Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕೈ’ಕಮಾಂಡ್‌ಗೆ ಕಪ್ಪ: ಸಿಎಂ ರಾಜೀನಾಮಗೆ...

‘ಕೈ’ಕಮಾಂಡ್‌ಗೆ ಕಪ್ಪ: ಸಿಎಂ ರಾಜೀನಾಮಗೆ ಒತ್ತಾಯ : ವಿಧಾನಸಭೆ ವಿಸರ್ಜನೆಗೆ ಬಿಎಸ್‌ವೈ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Feb 2017 7:48 PM IST
share
‘ಕೈ’ಕಮಾಂಡ್‌ಗೆ ಕಪ್ಪ: ಸಿಎಂ ರಾಜೀನಾಮಗೆ ಒತ್ತಾಯ : ವಿಧಾನಸಭೆ ವಿಸರ್ಜನೆಗೆ ಬಿಎಸ್‌ವೈ ಆಗ್ರಹ

ಬೆಂಗಳೂರು, ಫೆ. 24: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಮೇಲ್ಮನೆ ಸದಸ್ಯ ಕೆ.ಗೋವಿಂದ ರಾಜು ಹೈಕಮಾಂಡಿಗೆ ಕಪ್ಪ ಸಲ್ಲಿಕೆ ಸಂಬಂಧಿಸಿದ ಡೈರಿಯಲ್ಲಿನ ಮಾಹಿತಿ ಬರಂಗಗೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಕೂಡಲೇ ವಿಧಾನಸಭೆ ವಿಸರ್ಜಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧೀಗಳೊಂದಿಗೆ ಮಾತನಾಡಿದ ಅವರು, ಡೈರಿಯಲ್ಲಿರುವ ಸತ್ಯಾಂಶ ಹೊರಬರದಿದ್ದರೆ ರಾಜಕೀಯ ನಿವೃತ್ತಿ ಆಗುವೆ ಎಂದು ಹೇಳಿದ್ದೇ. ಇದೀಗ ಡೈರಿ ಬರಂಗವಾಗಿದೆ. ಹೀಗಾಗಿ ಸಿಎಂ ನನ್ನ ಸವಾಲು ಸ್ವೀಕರಿಸಿ ವಿಧಾನಸಭೆ ವಿಸರ್ಜಿಸಬೇಕು ಎಂದು ಒತ್ತಾಯಿಸಿದರು.

ಎಲ್ಲರೂ ಜನತಾ ನ್ಯಾಯಾಲಯಕ್ಕೆ ಹೋಗೋಣ. ಜನ ಯಾರನ್ನು ಬೆಂಬಲಿಸಿದ್ದಾರೆ ಎಂದು ಗೊತ್ತಾಗಲಿದೆ. ಮಹಾಶಿವರಾತ್ರಿಯ ಶುಭದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅನ್ಯಾಯವನ್ನು ಒಪ್ಪಿಕೊಂಡು ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಕೋರಿದರು.

  ಜನತೆ ತೆರಿಗೆ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಮೂಲಕ ವಸೂಲಿ ಮಾಡಿ ಹೈಕಮಾಂಡ್‌ಗೆ ತಲುಪಿಸಿರುವುದು, ಯಾರಿಗೂ ಬೇಡದ ಉಕ್ಕಿನ ಸೇತುವೆ ಯೋಜನೆಯಲ್ಲಿ 65 ಕೋಟಿ ರೂ.ಲಂಚ ಸ್ವೀಕಾರದ ಬಗ್ಗೆಯೂ ಡೈರಿಯಲ್ಲಿರುವ ಮಾಹಿತಿ ಬರಂಗವಾಗಿದೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಕಪ್ಪ ಪಾವತಿಯಲ್ಲಿ ಯಾವೆಲ್ಲ ಸಚಿವರ ಪಾಲು ಎಷ್ಟು ಎನ್ನುವುದೂ ಸುದ್ಧಿ ವಾಹಿನಿಗಳು ಮತ್ತು ಮುದ್ರಣ ಮಾಧ್ಯಮಗಳ ಮೂಲಕ ಬರಂಗವಾಗಿದೆ. ಇದು ಅಕ್ಷಮ್ಯ ಅಪರಾಧ. ಬಿಜೆಪಿ ಷಡ್ಯಂತರ ನಡೆಸಿದ್ದಾರೆನ್ನುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ಮೂರ್ಖತನದ ಪರಮಾವಧಿ. ಅಂಗೈ ಹುಣ್ಣಿಗೆ ಕನ್ನಡಿಯೇನೂ ಬೇಡ ಎಂದು ಟೀಕಿಸಿದರು.

