Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ವೇತಭವನದ ಪತ್ರಿಕಾಗೋಷ್ಠಿಗೆ ಹಲವು...

ಶ್ವೇತಭವನದ ಪತ್ರಿಕಾಗೋಷ್ಠಿಗೆ ಹಲವು ಸುದ್ದಿ ಮಾಧ್ಯಮಗಳಿಗೆ ನಿಷೇಧ

ನಿಷೇಧ ಪಟ್ಟಿಯಲ್ಲಿ ಸಿಎನ್‌ಎನ್, ನ್ಯೂಯಾರ್ಕ್ ಟೈಮ್ಸ್

ವಾರ್ತಾಭಾರತಿವಾರ್ತಾಭಾರತಿ25 Feb 2017 8:49 PM IST
share
ಶ್ವೇತಭವನದ ಪತ್ರಿಕಾಗೋಷ್ಠಿಗೆ ಹಲವು ಸುದ್ದಿ ಮಾಧ್ಯಮಗಳಿಗೆ ನಿಷೇಧ

 ವಾಶಿಂಗ್ಟನ್, ಫೆ. 25: ಶುಕ್ರವಾರ ನಡೆದ ಅನೌಪಚಾರಿಕ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುವುದರಿಂದ ಹಲವಾರು ಸುದ್ದಿ ಮಾಧ್ಯಮ ಸಂಸ್ಥೆಗಳನ್ನು ಶ್ವೇತಭವನ ತಡೆದಿದೆ. ಮಾಧ್ಯಮಗಳ ವಿರುದ್ಧ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧ ಸಾರಿರುವಂತೆಯೇ, ಈ ಅಚ್ಚರಿಯ ಮತ್ತು ಅಪರೂಪದ ಬೆಳವಣಿಗೆ ನಡೆದಿದೆ.

ಸಿಎನ್‌ಎನ್, ನ್ಯೂಯಾರ್ಕ್ ಟೈಮ್ಸ್, ಪೊಲಿಟಿಕೊ, ಲಾಸ್ ಏಂಜಲಿಸ್ ಟೈಮ್ಸ್ ಮತ್ತು ಬಝ್‌ಫೀಡ್ ಸಂಸ್ಥೆಗಳಿಗೆ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಸಿಯಾನ್ ಸ್ಪೈಸರ್ ಅನುಮತಿ ನೀಡಲಿಲ್ಲ.

ಆದರೆ, ಕನ್ಸರ್ವೇಟಿವ್ (ಟ್ರಂಪ್ ಪ್ರತಿನಿಧಿಸುವ ರಿಪಬ್ಲಿಕನ್ ಪಕ್ಷದ ಬೆಂಬಲಿಗರು) ಸುದ್ದಿ ಮಾಧ್ಯಮಗಳನ್ನು ಪ್ರತಿನಿಧಿಸುವ ವರದಿಗಾರರು ಸೇರಿದಂತೆ ಇತರ ಹಲವಾರು ವರದಿಗಾರರಿಗೆ ಅನುಮತಿ ನೀಡಲಾಗಿತ್ತು.

ಇದೇ ದಿನದಂದು ಕನ್ಸರ್ವೇಟಿವ್ ಪೊಲಿಟಿಕಲ್ ಆ್ಯಕ್ಷನ್ ಕಾನ್ಫರೆನ್ಸ್ (ಸಿಪಿಎಸಿ)ನ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಟ್ರಂಪ್, ಪತ್ರಕರ್ತರ ವಿರುದ್ಧ ಇನ್ನೊಂದು ಸುತ್ತಿನ ದಾಳಿ ನಡೆಸಿದರು. ಪತ್ರಕರ್ತರನ್ನು ‘ಅಪ್ರಾಮಾಣಿಕರು’ ಮತ್ತು ‘ನಕಲಿ’ ಎಂದು ಕರೆದ ಅವರು, ತನ್ನ ಆಡಳಿತದ ಬಗ್ಗೆ ಮಾಡುವ ವರದಿಗಳಲ್ಲಿ ಅನಾಮಧೇಯ ಮೂಲಗಳ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

