Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ವೇತಭವನದ ಉದ್ಯೋಗಕ್ಕೆ ಮುಸ್ಲಿಮ್ ಮಹಿಳೆ...

ಶ್ವೇತಭವನದ ಉದ್ಯೋಗಕ್ಕೆ ಮುಸ್ಲಿಮ್ ಮಹಿಳೆ ರಾಜೀನಾಮೆ

ಮುಸ್ಲಿಮ್ ಪ್ರವೇಶ ನಿಷೇಧ ಆದೇಶದ ಪರಿಣಾಮ

ವಾರ್ತಾಭಾರತಿವಾರ್ತಾಭಾರತಿ26 Feb 2017 8:08 PM IST
share
ಶ್ವೇತಭವನದ ಉದ್ಯೋಗಕ್ಕೆ ಮುಸ್ಲಿಮ್ ಮಹಿಳೆ ರಾಜೀನಾಮೆ

ವಾಶಿಂಗ್ಟನ್, ಫೆ. 26: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಮುಸ್ಲಿಮ್ ಪ್ರವೇಶ ನಿಷೇಧ ನೀತಿಯನ್ನು ಜಾರಿಗೆ ತಂದ ಬಳಿಕ, ಶ್ವೇತಭವನದಲ್ಲಿ ಕೆಲಸ ಮಾಡುತ್ತಿದ್ದ ಹಿಜಾಬ್‌ಧಾರಿಣಿ ಮುಸ್ಲಿಮ್ ಮಹಿಳೆಯೊಬ್ಬರು ರಾಜೀನಾಮೆ ನೀಡಿದ್ದಾರೆ.

ಬಾಂಗ್ಲಾದೇಶ ಮೂಲದ ರುಮಾನಾ ಅಹ್ಮದ್ ಟ್ರಂಪ್ ಆಡಳಿತದಲ್ಲಿ ಕೇವಲ ಎಂಟು ದಿನಗಳ ಕಾಲ ಕೆಲಸ ಮಾಡಿದ್ದಾರೆ.
ರುಮಾನಾರನ್ನು 2011ರಲ್ಲಿ ಶ್ವೇತಭವನದಲ್ಲಿ ಕೆಲಸಕ್ಕೆ ನೇಮಿಸಲಾಗಿತ್ತು. ಬಳಿಕ ಅವರು ರಾಷ್ಟ್ರೀಯ ಭದ್ರತಾ ಮಂಡಳಿ (ಎನ್‌ಎಸ್‌ಸಿ)ಯಲ್ಲಿ ಕೆಲಸ ಮಾಡಿದರು.

ಟ್ರಂಪ್ ನಮ್ಮ ಸಮುದಾಯದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾಗ, 2016ರ ಹೆಚ್ಚಿನ ಭಾಗವನ್ನು ನಾನು ಇತರ ಹೆಚ್ಚಿನ ಅಮೆರಿಕನ್ ಮುಸ್ಲಿಮರಂತೆ ‘ಗಾಬರಿ’ಯಿಂದಲೇ ಗಮನಿಸುತ್ತಿದ್ದೆ ಎಂದು ಅವರು ‘ದ ಅಟ್ಲಾಂಟಿಕ್’ನಲ್ಲಿ ಪ್ರಕಟಗೊಂಡ ಲೇಖನವೊಂದರಲ್ಲಿ ಅವರು ಬರೆದಿದ್ದಾರೆ.

‘‘ಇದರ ಹೊರತಾಗಿಯೂ, ಅಥವಾ ಇದೇ ಕಾರಣಕ್ಕಾಗಿ, ಟ್ರಂಪ್ ಆಡಳಿತದಲ್ಲಿ ಎನ್‌ಎಸ್‌ಸಿ ಉದ್ಯೋಗಿಯಾಗಿ ಮುಂದುವರಿಯಲು ನಾನು ಪ್ರಯತ್ನಿಸಬೇಕು ಎಂದು ಯೋಚಿಸಿದೆ. ನೂತನ ಅಧ್ಯಕ್ಷರು ಹಾಗೂ ಅವರ ಸಹಾಯಕರಿಗೆ ಇಸ್ಲಾಮ್ ಮತ್ತು ಅಮೆರಿಕದ ಮುಸ್ಲಿಮ್ ನಾಗರಿಕರ ಕುರಿತು ಹೆಚ್ಚಿನ ತಿಳುವಳಿಕೆ ನೀಡಲು ನಾನು ಮುಂದಾಗಬೇಕು ಎಂದು ಬಯಸಿದೆ’’ ಎಂದರು.

‘‘ನಾನು ಎಂಟು ದಿನಗಳ ಕಾಲ ಮಾತ್ರ ಉಳಿದೆ. ಏಳು ಮುಸ್ಲಿಮ್ ಬಾಹುಳ್ಯದ ದೇಶಗಳ ಪ್ರವಾಸಿಗರು ಮತ್ತು ಸಿರಿಯದ ನಿರಾಶ್ರಿತರಿಗೆ ಅಮೆರಿಕ ಪ್ರವೇಶವನ್ನು ಟ್ರಂಪ್ ನಿಷೇಧಿಸಿದಾಗ, ನನ್ನನ್ನು ಮತ್ತು ನನ್ನಂಥ ಜನರನ್ನು ಸಹ ನಾಗರಿಕರು ಎಂದು ನೋಡದೆ ಬೆದರಿಕೆಯೆಂಬಂತೆ ನೋಡುವ ಆಡಳಿತದಲ್ಲಿ ಕೆಲಸ ಮಾಡುವುದು ಸಾಧ್ಯವಿಲ್ಲ ಎಂದು ನನಗೆ ಮನದಟ್ಟಾಯಿತು’’ ಎಂದು ರುಮಾನಾ ಬರೆದಿದ್ದಾರೆ.


ಅಮೆರಿಕದ ಶ್ರೇಷ್ಠತೆಯನ್ನು ಬಿಂಬಿಸುವುದು ನನ್ನ ಕೆಲಸವಾಗಿತ್ತು

‘‘ನನ್ನ ದೇಶ ಯಾವುದರ ಪರವಾಗಿದೆಯೋ ಅದನ್ನು ಅತ್ಯುತ್ತಮ ರೀತಿಯಲ್ಲಿ ಬಿಂಬಿಸುವುದು ಮತ್ತು ಕಾಪಾಡಿಕೊಂಡು ಬರುವುದು ನನ್ನ ಕೆಲಸವಾಗಿತ್ತು. ನಾನು ಹಿಜಾಬ್ ಧರಿಸುವ ಮುಸ್ಲಿಮ್ ಮಹಿಳೆ. ಶ್ವೇತಭವನದ ವೆಸ್ಟ್ ವಿಂಗ್‌ನಲ್ಲಿ ನಾನೊಬ್ಬಳೇ ಹಿಜಾಬ್ ಧರಿಸುವುದು. ಒಬಾಮ ಆಡಳಿತದಲ್ಲಿ ನಾನು ಇಲ್ಲಿಗೆ ಬೇಕಾದವಳು ಹಾಗೂ ಇಲ್ಲಿಗೆ ಸೇರಿದವಳು ಎಂಬ ಭಾವನೆ ನನ್ನಲ್ಲಿ ಬರುತ್ತಿತ್ತು’’ ಎಂದು ರುಮಾನಾ ‘ದಿ ಅಟ್ಲಾಂಟಿಕ್’ನಲ್ಲಿ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X