Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮೀನುಗಾರರ ಡೀಸೆಲ್ ಸಬ್ಸಿಡಿ 120...

ಉಡುಪಿ: ಮೀನುಗಾರರ ಡೀಸೆಲ್ ಸಬ್ಸಿಡಿ 120 ಕೋಟಿ ರೂ.ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 Feb 2017 8:55 PM IST
share
ಉಡುಪಿ: ಮೀನುಗಾರರ ಡೀಸೆಲ್ ಸಬ್ಸಿಡಿ 120 ಕೋಟಿ ರೂ.ಬಿಡುಗಡೆ

ಉಡುಪಿ, ಫೆ.24: ಮೀನುಗಾರಿಕೆ ದೋಣಿಗಳಿಗೆ 'ಡೀಸೆಲ್ ಮಾರಾಟ ತೆರಿಗೆ ಮರುಪಾವತಿ' ಎಂಬ ಯೋಜನೆಯಡಿ ಯಾಂತ್ರೀಕೃತ ದೋಣಿಗಳು ಮೀನುಗಾರಿಕೆಗೆ ಬಳಸಿದ ಡೀಸೆಲ್ ಮೇಲಿನ ಮಾರಾಟ ಕರಕ್ಕೆ ಸಮಾನವಾದ ಮೊತ್ತವನ್ನು ಸಹಾಯಧನವಾಗಿ ದೋಣಿ ಮಾಲಕರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತಿದೆ. ಈವರೆಗೆ ರಾಜ್ಯ ಸರಕಾರ ಡೀಸೆಲ್ ಸಬ್ಸಿಡಿಗಾಗಿ ಒಟ್ಟು 120 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ರಾಜ್ಯ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇವುಗಳಲ್ಲಿ 71.83 ಕೋಟಿ ರೂ.ಗಳನ್ನು ಈಗಾಗಲೇ ನೇರವಾಗಿ ಮೀನುಗಾರರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. 23.63 ಕೋಟಿ ರೂ.ಗಳನ್ನು ನವೆಂಬರ್ ಕೊನೆಯವರೆಗಿನ ಸಹಾಯಧನವನ್ನು ವರ್ಗಾಯಿಸಲು ಖಜಾನೆಗೆ ಬಿಲ್‌ಗಳನ್ನು ಸಲ್ಲಿಸಲಾಗಿದೆ. ಬಾಕಿ ಮೊತ್ತ ಪಾವತಿಸಲು 20 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಸರಕಾರ ಈಗಾಗಲೇ ಬಿಡುಗಡೆಗೊಳಿಸಿದೆ ಎಂದು ಪ್ರಮೋದ್ ತಿಳಿಸಿದರು.

 2016-17ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಅಕ್ಟೋಬರ್ ಅಂತ್ಯದವರೆಗೆ 1547 ಯಾಂತ್ರೀಕೃತ ದೋಣಿಗಳಿಗೆ 47.83ಕೋಟಿರೂ.ಗಳ ಸಬ್ಸಿಡಿ ಮೊತ್ತವನ್ನು ದೋಣಿ ಮಾಲಕರ ನೇರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ನವೆಂಬರ್‌ನಿಂದ ಜನವರಿವರೆಗೆ 1513 ಯಾಂತ್ರೀಕೃತ ದೋಣಿಗಳಿಗೆ ರೂ.23.66 ಕೋಟಿ ಸಹಾಯಧನವನ್ನು ದೋಣಿ ಮಾಲಕರಿಗೆ ನೀಡುವಂತೆ ಪ್ರಸ್ತಾವನೆಯನ್ನು ಮೀನುಗಾರಿಕೆ ನಿರ್ದೇಶನಾಲಯಕ್ಕೆ ಸಲ್ಲಿಸಲಾಗಿದೆ ಎಂದರು.

ಮೀನುಗಾರರಿಗೆ ಸಂಕಷ್ಟ ಪರಿಹಾರ ನಿಧಿಯಿಂದ ನೀಡಲಾಗುತಿದ್ದ ಪರಿಹಾರ ಧನವನ್ನು 2ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಸಲಾಗಿದೆ. ಈ ಯೋಜನೆಯಡಿ ಈ ಸಾಲಿನಲ್ಲಿ ಇಲ್ಲಿಯವರೆಗೆ 74 ಪ್ರಕರಣ ಇತ್ಯರ್ಥಗೊಳಿಸಿ 131.78 ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ ಎಂದರು.

