28: ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಬೆಂಗಳೂರು ಚಲೋ
ಮಂಗಳೂರು, ೆ.23: ಹೊಲಿಗೆ ಕೆಲಸಗಾರರಿಗೆ ಭವಿಷ್ಯನಿ ಯೋಜನೆಯನ್ನು ಜಾರಿಗೊಳಿಸಬೇಕು ಮತ್ತಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಫೆ.28ರಂದು ಬೆಂಗಳೂರು ಚಲೋ ನಡೆಯಲಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್ನ ದ.ಕ. ಜಿಲ್ಲಾಧ್ಯಕ್ಷ ಉದಯ ಕುಮಾರ್ ಕೋಡಿಕಲ್, ಬೆಳಗ್ಗೆ 10ಕ್ಕೆ ಬೆಂಗಳೂರು ಕೆಎಸ್ಸಾರ್ಟಿಸಿ ಸಿಟಿ ರೈಲ್ವೇ ಸ್ಟೇಶನ್ ಬಳಿಯಿಂದ ಫ್ರೀಡಂ ಪಾರ್ಕ್ ತನಕ ಮೆರವಣಿಗೆ ಸಾಗಿ ಅನಂತರ ಪ್ರತಿಭಟನಾ ಸಭೆ ನಡೆಯಲಿದೆ. 30 ಜಿಲ್ಲೆಗಳಿಂದ ಎಲ್ಲ ಟೈಲರ್ ವೃತ್ತಿಯವರು ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ಪದಾಕಾರಿಗಳಾದ ವಿಶ್ವನಾಥ್ ಬಜಾಲ್, ಜಯರಾಜ್ ಕೋಟ್ಯಾನ್, ಸುಜಾತಾ ಜೋಗಿ ಉಪಸ್ಥಿತರಿದ್ದರು.
Next Story