ಐಟಿ ಮೇಲ್ಮನೆ ಸದಸ್ಯ ಗೋಂದರಾಜು ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅವರ ಮನೆಯಿಂದಲೇ ಡೈರಿಯನ್ನು ವಶಕ್ಕೆ ಪಡೆದು ಮಹಜರ್ ಮಾಡಿದೆ. ಈ ಹಂತದಲ್ಲಿ ಗೋಂದರಾಜು ಸತ್ಯಕ್ಕೆ ದೂರವಾದ ಮಾತನಾಡಿದರೆ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ. ಆದುದರಿಂದ ಸಿಎಂ ಪರವಾಗಿ ಹೈಕಮಾಂಡಿಗೆ ಹಣ ಹಂಚಿದ್ದೇನೆ, ಇದರಲ್ಲಿ ನನ್ನದೇನೂ ಪಾತ್ರಲ್ಲ ಎಂದು ಅವರು ಒಪ್ಪಿಕೊಳ್ಳುವುದು ಒಳ್ಳೆಯದು ಎಂದು ಬಿಎಸ್‌ವೈ ಸಲಹೆ ಮಾಡಿದರು.

 ಸಹಾರಾ ಡೈರಿಗೂ ಈಗ ಸಿಕ್ಕಿರುವ ಡೈರಿಗೂ ಅಜಗಜಾಂತರ ವ್ಯತ್ಯಾಸವಿದೆ. ಈಗ ಸಿಕ್ಕಿರುವ ಡೈರಿಯಲ್ಲಿ ಯಾರಿಂದ ಹಣ ಪಡೆದು ಯಾರಿಗೆ ಸಂದಾಯ ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ ದಾಖಲಾಗಿವೆ. ಇದಕ್ಕಿಂತ ಬೇರೆ ದಾಖಲೆ ಅಗತ್ಯವಿಲ್ಲ. ಯಾವ್ಯಾವ ಸಚಿವರು ಇದರಲ್ಲಿ ಸಿಲುಕಿದ್ದಾರೋ ಅವರು ಅನುಭಸುತ್ತಾರೆ. ನೀರಾವರಿ, ಲೋಕೋಪಯೋಗಿ ಇಲಾಖೆ ಸೇರಿ ಒಬ್ಬೊಬ್ಬರೂ ಸಾರಾವಿರು ಕೋಟಿ ರೂ.ಗಳ ಲೂಟಿ ಮಾಡಿದ್ದಾರೆ. ಈ ಇಲಾಖೆಗಳಲ್ಲಿ ಕಾಮಗಾರಿಗಳ ತನಿಖೆ ನಡೆದರೆ ಸತ್ಯ ಹೊರಬರುತ್ತದೆ ಎಂದರು.

     ಆದಾಯ ತೆರಿಗೆ ಇಲಾಖೆ ವಶಕ್ಕೆ ಪಡೆದಿರುವುದು 24ರಿಂದ 28 ಪುಟಗಳ ಡೈರಿ. ಆದರೆ ಅದರಲ್ಲಿ ಇನ್ನಷ್ಟು ಸಚಿವರ ಹೆಸರುಗಳು ನಮೂದಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದ ಅವರು, ರಾಜ್ಯ ಸರಕಾರ ವಿರುದ್ಧ ಬಿಜೆಪಿ ಹೋರಾಟ ಮತ್ತಷ್ಟು ತೀವ್ರಗೊಳಿಸಲಿದೆ ಎಂದು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X