Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದಿನ ಸಮಸ್ಯೆಗಳಿಗೆ ಪರಿಹಾರ...

ಇಂದಿನ ಸಮಸ್ಯೆಗಳಿಗೆ ಪರಿಹಾರ ಮೌಲ್ಯಾಧಾರಿತ ಶಿಕ್ಷಣದಲ್ಲಿದೆ: ಶ್ರೀಮಾತಾ ಅಮೃತಾನಂದಮಯಿ ದೇವಿ

ವಾರ್ತಾಭಾರತಿವಾರ್ತಾಭಾರತಿ25 Feb 2017 9:33 PM IST
share
ಇಂದಿನ ಸಮಸ್ಯೆಗಳಿಗೆ ಪರಿಹಾರ ಮೌಲ್ಯಾಧಾರಿತ ಶಿಕ್ಷಣದಲ್ಲಿದೆ:  ಶ್ರೀಮಾತಾ ಅಮೃತಾನಂದಮಯಿ ದೇವಿ

ಉಡುಪಿ, ಫೆ.25: ಇಂದು ಸಮಾಜ ಎದುರಿಸುತ್ತಿರುವ ಹೆಚ್ಚಿನೆಲ್ಲಾ ಸಮಸ್ಯೆಗಳಿಗೆ ಪರಿಹಾರ ಮೌಲ್ಯಾಧಾರಿತ ಶಿಕ್ಷಣದಲ್ಲಿದೆ ಎಂದು ಸದ್ಗುರು ಶ್ರೀಮಾತಾ ಅಮೃತಾನಂದಮಯಿ ದೇವಿ ಹೇಳಿದ್ದಾರೆ.

ಉಡುಪಿ ಜಿಲ್ಲೆಗೆ ಪ್ರಪ್ರಥಮ ಬಾರಿಗೆ ಭೇಟಿ ನೀಡಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಉಡುಪಿ ಶ್ರೀಮಾತಾ ಅಮೃತಾನಂದಮಯಿ ಸೇವಾ ಸಮಿತಿಯಿಂದ ಆಯೋಜಿಸಲಾದ 'ಅಮೃತ ವೈಭವ' ದಲ್ಲಿ ನೆರೆದ ಸಹಸ್ರಾರು ಮಂದಿ ಭಕ್ತರನ್ನುದ್ದೇಶಿಸಿ ಪ್ರವಚನ ನೀಡಿ ಮಾತನಾಡುತಿದ್ದರು.

ಎರಡು ರೀತಿಯ ವಿದ್ಯಾಭ್ಯಾಸವಿದೆ. ಜೀವನಕ್ಕಾಗಿ ವಿದ್ಯಾಭ್ಯಾಸ ಹಾಗೂ ಜೀವನೋಪಾಯಕ್ಕಾಗಿ ವಿದ್ಯಾಭ್ಯಾಸ. ಶಿಕ್ಷಣದ ಉದ್ದೇಶ ಯತ್ರಗಳ ಭಾಷೆ ಕಲಿಯುವುದಲ್ಲ. ಬದಲಿಗೆ ಹೃದಯವಂತಿಕೆಯನ್ನು ಕಲಿಯುವದಾಗಿದೆ. ನೈತಿಕ ಹಾಗೂ ಆಧ್ಯಾತ್ಮಿಕ ವೌಲ್ಯಗಳನ್ನು ಆಧರಿಸಿದ ಸಂಸ್ಕಾರ ನೀಡುವುದಾಗಿದೆ ಎಂದರು.

ಭಯೋತ್ಪಾದನೆ ಮನುಕುಲದ ದೈನಂದಿಕ ಸಮಸ್ಯೆಯಾಗಿದೆ. ದು:ಸ್ವಪ್ನಕ್ಕಿಂತಲೂ ಭಯಾನಕವಾದ ಜಾಗೃತ ಅವಸ್ಥೆಯಲ್ಲಿ ನಾವಿದ್ದೇವೆ. ಇಂದು ಮನುಷ್ಯ ನಡೆದಾಡುವ ದುರಂತ ಎನಿಸಿಕೊಂಡಿದ್ದಾನೆ. ಆತನ ಮನಸ್ಸು ತನ್ನ ವಿವೇಕವನ್ನೇ ಕಳೆದುಕೊಂಡಿದೆ ಎಂದು ಶ್ರೀಮಾತಾ ಖೇಧ ವ್ಯಕ್ತಪಡಿಸಿದರು.

ಆರಂಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾ ಆಮೃತಾನಂದಮಯಿ ವತಿಯಿಂದ ಉಡುಪಿ ಜನತೆಗೆ ಹಲವು ಸೇವಾ ಚಟುವಟಿಕೆಗಳನ್ನು ಲೋಕಾರ್ಪಣೆ ಮಾಡಲಾಯಿತು. ಅಮೃತಶ್ರೀ ಮಹಿಳಾ ಸಬಲೀಕರಣ ಯೋಜನೆಯಡಿ 20ಕ್ಕೂ ಅಧಿಕ ಮಹಿಳೆಯರಿಗೆ ಕಿಟ್‌ಗಳನ್ನು ವಿತರಿಸಲಾಯಿತು.

ಅಲ್ಲದೇ ಗೋದಾನ, ಹಲವು ಅಂಗನವಾಡಿಗಳಿಗೆ ನೀರು ಶುದ್ಧೀಕರಣ ಯಂತ್ರ ಕೊಡುಗೆ, ಸ್ವಚ್ಛತಾ ಕೆಲಸ ನಿರ್ವಹಿಸುವ ಉಡುಪಿಯ ಪೌರಕಾರ್ಮಿಕರಿಗೆ ಕಿಟ್‌ಗಳನ್ನು ಮಾತೆ ವಿತರಿಸಿದರು.

ಸಮಾರಂಭದಲ್ಲಿ ರಾಜ್ಯ ಧಾರ್ಮಿಕ ದತ್ತಿ ಸಚಿವ ರುದ್ರಪ್ಪ ಮಾನಪ್ಪ ಲಮ್ಹಾಣಿ, ಜಿಲ್ಲಾ ಉಸ್ತುವಾರಿ ಸಚಿವ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಪ್ರಮೋದ್ ಮಧ್ವರಾಜ್, ಸಂಸದೆ ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಮಣಿಪಾಲ ವಿವಿಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಸೇವಾ ಸಮಿತಿ ಜಿಲ್ಲಾಧ್ಯಕ್ಷ ಶ್ರೀಧರ ಕಿನ್ನಿಮುಲ್ಕಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ವತಿಯಿಂದ ಮಾತಾ ಅಮೃತಾನಂದಮಯಿ ಅವರಿಗೆ ಕಡಗೋಲು ಕೃಷ್ಣನ ಪಂಚಲೋಹದ ಮೂರ್ತಿಯನ್ನು ನೀಡಿ ಗೌರವಿಸ ಲಾಯಿತು. ಸಮಿತಿಯ ಕಾರ್ಯಾಧ್ಯಕ್ಷ ರಘುಪತಿ ಭಟ್ ಅತಿಥಿಗಳನ್ನು ಸ್ವಾಗತಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಮಾತಾ ಅಮೃತಾನಂದಮಯಿ ಅವರಿಂದ ಪ್ರವಚನ, ಸತ್ಸಂಗ, ಭಜನೆ, ಧ್ಯಾನ ಕಾರ್ಯಕ್ರಮ ನಡೆಯಿತು. ಅದಾದ ಬಳಿಕ ಅಮ್ಮ, ನೆರೆದ ಪ್ರತಿಯೊಬ್ಬ ಭಕ್ತರಿಗೂ ದರ್ಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X