ್ದಾಗಿದೆ. ಬಿಎಂಸಿಯಲ್ಲಿ ಒಟ್ಟು 227 ಸೀಟುಗಳಿದ್ದು, ಬಹುಮತಕ್ಕೆ 114 ಸೀಟುಗಳ ಅಗತ್ಯವಿದೆ.

ಪುಣೆ, ಸೋಲಾಪುರದಲ್ಲಿ ಬಿಜೆಪಿಗೆ ಮುನ್ನಡೆ: ಕಳೆದ 10 ವರ್ಷಗಳಿಂದ ಪುಣೆ ಹಾಗೂ ಪಿಂಪ್ರಿ-ಚಿಂಚ್ವಾಡ ಮುನ್ಸಿಪಲ್ ಕಾರ್ಪೋರೇಶನ್‌ನಲ್ಲಿ ಅಧಿಕಾರದಲ್ಲಿದ್ದ ಶರದ್ ಪವಾರ್ ನೇತೃತ್ವದ ಎನ್‌ಸಿಪಿಗೆ ತೀವ್ರ ಹಿನ್ನಡೆಯಾಗಿದೆ. ಈ ಎರಡು ಪಾಲಿಕೆಗಳಲ್ಲಿ ಆಡಳಿತ ಪಕ್ಷ ಬಿಜೆಪಿ ಮುನ್ನಡೆಯಲ್ಲಿದೆ.
ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ತವರುಪಟ್ಟಣ ಸೋಲಾಪುರದಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಂಡಿದ್ದು, ಇಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಸೋಲಾಪುರದಲ್ಲಿ 24 ಸೀಟುಗಳಲ್ಲಿ ಮುನ್ನಡೆಯಲ್ಲಿರುವ ಬಿಜೆಪಿ ಕ್ಲೀನ್‌ಸ್ವೀಪ್‌ನತ್ತ ಮುನ್ನುಗ್ಗುತ್ತಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X