Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಕ್ರಮವಾಗಿ ಮನೆಗೆಲಸದವರನ್ನು...

ಅಕ್ರಮವಾಗಿ ಮನೆಗೆಲಸದವರನ್ನು ನೇಮಿಸಿಕೊಳ್ಳಬೇಡಿ :ಸೌದಿ ಕುಟುಂಬಗಳಿಗೆ ಪೊಲೀಸರ ಎಚ್ಚರಿಕೆ

63 ಅಕ್ರಮ ಮನೆಗೆಲಸದವರ ಬಂಧನ

ವಾರ್ತಾಭಾರತಿವಾರ್ತಾಭಾರತಿ25 Feb 2017 8:16 PM IST
share
ಅಕ್ರಮವಾಗಿ ಮನೆಗೆಲಸದವರನ್ನು ನೇಮಿಸಿಕೊಳ್ಳಬೇಡಿ :ಸೌದಿ ಕುಟುಂಬಗಳಿಗೆ ಪೊಲೀಸರ ಎಚ್ಚರಿಕೆ

ರಿಯಾದ್ (ಸೌದಿ ಅರೇಬಿಯ), ಫೆ. 25: 63 ಅಕ್ರಮ ಮನೆಗೆಲಸದವರನ್ನು ಬಂಧಿಸಿರುವ ಮದೀನಾ ಪೊಲೀಸರು, ಅಕ್ರಮ ಮಾರ್ಗಗಳ ಮೂಲಕ ಮನೆಗೆಲಸದವರನ್ನು ನೇಮಿಸದಂತೆ ಜನರಿಗೆ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ಬಂಧಿತರಾದವರು ಆಫ್ರಿಕ ಮೂಲದ ಮಹಿಳಾ ಮತ್ತು ಪುರುಷ ಕೆಲಸಗಾರರು ಹಾಗೂ ಅವರು ಸೌದಿ ಮನೆಗಳಲ್ಲಿ ಅಕ್ರಮವಾಗಿ ಕೆಲಸ ಮಾಡುತ್ತಿದ್ದರು ಎಂದು ಮದೀನಾ ಪೊಲೀಸ್ ವಕ್ತಾರ ಮೇಜರ್ ಹುಸೈನ್ ಅಲ್-ಕಹ್ತಾನಿ ತಿಳಿಸಿದರು.

ಮದೀನಾ ಪೊಲೀಸರು ನಡೆಸಿದ ದಾಳಿಗಳ ವೇಳೆ ಬಂಧಿಸಲ್ಪಟ್ಟವರನ್ನು ಅಗತ್ಯ ಕ್ರಮಗಳಿಗಾಗಿ ಸೂಕ್ತ ಪ್ರಾಧಿಕಾರಗಳಿಗೆ ಹಸ್ತಾಂತರಿಸಲಾಗಿದೆ ಎಂದರು.

ನಿಮ್ಮ ಕುಟುಂಬ ಸದಸ್ಯರ ಆರೋಗ್ಯ, ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಂಥ ವ್ಯಕ್ತಿಗಳೊಂದಿಗೆ ವ್ಯವಹರಿಸಬೇಡಿ ಎಂದು ಮದೀನಾ ಜಿಲ್ಲಾ ಪೊಲೀಸ್ ಮುಖ್ಯಸ್ಥ ಮೇಜರ್ ಜನರಲ್ ಅಬ್ದುಲ್ ಹದಿ ಅಲ್-ಶಹ್ರಾನಿ ಜನರಿಗೆ ಸೂಚಿಸಿದರು.

‘‘ಬೇರೆ ಕಡೆಯಿಂದ ತಪ್ಪಿಸಿಕೊಂಡು ನಿಮ್ಮ ಮನೆಗಳಿಗೆ ಕೆಲಸ ಕೇಳಿಕೊಂಡು ಬಂದಿರುವ ಮನೆಗೆಲಸದವರನ್ನು ತೆಗೆದುಕೊಳ್ಳಬೇಡಿ’’ ಎಂದರು.

ಬಂಧಿಸಲ್ಪಟ್ಟವರಲ್ಲಿ ವಾಸ್ತವ್ಯ ಪರ್ಮಿಟ್‌ಗಳು ಇಲ್ಲ ಕೆಲಸಗಾರರು, ಸರಿಯಾದ ಕೆಲಸ ಇಲ್ಲದ ವ್ಯಕ್ತಿಗಳು, ಬೇರೆ ಬೇರೆ ಸ್ಪಾನ್ಸರ್‌ಗಳಿಗೆ ಕೆಲಸ ಮಾಡುವವರು, ತಮ್ಮ ಸ್ಪಾನ್ಸರ್‌ಗಳಿಂದ ತಪ್ಪಿಸಿಕೊಂಡು ಬಂದಿರುವ ಕೆಲಸಗಾರರು ಹಾಗೂ ಸಾರ್ವಜನಿಕ ಮಾರುಕಟ್ಟೆ ಸ್ಥಳಗಳಲ್ಲಿ ಮಾರಾಟ ಮಾಡುವ ಅಕ್ರಮ ವ್ಯಾಪಾರಿಗಳು ಸೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X