Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಜಿಟಲ್ ಅಂತರ ನಿವಾರಣೆಗೆ ಕೇರಳ ಸಜ್ಜು

ಡಿಜಿಟಲ್ ಅಂತರ ನಿವಾರಣೆಗೆ ಕೇರಳ ಸಜ್ಜು

ವಾರ್ತಾಭಾರತಿವಾರ್ತಾಭಾರತಿ23 Feb 2017 6:18 PM IST
share
ಡಿಜಿಟಲ್ ಅಂತರ ನಿವಾರಣೆಗೆ ಕೇರಳ ಸಜ್ಜು

ತಿರುವನಂತಪುರ,ಫೆ.23: ಕೇರಳ ಸರಕಾರವು ಪ್ರತಿಯೊಬ್ಬರಿಗೂ ನಿರ್ದಿಷ್ಟ ಪ್ರಮಾಣದ ಉಚಿತ ಬ್ಯಾಂಡ್‌ವಿಡ್ತ್ ಒದಗಿಸುವ ಮೂಲಕ ಅಂತರ್ಜಾಲ ಹಕ್ಕನ್ನು ಎತ್ತಿ ಹಿಡಿಯಲಿದೆ ಎಂದು ರಾಜ್ಯಪಾಲ ನ್ಯಾ(ನಿವೃತ್ತ) ಪಿ.ಸದಾಶಿವಂ ಅವರು ಗುರುವಾರ ಇಲ್ಲಿ ತಿಳಿಸಿದರು. ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿರ್ಮೂಲಿಸಲೂ ಸರಕಾರವು ಗಮನವನ್ನು ಕೇಂದ್ರೀಕರಿಸಲಿದೆ ಎಂದರು.

ಕೇರಳ ವಿಧಾನಸಭೆಯ ನಾಲ್ಕನೇ ಅಧಿವೇಶನದ ಆರಂಭದ ದಿನ ಸದನವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ರಾಜ್ಯದಲ್ಲಿಯ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ವನ್ನೊದಗಿಸುವ ಸಿಪಿಎಂ ನೇತೃತ್ವದ ರಾಜ್ಯ ಸರಕಾರದ ಪ್ರಯತ್ನ ಸದ್ಯವೇ ಯಶಸ್ವಿಯಾಗಲಿದೆ. ವಿದ್ಯುತ್ ಹೊಂದಿರುವ ಎಲ್ಲ ಮನೆಗಳಿಗೂ ಅಂತರ್ಜಾಲ ಸಂಪರ್ಕ ಒದಗಿಸುವುದು ಮುಂದಿನ ಹೆಜ್ಜೆಯಾಗಲಿದೆ ಎಂದರು. ಡಿಜಿಟಲ್ ಅಂತರವನ್ನು ತಗ್ಗಿಸಲು ತನ್ನ ಸರಕಾರವು ಶ್ರಮಿಸಲಿದೆ ಎಂದರು.

 ಸಾರ್ವಜನಿಕ ಸ್ಥಳಗಳಲ್ಲಿ ಇನ್ನೂ ಒಂದು ಸಾವಿರ ವೈ-ಫೈ ಹಾಟ್‌ಸ್ಪಾಟ್‌ಗಳನ್ನು ಸ್ಥಾಪಿಸಲಾಗುವುದು ಎಂದ ಅವರು, ಹೂಡಿಕೆದಾರರನ್ನು ಸೆಳೆಯಲು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಪೂರಕ ವಾತಾವರಣವನ್ನು ನಿರ್ಮಿಸಲು ಸರಕಾರವು ಬದ್ಧವಾಗಿದೆ ಎಂದರು.

ಪ್ರತಿವರ್ಷ ಕನಿಷ್ಠ 1,000 ಕಿರು ಕೈಗಾರಿಕೆಗಳನ್ನು ಸ್ಥಾಪಿಸಲು ಕೇರಳ ಹಣಕಾಸು ನಿಗಮವು ಉದ್ದೇಶಿಸಿದ್ದು, ಇದರಿಂದ ಪ್ರತಿವರ್ಷ 10,000 ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ರಾಜ್ಯಪಾಲರು ತಿಳಿಸಿದರು.


        ಲೈಂಗಿಕ ಅಪರಾಧಿಗಳ ನೋಂದಣಿ ವ್ಯವಸ್ಥೆ

ಕೇರಳ ಸರಕಾರವು ದೇಶದಲ್ಲಿಯೇ ಮೊದಲ ಬಾರಿಗೆ ಲೈಂಗಿಕ ಅಪರಾಧಿಗಳ ನೋಂದಣಿ ವ್ಯವಸ್ಥೆಯನ್ನು ಆರಂಭಿಸಲಿದ್ದು, ಇದು ಲೈಂಗಿಕ ಅಪರಾಧಿಗಳ ಎಲ್ಲ ಗುರುತು ವಿವರಗಳನ್ನು ಒಳಗೊಂಡಿರುತ್ತದೆ ಮತ್ತು ಈ ವಿವರಗಳು ಸಾರ್ವಜನಿಕರಿಗೆ ಲಭ್ಯವಿರುತ್ತವೆ ಎಂದು ರಾಜ್ಯದಲ್ಲಿ ಮಹಿಳೆಯರ ವಿರುದ್ಧದ ದೌರ್ಜನ್ಯಗಳ ತಡೆಗೆ ಕೈಗೊಳ್ಳಲಾಗಿರುವ ಕ್ರಮಗಳನ್ನು ವಿವರಿಸುತ್ತ ನ್ಯಾ.ಸದಾಶಿವಂ ಹೇಳಿದರು. ಲೈಂಗಿಕ ಅಪರಾಧಗಳ ಬಲಿಪಶುಗಳಿಗಾಗಿ ಪರಿಹಾರ ನಿಧಿಯೊಂದನ್ನು ಸರಕಾರವು ಸ್ಥಾಪಿಸಲಿದೆ ಎಂದರು.

ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸರಕಾರವು ಮಹಿಳೆಯರಿಗಾಗಿ ಪ್ರತ್ಯೇಕ ಇಲಾಖೆಯನ್ನು ರಚಿಸಲಿದ್ದು, ಈ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಮತ್ತು ತಾಲೂಕು ಮಟ್ಟದಲ್ಲಿ ಸರ್ವ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X