ರಾಷ್ಟೀಕೃತ ಬ್ಯಾಂಕ್‌ಗಳು ಶೇ.3 ಹಾಗೂ 2ರ ಬಡ್ಡಿ ದರದಲ್ಲಿ ಮೀನುಗಾರ/ಮೀನುಗಾರ ಮಹಿಳೆಯರ ಗುಂಪಿಗೆ ನೀಡುವ 50,000 ರೂ. ಸಾಲಕ್ಕೆ ಮೀನುಗಾರಿಕೆ ಇಲಾಖೆಯಿಂದ ಬಡ್ಡಿ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ಉಡುಪಿ ಜಿಲ್ಲೆಗೆ 27785 ಫಲಾನುವಿಗಳಿಗೆ ಒಟ್ಟು ಹೆಚ್ಚಿನ ಬಡ್ಡಿ ವ್ಯತ್ಯಾಸದ ಸಹಾಯಧನ 13.51 ಕೋಟಿ ರೂ. ಮಂಜೂರಾಗಿದೆ ಎಂದು ಪ್ರಮೋದ್ ತಿಳಿಸಿದರು.

ಡೀಸೆಲ್ ಸಬ್ಸಿಡಿಯಲ್ಲಿ  ಕರ್ನಾಟಕ ಅಗ್ರ: 

ಪಶ್ಚಿಮ ಕರಾವಳಿಯ ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸರಕಾರ ಅತ್ಯಧಿಕ ಡೀಸೆಲ್ ಸಬ್ಸಿಡಿಯನ್ನು ರಾಜ್ಯದ ಯಾಂತ್ರೀಕೃತ ದೋಣಿಗಳ ಮೀನುಗಾರರಿಗೆ ನೀಡುತ್ತಿದೆ ಎಂದು ಪ್ರಮೋದ್ ವಿವರಿಸಿದರು.

ಮಹಾರಾಷ್ಟ್ರದಲ್ಲಿ 10,000 ದೋಣಿಗಳಿಗೆ ಡೀಸೆಲ್ ಸಬ್ಸಿಡಿ ಲಭ್ಯವಿದ್ದು, ವರ್ಷಕ್ಕೆ 45,000 ಲೀಟರ್‌ನ್ನು ಪ್ರತಿ ಬೋಟ್‌ಗೆ ಬಿಡುಗಡೆಗೊಳಿಸುತ್ತಿದೆ. ಇದಕ್ಕಾಗಿ ಸರಕಾರ 100 ಕೋಟಿ ರೂ. ಅನುದಾನ ನೀಡಿದೆ. ಗುಜರಾತ್‌ನಲ್ಲಿ 7,700 ಯಾಂತ್ರೀಕೃತ ದೋಣಿಗಳಿಗೆ ಸಬ್ಸಿಡಿ ಇದ್ದು ವರ್ಷಕ್ಕೆ 24,000ಲೀ. ಲಭ್ಯವಿದೆ. ಸರಕಾರ 80 ಕೋಟಿ ರೂ.ಬಿಡುಗಡೆಗೊಳಿಸಿದೆ. ಗೋವಾದಲ್ಲಿ 900 ದೋಣಿಗಳಿಗೆ ಸೌಲಭ್ಯವಿದ್ದು ವರ್ಷಕ್ಕೆ 30,000ಲೀ. ಡೀಸೆಲ್ 25 ಕೋಟಿ ರೂ.ಅನುದಾನ ಬಿಡುಗಡೆಯಾಗುತ್ತಿದೆ.

ಕರ್ನಾಟಕದಲ್ಲಿ 3,600 ಯಾಂತ್ರೀಕೃತ ದೋಣಿಗಳಿಗೆ ಸಬ್ಸಿಡಿ ಇದ್ದು, ವರ್ಷಕ್ಕೆ ಪ್ರತಿ ದೋಣಿಗೆ 90,000ಲೀ. ಸಿಗುತ್ತಿದೆ. ಸರಕಾರ ಇದಕ್ಕಾಗಿ 115.52 ಕೋಟಿ ರೂ.ನ್ನು ಬಜೆಟ್‌ನಲ್ಲಿ ನೀಡಿದೆ ಎಂದು ಪ್ರಮೋದ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X