Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-17 ವಿಶ್ವಕಪ್ ಟಿಕೆಟ್ ಬೆಲೆ 100...

ಅಂಡರ್-17 ವಿಶ್ವಕಪ್ ಟಿಕೆಟ್ ಬೆಲೆ 100 ರೂ.ಗಿಂತ ಕಡಿಮೆ!

ವಾರ್ತಾಭಾರತಿವಾರ್ತಾಭಾರತಿ23 Feb 2017 11:53 PM IST
share
ಅಂಡರ್-17 ವಿಶ್ವಕಪ್ ಟಿಕೆಟ್ ಬೆಲೆ 100 ರೂ.ಗಿಂತ ಕಡಿಮೆ!

ಕೋಲ್ಕತಾ, ಫೆ.23: ಭಾರತದಲ್ಲಿ ನಡೆಯಲಿರುವ ಮೊತ್ತ ಮೊದಲ ಅಂಡರ್-17 ವಿಶ್ವಕಪ್  ಫುಟ್ಬಾಲ್ ವಿಶ್ವಕಪ್ ಟೂರ್ನಿಯಲ್ಲಿ ಟಿಕೆಟ್‌ಗಳ ಬೆಲೆಯನ್ನು 100 ರೂ.ಗಿಂತ ಕಡಿಮೆ ನಿಗದಿಪಡಿಸಲಾಗುತ್ತದೆ ಎಂದು ಟೂರ್ನಮೆಂಟ್‌ನ ನಿರ್ದೇಶಕ ಜೇವಿಯೆರ್ ಸೆಪ್ಪಿ ತಿಳಿಸಿದ್ದಾರೆ.

‘‘ನಾವು ಮೇ ತಿಂಗಳ ಮಧ್ಯಭಾಗದಲ್ಲಿ ಟಿಕೆಟ್‌ಗಳ ಬಿಡುಗಡೆ ಮಾಡಲಿದ್ದೇವೆ. ಟಿಕೆಟ್‌ಗಳ ಬೆಲೆ ಸಿನೆಮಾ ಟಿಕೆಟ್‌ಗಳಿಗಿಂತ ಕಡಿಮೆ ಇರಲಿದೆ’’ ಎಂದು ಸಾಲ್ಟ್‌ಲೇಕ್ ಸ್ಟೇಡಿಯಂನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೆಪ್ಪಿ ತಿಳಿಸಿದ್ದಾರೆ.

‘‘ಕೋಲ್ಕತಾ ಸೇರಿದಂತೆ ಭಾರತದ ಇತರ ಐದು ಫುಟ್ಬಾಲ್ ತಾಣಗಳ ತಯಾರಿಯು ತೃಪ್ತಿ ನೀಡಿದೆ. ಇಲ್ಲಿನ ಸ್ಟೇಡಿಯಂ 1,20,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. ಆದರೆ, ಇದೀಗ 87,000ಕ್ಕೆ ಕುಸಿದಿದೆ. ಇಲ್ಲಿನ ಕಾಮಗಾರಿ ಪೂರ್ಣಗೊಳ್ಳಲು ಸಮಯ ಬೇಕು. ಮುಂದಿನ ತಿಂಗಳು ಫಿಫಾ ತಪಾಸಣಾ ತಂಡ ಇಲ್ಲಿಗೆ ಭೇಟಿ ನೀಡುವಾಗ 90 ರಿಂದ 95 ಶೇ. ಕಾಮಗಾರಿ ಮುಗಿಯಬಹುದು’’ ಎಂದು ಸೆಪ್ಪಿ ಹೇಳಿದ್ದಾರೆ.

ಸ್ಟೇಡಿಯಂನ ಅಧಿಕಾರಿಗಳ ಪ್ರಕಾರ ಫುಟ್ಬಾಲ್ ಸ್ಟೇಡಿಯಂ ನವೀಕರಣ ಕಾಮಗಾರಿಗೆ ಸುಮಾರು 150 ಕೋ.ರೂ. ಅಗತ್ಯವಿದೆ. ಕೇಂದ್ರ ಸರಕಾರ 14 ಕೋಟಿ. ರೂ. ನೀಡಲಿದ್ದು, ಉಳಿದ ಹಣವನ್ನು ರಾಜ್ಯ ಸರಕಾರವೇ ಭರಿಸಬೇಕಾಗಿದೆ. ಸ್ಟೇಡಿಯಂ ಕಾಮಗಾರಿ 2014ರಲ್ಲಿ ಆರಂಭವಾಗಿದ್ದು, ಮುಂದಿನ ತಿಂಗಳು ಕೊನೆಗೊಳ್ಳುವ ಸಾಧ್ಯತೆಯಿದೆ.

ದಿಲ್ಲಿ ಅಕ್ಟೋಬರ್ 6 ರಿಂದ 28ರ ತನಕ ನಡೆಯಲಿರುವ ವಿಶ್ವಕಪ್‌ನ ಆತಿಥ್ಯವಹಿಸಿಕೊಳ್ಳಲಿದೆ ಎಂದು ಸೆಪ್ಪಿ ಸ್ಪಷ್ಟಪಡಿಸಿದರು.

‘‘ನಾವು ದೀಪಾವಳಿಯ ಬಳಿಕ ಮಾಲಿನ್ಯದ ಪರಿಣಾಮದ ಬಗ್ಗೆ ಅವಲೋಕನ ನಡೆಸಲಿದ್ದೇವೆ. ಆ ಬಳಿಕ ಪಂದ್ಯ ಆಯೋಜಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವೆವು’’ ಎಂದು ಸೆಪ್ಪಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X