ಇದೇ ಟ್ರಂಪ್ ತನ್ನ ಅಧ್ಯಕ್ಷೀಯ ಪ್ರಚಾರದ ವೇಳೆ ಪ್ರತಿದಿನವೆಂಬಂತೆ ಪತ್ರಿಕೆಗಳ ವಿರುದ್ಧ ಹರಿಹಾಯುತ್ತಿದ್ದರು ಹಾಗೂ ಹತ್ತಕ್ಕೂ ಅಧಿಕ ಸುದ್ದಿ ಮಾಧ್ಯಮಗಳು ತನ್ನ ಕಾರ್ಯಕ್ರಮಗಳ ವರದಿ ಮಾಡದಂತೆ ನಿರ್ಬಂಧ ವಿಧಿಸಿದ್ದರು.

ಟ್ರಂಪ್ ಆಡಳಿತದ ಪರವಾಗಿ ವರದಿ ಮಾಡುವ ಫಾಕ್ಸ್ ನ್ಯೂಸ್, ಬ್ರೈಟ್‌ಬಾರ್ಟ್ ಮತ್ತು ವಾಶಿಂಗ್ಟನ್ ಟೈಮ್ಸ್‌ಗಳ ಹೆಸರು ಆಹ್ವಾನಿತ ಪತ್ರಿಕೆಗಳ ಪಟ್ಟಿಯಲ್ಲಿವೆ.
ಪಟ್ಟಿಯಲ್ಲಿ ಸಿಬಿಎಸ್, ಎನ್‌ಬಿಸಿ, ಎಬಿಸಿ, ವಾಲ್‌ಸ್ಟ್ರೀಟ್ ಜರ್ನಲ್, ಬ್ಲೂಮ್‌ಬರ್ಗ್, ಟೈಮ್ ಮತ್ತು ಅಸೋಸಿಯೇಟಡ್ ಪ್ರೆಸ್‌ನ ಹೆಸರುಗಳೂ ಇವೆ.

ಇತರ ಪತ್ರಿಕೆಗಳನ್ನು ಬಹಿಷ್ಕರಿಸಿರುವುದನ್ನು ಪ್ರತಿಭಟಿಸಿ ಅಸೋಸಿಯೇಟಡ್ ಪ್ರೆಸ್ ಮತ್ತು ಟೈಮ್ ಪತ್ರಿಕೆಗಳೂ ಪತ್ರಿಕಾಗೋಷ್ಠಿಯನ್ನು ಬಹಿಷ್ಕರಿಸಿದವು.

ಅಸ್ವೀಕಾರಾರ್ಹ: ಸಿಎನ್‌ಎನ್

‘ಶ್ವೇತಭವನದ ಪತ್ರಿಕಾಗೋಷ್ಠಿಗಳಿಗೆ ನಿರ್ದಿಷ್ಟ ಮಾಧ್ಯಮ ಗುಂಪುಗಳ ಪತ್ರಕರ್ತರನ್ನು ನಿಷೇಧಿಸಿರುವುದು ‘ಅಸ್ವೀಕಾರಾರ್ಹ’ ಎಂದು ಸಿಎನ್‌ಎನ್ ನಿರೂಪಕ ಜೇಕ್ ಟ್ಯಾಪರ್ ತನ್ನ ಶುಕ್ರವಾರ ಮಧ್ಯಾಹ್ನದ ಕಾರ್ಯಕ್ರಮದಲ್ಲಿ ಹೇಳಿದರು.

‘‘ಇದು ಅನುಚಿತ ನಡವಳಿಕೆ. ಈ ಶ್ವೇತಭವನ ಸ್ವತಂತ್ರ ಪತ್ರಿಕೋದ್ಯಮವನ್ನು ಸಹಿಸುವುದಿಲ್ಲ ಎಂದು ಕಾಣುತ್ತದೆ. ಇದಕ್ಕೊಂದು ಪದವಿದೆ- ಅನ್ ಅಮೆರಿಕನ್ (ಅಮೆರಿಕಕ್ಕೆ ಹೊರತಾದುದು)’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X