Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾಮ್ ಹತ್ಯೆಗೆ ಅತ್ಯಂತ ಮಾರಕ ವಿಷ...

ನಾಮ್ ಹತ್ಯೆಗೆ ಅತ್ಯಂತ ಮಾರಕ ವಿಷ :ಮಲೇಶ್ಯ ಪೊಲೀಸ್

ವಾರ್ತಾಭಾರತಿವಾರ್ತಾಭಾರತಿ24 Feb 2017 8:16 PM IST
share
ನಾಮ್ ಹತ್ಯೆಗೆ ಅತ್ಯಂತ ಮಾರಕ ವಿಷ :ಮಲೇಶ್ಯ ಪೊಲೀಸ್

ಕೌಲಾಲಂಪುರ, ಫೆ. 24: ‘ವಿಎಕ್ಸ್ ನರ್ವ್ ಏಜಂಟ್’ ಎಂಬ ಅತ್ಯಂತ ವಿಷಕಾರಿ ರಾಸಾಯನಿಕವನ್ನು ಬಳಸಿ ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಸಹೋದರ ಕಿಮ್ ಜಾಂಗ್ ನಾಮ್ ಅವರನ್ನು ಮಲೇಶ್ಯದ ರಾಜಧಾನಿ ಕೌಲಾಲಂಪುರದ ವಿಮಾನ ನಿಲ್ದಾಣದಲ್ಲಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖಾ ವರದಿ ತಿಳಿಸಿದೆ ಎಂದು ಮಲೇಶ್ಯ ಪೊಲೀಸರು ಶುಕ್ರವಾರ ಹೇಳಿದ್ದಾರೆ.

ಮಲೇಶ್ಯದ ರಾಸಾಯನಿಕ ಇಲಾಖೆಯು ಉತ್ತರ ಕೊರಿಯ ರಾಷ್ಟ್ರೀಯನೊಬ್ಬನ ಕಣ್ಣು ಮತ್ತು ಮುಖದಿಂದ ಪಡೆದುಕೊಂಡಿರುವ ಮಾದರಿಗಳ ವಿಶ್ಲೇಷಣೆಯಲ್ಲಿ ಇದು ಸಾಬೀತಾಗಿದೆ ಎಂದು ಪೊಲೀಸರು ಹೇಳಿದರು.

ವಿಎಕ್ಸ್ ನರ್ವ್ ಏಜಂಟ್ ಅಥವಾ ಎಸ್-2 ಡೈಐಸೊಪ್ರೊಫೈಲಮಿನೊಇಥೈಲ್ ಮಿಥೈಲ್‌ಫಾಸ್ಫೋನೊಥಯೋಲೇಟ್ ರಾಸಾಯನಿಕ ಅಸ್ತ್ರವಾಗಿದ್ದು, ಇದನ್ನು ವಿಶ್ವಸಂಸ್ಥೆಯು ಸಮೂಹ ವಿನಾಶಕ ಅಸ್ತ್ರ ಎಂಬುದಾಗಿ ವರ್ಗೀಕರಿಸಿದೆ.

ಉತ್ತರ ಕೊರಿಯ ಸರ್ವಾಧಿಕಾರಿಯ ದಿವಂಗತ ತಂದೆಯ ಇನ್ನೊಂದು ಪತ್ನಿಯ ಮಗನಾಗಿರುವ ಕಿಂಗ್ ಜಾಂಗ್ ನಾಮ್ ತಾನು ವಾಸಿಸುವ ಮಕಾವು ದೇಶಕ್ಕೆ ಹೋಗಲು ವಿಮಾನ ಏರಲು ಫೆಬ್ರವರಿ 13ರಂದು ವಿಮಾನ ನಿಲ್ದಾಣಕ್ಕೆ ಬಂದಿದ್ದಾಗ ಅವರನ್ನು ಇಬ್ಬರು ಮಹಿಳೆಯರು ವಿಷಪ್ರಾಶನ ಮಾಡಿ ಕೊಂದಿದ್ದರು.

ಕಿಮ್ ಜಾಂಗ್ ಉನ್‌ರ ಪರಿತ್ಯಕ್ತ ಅಣ್ಣನನ್ನು ಕೊಲ್ಲಲು ಉತ್ತರ ಕೊರಿಯದ ಏಜಂಟ್‌ಗಳು ನಡೆಸಿದ ಕಾರ್ಯಾಚರಣೆ ಅದಾಗಿತ್ತು ಎಂದು ದಕ್ಷಿಣ ಕೊರಿಯ ಮತ್ತು ಅಮೆರಿಕದ ಅಧಿಕಾರಿಗಳು ಭಾವಿಸಿದ್ದಾರೆ.

ಸಮೂಹ ನಾಶಕ ಅಸ್ತ್ರ

ಕಿಮ್ ಜಾಂಗ್ ನಾಮ್ ಹತ್ಯೆಯಲ್ಲಿ ಬಳಸಲಾದ ರಾಸಾಯನಿಕ ವಿಎಕ್ಸ್ ಮಾನವ ನಿರ್ಮಿಸಿದ ಅತ್ಯಂತ ಮಾರಕ ರಾಸಾಯನಿಕ ಅಸ್ತ್ರಗಳ ಪೈಕಿ ಒಂದು. ನರ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಈ ರಾಸಾಯನಿಕದ ಕೇವಲ 10 ಮಿಲಿ ಗ್ರಾಂ ಅಥವಾ ಒಂದು ಬಿಂದು ಮನುಷ್ಯರನ್ನು ಕೇವಲ ನಿಮಿಷಗಳಲ್ಲಿ ಕೊಲ್ಲಲು ಸಾಕು ಎಂದು ಪರಿಣತರು ಹೇಳುತ್ತಾರೆ.

ಈ ರಾಸಾಯನಿಕವನ್ನು 1950ರ ದಶಕದಲ್ಲಿ ಮೊದಲ ಬಾರಿಗೆ ಬ್ರಿಟನ್‌ನಲ್ಲಿ ಉತ್ಪಾದಿಸಲಾಯಿತು. ಅದನ್ನು ಸೇವಿಸಿದರೆ ಮನುಷ್ಯರು ನಿಮಿಷಗಳಲ್ಲೇ ಪ್ರಜ್ಞೆ ಕಳೆದುಕೊಳ್ಳುತ್ತಾರೆ, ಪಕ್ಷವಾತಕ್ಕೆ ಗುರಿಯಾಗುತ್ತಾರೆ ಹಾಗೂ ಉಸಿರಾಟದ ತೊಂದರೆಗೆ ಸಿಲುಕುತ್ತಾರೆ.

ತಮ್ಮ ಮೇಲೆ ವಿಎಕ್ಸ್ ಪ್ರಯೋಗವಾಗಿದೆ ಎನ್ನುವುದು ಜನರಿಗೆ ಗೊತ್ತೇ ಆಗುವುದಿಲ್ಲ. ಯಾಕೆಂದರೆ ವಿಎಕ್ಸ್‌ಗೆ ರುಚಿಯಿಲ್ಲ ಮತ್ತು ವಾಸನೆಯಿಲ್ಲ. ಅದನ್ನು ಸಣ್ಣ ಪ್ರಮಾಣದಲ್ಲಿ ವಿಮಾನ ನಿಲ್ದಾಣದ ಒಳಗೆ ತಂದರೆ ಭದ್ರತಾ ಸಿಬ್ಬಂದಿ ಮತ್ತು ಸೆನ್ಸಾರ್‌ಗಳ ತಪಾಸಣೆಗೂ ಅದು ಸಿಗುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X