Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿರ್ಮಲ ಮನಸ್ಸಿನಿಂದ ಅನಾರೋಗ್ಯ ದೂರ: ಡಾ....

ನಿರ್ಮಲ ಮನಸ್ಸಿನಿಂದ ಅನಾರೋಗ್ಯ ದೂರ: ಡಾ. ಬಿ.ಎಂ.ಹೆಗ್ಡೆ

'ಆಹಾರ ಮಂಥನ' ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Feb 2017 6:43 PM IST
share
ನಿರ್ಮಲ ಮನಸ್ಸಿನಿಂದ ಅನಾರೋಗ್ಯ ದೂರ: ಡಾ. ಬಿ.ಎಂ.ಹೆಗ್ಡೆ

ಉದ್ಯಾವರ, ಫೆ.24: ನಾವು ಯಾವ ಆಹಾರ ತಿನ್ನಬೇಕೆಂಬುದು ಮುಖ್ಯ ಅಲ್ಲ. ನಮ್ಮನ್ನು ಯಾವ ಆಹಾರ ತಿನ್ನುತ್ತದೆ ಎಂಬ ಕುರಿತು ಅರಿವು ಬೆಳೆಸಿ ಕೊಳ್ಳಬೇಕು. ನಾವು ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಋಣಾತ್ಮಕ ಚಿಂತನೆಯೇ ಅನಾರೋಗ್ಯಕ್ಕೆ ಕಾರಣ. ನಿರ್ಮಲ ಮನಸ್ಸಿನಿಂದ ಆರೋಗ್ಯಕರವಾಗಿರಲು ಸಾಧ್ಯ ಎಂದು ಮಣಿಪಾಲ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಬಿ.ಎಂ.ಹೆಗ್ಡೆ ಹೇಳಿದ್ದಾರೆ.

ಉದ್ಯಾವರ ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಸ್ವಸ್ಥವೃತ್ತ ಸ್ನಾತಕೋತ್ತರ ವಿಭಾಗದ ವತಿಯಿಂದ ದಿ.ಮಾತೃಶ್ರೀ ರತ್ನಮ್ಮ ಹೆಗ್ಗಡೆ ಜನ್ಮದಿನದ ಸಂಸ್ಮರಣಾರ್ಥವಾಗಿ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ 'ಆಹಾರ ಮಂಥನ' ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಇತರರು ಮಾಡಿರುವ ಸಂಶೋಧನೆಯನ್ನು ಅನುಸರಿಸುವುದು ಹಾಗೂ ಮರು ಸಂಶೋಧನೆ ಮಾಡುವುದಕ್ಕಿಂತ ನಾವೇ ಹೊಸ ಹೊಸ ಸಂಶೋಧನೆಯತ್ತ ಹೆಚ್ಚಿನ ಆಸಕ್ತಿ ತೋರಬೇಕು. ಇದರಿಂದ ನಮ್ಮ ಜ್ಞಾನ ಕೂಡ ವೃದ್ದಿಸುತ್ತದೆ. ಅಲೋಪತಿ, ಹೋಮಿಯೋಪತಿಗಿಂತ ವೈದ್ಯರಲ್ಲಿ ಸಿಂಪಥಿ ಮುಖ್ಯ ಎಂದು ಅವರು ತಿಳಿಸಿದರು.

ಮಾನಸಿಕ ಕಾಯಿಲೆಗಳಿಗೆ ಔಷಧಿಗಿಂತ ಮನಸ್ಸನ್ನು ಹಿತಗೊಳಿಸುವ ವಾತಾವರಣ ಬೇಕು. ಸಂಗೀತ ಕೇಳುವುದರಿಂದಲೂ ಮನಸ್ಸನ್ನು ಖುಷಿ ಪಡಿಸ ಬಹುದು. ಇದು ಕೂಡ ಮಾನಸಿಕ ಕಾಯಿಲೆಗೆ ಔಷಧಿಯಾಗಿದೆ ಎಂದ ಅವರು, ಮನುಷ್ಯನ ದೇಹದಲ್ಲಿ ಶೇ.90ರಷ್ಟು ಕೊಲೆಸ್ಟ್ರಾಲ್ ತಾನಾಗಿಯೇ ಉತ್ಪತ್ತಿಯಾಗುತ್ತದೆ. ನಮ್ಮ ದೇಹವು ಪ್ರಾಕೃತಿಕವಾಗಿ ತನಗೆ ಬೇಡದ ವಸ್ತು ಗಳನ್ನು ಎಂದಿಗೂ ಉತ್ಪಾದಿಸುವುದಿಲ್ಲ. ಆದುದರಿಂದ ಕೊಲೆಸ್ಟ್ರಾಲ್ ಹೆಸರಿ ನಲ್ಲಿ ಉತ್ತಮ ಆಹಾರವನ್ನು ದೂರ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಅವರು ಹೇಳಿದರು.

ಇಂದು ಮನುಷ್ಯನ ದೇಹವು ಅಪಾಯಕಾರಿಯತ್ತ ಸಾಗುತ್ತಿದೆ. ನಮ್ಮಲ್ಲಿನ ಸ್ವಾರ್ಥದಿಂದ ಸಂತೋಷ ಕಡಿಮೆಯಾಗಿ ನಾನಾ ಕಾಯಿಲೆಯನ್ನು ಆಹ್ವಾನಿ ಸುತ್ತಿದ್ದೇವೆ. ಆದುದರಿಂದ ನಮ್ಮಲ್ಲಿರುವ ನಾನು ನಾನು ಎಂಬ ಅಹಂ ಬಿಡ ಬೇಕು ಎಂದ ಡಾ.ಬಿ.ಎಂ.ಹೆಗ್ಡೆ, ಅಮೆರಿಕಾ ವೈದ್ಯಕೀಯದಲ್ಲಿ ಆಯುರ್ವೇದ ಸೇರಿಸುವ ಕೆಲಸ ನಡೆಯುತ್ತಿದ್ದು, ಅದಕ್ಕಿಂತ ಮೊದಲು ಆ ಕೆಲಸ ಭಾರತ ದಲ್ಲಿ ನಡೆಯಬೇಕಾಗಿದೆ. ಆ ಕುರಿತು ಕೇಂದ್ರ ಸರಕಾರ ಚಿಂತನೆ ಮಾಡು ತ್ತಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಕಾಂತ್ ಯು. ಅಧ್ಯಕ್ಷತೆ ವಹಿಸಿದ್ದರು. ಸಂಘಟನಾ ಕಾರ್ಯದರ್ಶಿ ಡಾ.ಬಿ.ಆರ್.ದೊಡ್ಡಮನಿ ಸ್ವಾಗತಿಸಿದರು. ಸ್ವಸ್ಥವೃತ್ತ ಸ್ನಾತಕೋತ್ತರ ವಿಭಾಗದ ಅಸೋಸಿಯೇಟ್ ಪ್ರೊ.ಡಾ.ವಿಜಯ ಬಿ. ನೆಗಲೂರು ವಂದಿಸಿದರು. ಡಾ.ರವೀಂದ್ರ ಅಂಗಡಿ ಹಾಗೂ ಡಾ.ಅಮಲಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X