Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಸಾರ್ವಜನಿಕ ಸ್ಥಳಗಳಲ್ಲಿ...

‘‘ಸಾರ್ವಜನಿಕ ಸ್ಥಳಗಳಲ್ಲಿ ಮಾತೃಭಾಷೆಯಲ್ಲಿ ಮಾತನಾಡಬೇಡಿ’’: ಅಮೆರಿಕದಲ್ಲಿರುವ ಭಾರತೀಯರ ಸಲಹೆ

ವಾರ್ತಾಭಾರತಿವಾರ್ತಾಭಾರತಿ25 Feb 2017 8:20 PM IST
share
‘‘ಸಾರ್ವಜನಿಕ ಸ್ಥಳಗಳಲ್ಲಿ ಮಾತೃಭಾಷೆಯಲ್ಲಿ ಮಾತನಾಡಬೇಡಿ’’: ಅಮೆರಿಕದಲ್ಲಿರುವ ಭಾರತೀಯರ ಸಲಹೆ

ಹೊಸದಿಲ್ಲಿ,ಫೆ. 25: ‘‘ಅಮೆರಿಕದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವಾಗ ಹಿಂದಿ ಅಥವಾ ಇತರ ಯಾವುದೇ ಭಾರತೀಯ ಭಾಷೆಯಲ್ಲಿ ಮಾತನಾಡಬೇಡಿ. ಅದು ನಿಮ್ಮನ್ನು ತೀವ್ರ ತೊಂದರೆಗೆ ಸಿಲುಕಿಸಬಹುದು ’’ ಇದು ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಭಾರತೀಯರ ನಡುವೆ ಹರಿದಾಡುತ್ತಿರುವ ಸಲಹೆಗಳಲ್ಲೊಂದಾಗಿದೆ.

  ಇದು ಹೈದರಾಬಾದ್ ಮೂಲದ ಟೆಕ್ಕಿ ಶ್ರೀನಿವಾಸ್ ಕುಚಿಬೋಟ್ಲಾ ಅವರು ಜನಾಂಗೀಯ ದ್ವೇಷಕ್ಕೆ ಬಲಿಯಾದ ನಂತರ ಭಾರತೀಯರಲ್ಲಿ, ವಿಶೇಷವಾಗಿ ಅಮೆರಿಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ತೆಲುಗರಲ್ಲಿ ಮನೆಮಾಡಿರುವ ಭೀತಿಗೆ ನಿದರ್ಶನವಾಗಿದೆ. ಬುಧವಾರ ಕಾನ್ಸಾಸ್ ಸಿಟಿಯ ಬಾರೊಂದರಲ್ಲಿ ನಡೆದ ಗುಂಡು ಹಾರಾಟದಲ್ಲಿ ಕುಚಿಬೋಟ್ಲಾರ ಹತ್ಯೆಯಾಗಿದ್ದು, ಜೊತೆಯಲ್ಲಿದ್ದ ಸ್ನೇಹಿತ ಅಲೋಕ ರೆಡ್ಡಿ ಮದಸಾನಿ ಅವರು ಗಾಯಗೊಂಡಿದ್ದರು.

ಜೀವ ಎಲ್ಲಕ್ಕಿಂತಲೂ ಅಮೂಲ್ಯ ಎಂದಿರುವ ತೆಲಂಗಾಣ ಅಮೆರಿಕನ್ ತೆಲುಗು ಅಸೀಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ವಿಕ್ರಮ್ ಜಂಗಮ ಅವರು ಸಮುದಾಯದ ಸದಸ್ಯರು ಮತ್ತು ದಕ್ಷಿಣ ಏಷ್ಯ ಮೂಲದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ.

 ಸಾರ್ವಜನಿಕ ಸ್ಥಳಗಳಲ್ಲಿ ಇತರರೊಂದಿಗೆ ವಾದಕ್ಕಿಳಿಯಬೇಡಿ. ಯಾರಾದರೂ ನಿಮ್ಮನ್ನು ಪ್ರಚೋದಿಸುತ್ತಿದ್ದರೆ ಅವರೊಂದಿಗೆ ಸಂಘರ್ಷಕ್ಕಿಳಿಯದೆ ತಕ್ಷಣ ಆ ಸ್ಥಳವನ್ನು ಬಿಟ್ಟು ತೆರಳಿ. ನಾವು ಮಾತೃಭಾಷೆಯಲ್ಲಿ ಮಾತನಾಡಿದರೆ ಅದು ತಪ್ಪುಗ್ರಹಿಕೆಗೆ ಕಾರಣವಾಗ ಬಹುದು, ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಇಂಗ್ಲೀಷ್‌ನಲ್ಲಿಯೇ ಮಾತನಾಡಿ. ನಿರ್ಜನ ಪ್ರದೇಶಗಳಿಗೆ ತೆರಳುವುದನ್ನು ಅಥವಾ ಅಲ್ಲಿ ಒಂಟಿಯಾಗಿರುವುದನ್ನು ನಿವಾರಿಸಿಕೊಳ್ಳಿ. ತುರ್ತು ಸಂದರ್ಭಗಳಲ್ಲಿ 911ಕ್ಕೆ ಕರೆ ಮಾಡಲು ಹಿಂಜರಿಯಬೇಡಿ, ಇಂತಹ ಸಂದರ್ಭಗಳಲ್ಲಿ ಅಧಿಕಾರಿಗಳು ಧಾವಿಸಿ ನಿಮಗೆ ನೆರವಾಗಬಹುದು. ನಿಮ್ಮ ಸುತ್ತುಮುತ್ತಲು ಏನು ನಡೆಯುತ್ತಿದೆ ಎನ್ನುವುದರ ಮೇಲೆ ಗಮನವಿಡಿ ಮತ್ತು ಶಂಕಾಸ್ಪದವಾದದ್ದು ಏನಾದರೂ ಕಂಡರೆ ಎಚ್ಚರಿಕೆಯಿಂದಿರಿ ಎಂದು ಜಂಗಮ ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X