Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಕಿಡಿಗೇಡಿಗಳಿಂದ ಟಯರ್‌ಗೆ...

ಬಂಟ್ವಾಳ: ಕಿಡಿಗೇಡಿಗಳಿಂದ ಟಯರ್‌ಗೆ ಬೆಂಕಿ, ವಾಹನಗಳಿಗೆ ಕಲ್ಲು ತೂರಾಟ

ವಾರ್ತಾಭಾರತಿವಾರ್ತಾಭಾರತಿ25 Feb 2017 8:57 PM IST
share
ಬಂಟ್ವಾಳ: ಕಿಡಿಗೇಡಿಗಳಿಂದ ಟಯರ್‌ಗೆ ಬೆಂಕಿ, ವಾಹನಗಳಿಗೆ ಕಲ್ಲು ತೂರಾಟ

ಬಂಟ್ವಾಳ, ಫೆ. 25: ಮಂಗಳೂರು ಸೌಹಾರ್ದ ರ‍್ಯಾಲಿಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸುವುದನ್ನು ವಿರೋಧಿಸಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಸಂಘಪರಿವಾರ ಬಂದ್ ಯಶಸ್ವಿಗೊಳಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಹೊರತಾಗಿಯೂ ಬಂಟ್ವಾಳ ತಾಲೂಕಿನ ಹಲವೆಡೆ ರಸ್ತೆಯಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚಿರುವುದಲ್ಲದೆ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ಸಂಘಪರಿವಾರ ಬಂದ್‌ಗೆ ಕರೆನೀಡಿದ್ದರೂ ಶನಿವಾರ ಬೆಳಗ್ಗೆಯಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸರಕಾರಿ ಬಸ್‌ಗಳ ಸಹಿತ ಖಾಸಗಿ ವಾಹನಗಳು ಎಂದಿನಂತೆ ಸಂಚಾರಿಸುತ್ತಿದ್ದವು. ಬಂದ್‌ಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ಕಿಡಿಗೇಡಿಗಳು ತಾಲೂಕಿನ ಹಲವೆಡೆ ರಸ್ತೆಗಳಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚಿರುವುದು, ಸರಕಾರಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ.

ಶನಿವಾರ ಬೆಳಗ್ಗೆ ಬಂಟ್ವಾಳ ತಾಲೂಕಿನ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಸರಕಾರಿ ಬಸ್‌ಗೆ ತೂರಾಟ ನಡೆದಿದ್ದು, ವಿಟ್ಲದ ಕುದ್ದುಪದವು ಎಂಬಲ್ಲಿಯೂ ಕಲ್ಲೆಸೆತ ನಡೆದಿದೆ. ಕಲ್ಲಡ್ಕ ಆಸುಪಾಸಿನ ಪುರ್ಲಿಪಾಡಿ, ಕೆ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್‌ಗಳನ್ನಿಟ್ಟು ಬೆಂಕಿ ಹಚ್ಚಿದ್ದಾರೆ. ವಿಟ್ಲ ಸರಕಾರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ 6 ಬಸ್‌ಗಳ ಪೈಕಿ ಒಂದು ಬಸ್ ನ ಹಿಂಬದಿಯ ಟೈಯರ್‌ಗೆ ಬೆಂಕಿ ಹಾಕಿದ್ದಾರೆ.

 ಕಂಬಳಬೆಟ್ಟು ಸೇತುವೆ ಮೇಲೆ ಹಾಗೂ ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ರೇಲ್ವೆ ಸೇತುವೆ ಕೆಳಗಡೆ ರಸ್ತೆ ಮಧ್ಯೆದಲ್ಲಿ ಚಕ್ರಕ್ಕೆ ಬೆಂಕಿ ಹಚ್ಚಲಾಗಿದ್ದು ಕಂಬಳಬೆಟ್ಟು ಹಾಗೂ ಉರಿಮಜಲು ಎಂಬಲ್ಲಿ ಆಲದ ಮರದ ಗೆಲ್ಲುಗಳನ್ನು ಕಡಿದು ರಸ್ತೆ ಹಾಕಿ ಸಂಚಾರಕ್ಕೆ ತೊಂದರೆ ನೀಡಲಾಗಿದೆ. ಕುದ್ದುಪದವಿನಲ್ಲಿ ಪೊಲೀಸ್ ಇಲಾಖೆಯ ನಾಕಬೇಲಿಗಳನ್ನು ನಡು ರಸ್ತೆಯಲ್ಲಿಡುವ ಮೂಲಕ ಸಂಚಾರಕ್ಕೆ ತೊಡಕು ಮಾಡಿದರು. ವಿಟ್ಲದ ಕುದ್ದುಪದವಿನಲ್ಲಿ ಕೇರಳ ಖಾಸಗಿ ಬಸ್‌ಗೆ, ಕನ್ಯಾನದ ಮಲ್ಲಿಕಟ್ಟೆ ಹಾಗೂ ವಿಟ್ಲ ಪೇಟೆಯಲ್ಲಿ ಮೂರು ಸರಕಾರಿ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ.

ಕಲ್ಲಡ್ಕ-ಕಾಂಞಂಗಾಡು ಹೆದ್ದಾರಿಯ ಒಕ್ಕೆತ್ತೂರು ಎಂಬಲ್ಲಿ ರಸ್ತೆ ಪಕ್ಕದಲ್ಲಿ ಎಂದಿನಂತೆ ನಿಲ್ಲಿಸಿದ್ದ ಇಲ್ಲಿನ ನಿವಾಸಿ ಅಬೂಬಕ್ಕರ್ ಎಂಬವರಿಗೆ ಸೇರಿದ ಲಾರಿಗೆ ಶನಿವಾರ ಬೆಳಗ್ಗಿನ ಜಾವ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ. ಲಾರಿಗೆ ಬೆಂಕಿ ಬಿದ್ದ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಬಂಟ್ವಾಳ ಆಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ತೀವ್ರತೆಗೆ ಲಾರಿಯ ಮುಂಭಾಗ ಸುಟ್ಟು ಕರಕಲಾಗಿದೆ.

ಬಂದ್ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಮೂಡಿದ್ದರಿಂದ ಹಾಗೂ ಖಾಸಗಿ ಬಸ್‌ಗಳು ರಸ್ತೆಗಿಳಿಯದ ಕಾರಣ ತಾಲೂಕಿನ ಪ್ರಮುಖ್ಯ ವ್ಯವಹಾರ ಕೇಂದ್ರಗಳಾದ ಬಿ.ಸಿ.ರೋಡ್, ಮೆಲ್ಕಾರ್, ಕಲ್ಲಡ್ಕ, ವಿಟ್ಲ, ಫರಂಗಿಪೇಟೆಯಲ್ಲಿ ಜನಜೀವನ ಸ್ಥಬ್ದಗೊಂಡಿತ್ತು. ಆದರೆ ಫರಂಗಿಪೇಟೆಯಲ್ಲಿ ಬಹುತೇಕ, ಬಿ.ಸಿ.ರೋಡ್, ಮೇಲ್ಕಾರ್‌ಗಳಲ್ಲಿ ಕೆಲವು ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು. ಮಾಣಿ ಶನಿವಾರ ಸಂತೆ ನಡೆದಿದ್ದರೂ ಖಾಸಗಿ ಬಸ್‌ಗಳು ಇಲ್ಲದಿದ್ದರಿಂದ ಸಂತೆಯಲ್ಲಿ ಜನರು ವಿರಳವಾಗಿದ್ದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಾಲೂಕಿನಾದ್ಯಂತ ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ಡಾ. ರವೀಶ್ ಸಿ.ಆರ್. ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X