Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನೈತಿಕ ಪೊಲೀಸ್‌ಗಿರಿಗೆ ನೊಂದು ಸಾವಿಗೆ...

ಅನೈತಿಕ ಪೊಲೀಸ್‌ಗಿರಿಗೆ ನೊಂದು ಸಾವಿಗೆ ಶರಣಾದ ಯುವಕ

ಕೇರಳದಲ್ಲಿ ಹೃದಯವಿದ್ರಾವಕ ಘಟನೆ

ವಾರ್ತಾಭಾರತಿವಾರ್ತಾಭಾರತಿ24 Feb 2017 9:04 PM IST
share
ಅನೈತಿಕ ಪೊಲೀಸ್‌ಗಿರಿಗೆ ನೊಂದು ಸಾವಿಗೆ ಶರಣಾದ ಯುವಕ

ತಿರುವನಂತಪುರ,ಫೆ.24: ಕೇರಳದ ಕೊಲ್ಲಂ ಬೀಚ್‌ನಲ್ಲಿ ಅನೈತಿಕ ಪೊಲೀಸರ ಗೂಂಡಾಗಿರಿಯಿಂದ ನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ಗುರುವಾರ ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಮೇಲೆ ನಡೆದ ನಿರಂತರ ತೇಜೋವಧೆ ಹಾಗೂ ಕಿರುಕುಳದಿಂದ ಬೇಸತ್ತು ಪಾಲ್ಘಾಟ್ ನಿವಾಸಿ ಅನೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  ‘ಪ್ರೇಮಿಗಳ ದಿನ’ವಾದ ಫೆಬ್ರವರಿ 14ರಂದು ಅನೀಶ್ ಹಾಗೂ ಅವರ ಸ್ನೇಹಿತೆ ಕೊಲ್ಲಂ ಬೀಚ್‌ನಲ್ಲಿ ತೆರಳಿದ್ದರು. ಆಸುಪಾಸಿನಲ್ಲಿ ಯಾವುದೇ ಶೌಚಗೃಹಗಳಿಲ್ಲದೆ ಇದ್ದುದರಿಂದ ಬಹಿರ್ದೆಶೆಗಾಗಿ ನಿರ್ಜನ ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಐವರು ಪಾನಮತ್ತರ ಗುಂಪೊಂದು ಅಲ್ಲಿಗೆ ಬಂದು, ಆಕೆಯ ಮೇಲೆ ಲೈಂಗಿಕ ಕಿರುಕುಳ ಎಸಗಲು ಯತ್ನಿಸಿತ್ತು. ಭಯಭೀತ ಯುವತಿಯು ಜೋರಾಗಿ ಕಿರುಚಿದಾಗ ಅನೀಶ್ ಸ್ಥಳಕ್ಕೆ ಧಾವಿಸಿ ಬಂದಾಗ, ಕಿಡಿಗೇಡಿಗಳ ಗುಂಪು ಅವರ ಮೇಲೂ ಹಲ್ಲೆ ನಡೆಸಿತ್ತು ಮತ್ತು ಯುವಜೋಡಿಯು ಅನೈತಿಕ ಚಟುವಟಿಕೆ ನಡೆಸುತ್ತಿದೆಯೆಂದು ಆಪಾದಿಸಿತ್ತು. ಅನೀಶ್ ಮೇಲೆ ಹಲ್ಲೆ ನಡೆಸುವ ದೃಶ್ಯಗಳ ವಿಡಿಯೋವನ್ನು ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರಸಾರ ಮಾಡಿತ್ತು.

 ಸಾಮಾಜಿಕ ಜಾಲತಾಣಗಳಲ್ಲಿ ತನ್ನನ್ನು ದುಷ್ಕರ್ಮಿಗಳು ಅಪಮಾನಿಸಿದ್ದರಿಂದ ಸಾವಿಗೆ ಶರಣಾಗುವುದಾಗಿ ಅನೀಶ್ ಹಾಗೂ ಅವರ ಸ್ನೇಹಿತೆ ಪತ್ರಕರ್ತರ ಮುಂದೆ ನೋವಿನಿಂದ ಹೇಳಿಕೊಂಡಿದ್ದರು.

 ಹತ್ತು ದಿನಗಳ ಬಳಿಕ ಅನೀಶ್‌ನ ಮೃತದೇಹವು ಪಾಲಕ್ಕಾಡ್‌ನಲ್ಲಿರುವ ಅವರ ಮನೆ ಸಮೀಪದ ಮರವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅನೀಶ್ ಅವರ ತಾಯಿ ಹಾಗೂ ಸಹೋದರಿ ಕೆಲಸದ ಸ್ಥಳಕ್ಕೆ ತೆರಳಿದ ಬೆನ್ನಲ್ಲೇ ಅವರು ಸಾವಿಗೆ ಶರಣಾಗಿದ್ದರು.

ಅನೀಶ್ ಬರೆದಿಟ್ಟಿದ್ದ ಆತ್ಮಹತ್ಯೆ ಪತ್ರದಲ್ಲಿ ಇಬ್ಬರು ಆರೋಪಿಗಳ ಹೆಸರನ್ನು ಬರೆದಿಟ್ಟಿದ್ದಾರೆ. ಯಾವುದೇ ಕಾರಣವಿಲ್ಲದೆ ತನಗೆ ಆರೋಪಿಗಳ ಗೆಳೆಯರು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಕಿರುಕುಳ ನೀಡಿರುವುದನ್ನೂ ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X