Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳುನಾಡಿನ ವೀರ ಸ್ಮಾರಕಗಳ ಪ್ರತ್ಯೇಕ...

ತುಳುನಾಡಿನ ವೀರ ಸ್ಮಾರಕಗಳ ಪ್ರತ್ಯೇಕ ಅಧ್ಯಯನ ಅಗತ್ಯ: ಡಾ.ಪುಂಡಿಕಾ

ಶೇಷಶಾಸ್ತ್ರೀಗೆ 'ತಾಳ್ತಜೆ ಕೇಶವ ಭಟ್ ಪ್ರಶಸ್ತಿ' ಪ್ರದಾನ

ವಾರ್ತಾಭಾರತಿವಾರ್ತಾಭಾರತಿ25 Feb 2017 8:50 PM IST
share
ತುಳುನಾಡಿನ ವೀರ ಸ್ಮಾರಕಗಳ ಪ್ರತ್ಯೇಕ ಅಧ್ಯಯನ ಅಗತ್ಯ: ಡಾ.ಪುಂಡಿಕಾ

ಉಡುಪಿ, ಫೆ.25: ತುಳುನಾಡಿನಲ್ಲಿ ಎಂಟನೆ ಶತಮಾನದಿಂದ 20ನೆ ಶತ ಮಾನದವರೆಗೆ ಪತ್ತೆಯಾಗಿರುವ ವೀರಕಲ್ಲು ಹಾಗೂ ಸ್ಮಾರಕಗಳ ಸಂಖ್ಯೆ ತೀರಾ ಕಡಿಮೆ. ಆದುದರಿಂದ ಈ ಬಗ್ಗೆ ಪ್ರತ್ಯೇಕ ಅಧ್ಯಯನ ಮಾಡಬೇಕಾದ ಅಗತ್ಯ ಇದೆ ಎಂದು ಮೂಡಬಿದಿರೆ ಇತಿಹಾಸ ಸಂಶೋಧಕ ಡಾ.ಪುಂಡಿಕಾ ಗಣಪಯ್ಯ ಭಟ್ ಹೇಳಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ವಿಶ್ವವಿದ್ಯಾ ನಿಲಯ, ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್, ಉಡುಪಿ ಎಂಜಿಎಂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ತಾಳ್ತಜೆ ಕೇಶವ ಭಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಱತುಳುನಾಡಿನ ವೀರ ಸ್ಮಾರಕಗಳುೞ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಯುದ್ಧದಲ್ಲಿ, ಊರನ್ನು ಕೊಳ್ಳೆ ಹೊಡೆಯುವಾಗ, ಗೋವುಗಳ ರಕ್ಷಣೆ, ರಾಜನಿಗಾಗಿ, ಸ್ತ್ರೀಯರ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದವರ ಸ್ಮಾರಕವೇ ವೀರ ಕಲ್ಲುಗಳು. ಕರ್ನಾಟಕದಲ್ಲಿ ಪ್ರಸ್ತುತ 3000ಕ್ಕೂ ಅಧಿಕ ವೀರಗಲ್ಲು ಕಂಡುಬರುತ್ತವೆ. ಕಾಸರಗೋಡು, ಮಂಗಳೂರು, ಉಡುಪಿ ಪ್ರದೇಶಗಳನ್ನೊಳ ಗೊಂಡ ತುಳುನಾಡಿನಲ್ಲಿ ಕೇವಲ 20ರಿಂದ 25 ವೀರ ಸ್ಮಾರಕಗಳು ಕಂಡು ಬಂದಿವೆ. ಇದಕ್ಕೆ ಕಾರಣ ಇಲ್ಲಿ ಹೆಚ್ಚು ಯುದ್ಧಗಳು ನಡೆದಿಲ್ಲ ಎಂಬುದು. ಇಲ್ಲಿ ಸಿಕ್ಕಿರುವ ಎಲ್ಲ ವೀರಕಲ್ಲುಗಳು ಯುದ್ಧದಲ್ಲಿ ಮಡಿದ ನೆನಪಿಗಾಗಿ ಸ್ಥಾಪಿಸಲಾಗಿದೆ. ಉಳಿದ ಯಾವುದೇ ವೀರ ಸ್ಮಾರಕಗಳು ಇಲ್ಲಿ ಕಂಡುಬಂದಿಲ್ಲ ಎಂದರು.

ಉಡುಪಿ ಉದ್ಯಾವರದ ಅಳುಪ ರಾಜರ ಮಧ್ಯೆ 21ವರ್ಷಗಳ ಕಾಲ ನಡೆದ ಯುದ್ಧದಲ್ಲಿ ಮಡಿದ ಒಟ್ಟು 12 ಸೈನಿಕರ ವೀರ ಸ್ಮಾರಕಗಳು ಉದ್ಯಾವರ, ಕೋಟ, ಬಂಟ್ವಾಳದ ಪೊಳಲಿ ಸಮೀಪ ಪತ್ತೆಯಾಗಿವೆ. ಅದೇ ರೀತಿ ಕಾರ್ಕಳದ ಕೆಲ್ಲ ಪುತ್ತಿಗೆ ಎಂಬಲ್ಲಿಯೂ ವೀರ ಸ್ಮಾರಕ ಸಿಕ್ಕಿದೆ. ಅಲ್ಲದೆ ಶಾಸನ ಇಲ್ಲದ ವೀರ ಸ್ಮಾರಕಗಳು ಕೂಡ ತುಳುನಾಡಿನಲ್ಲಿ ಪತ್ತೆಯಾಗಿವೆ ಎಂದು ಅವರು ತಿಳಿಸಿದರು.

ಸಂಶೋಧಕ ಪ್ರೊ.ಆರ್.ಶೇಷಶಾಸ್ತ್ರೀ ಅವರಿಗೆ ತಾಳ್ತಜೆ ಕೇಶವ ಭಟ್ಟ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಯಿತು. ಅಧ್ಯಕ್ಷತೆಯನ್ನು ಅಕಾಡೆಮಿಯ ಆಡಳಿ ತಾಧಿಕಾರಿ ಡಾ.ಎಚ್.ಶಾಂತಾರಾಮ್ ವಹಿಸಿದ್ದರು. ಪ್ರಶಸ್ತಿ ಸಮಿತಿಯ ಟಿ.ಕೆ. ರಘುಪತಿ ಉಪಸ್ಥಿತರಿದ್ದರು.

ಸಮಿತಿಯ ಡಾ. ತಾಳ್ತಜೆ ವಸಂತ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಕೇಂದ್ರದ ಸಂಯೋಜನಾಧಿಕಾರಿ ಪ್ರೊ.ವರದೇಶ ಹಿರೇಗಂಗೆ ಸ್ವಾಗತಿಸಿ ದರು. ಸಹ ಸಂಯೋಜನಾಧಿಕಾರಿ ಡಾ.ಅಶೋಕ ಆಳ್ವ ವಂದಿಸಿದರು. ಡಾ. ಪಾದೇಕಲ್ಲು ವಿಷ್ಣು ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X