Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದಿಲ್ಲಿ ಮ್ಯಾರಥಾನ್: ಗೋಪಿ, ಮೋನಿಕಾ...

ದಿಲ್ಲಿ ಮ್ಯಾರಥಾನ್: ಗೋಪಿ, ಮೋನಿಕಾ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ26 Feb 2017 11:32 PM IST
share
ದಿಲ್ಲಿ ಮ್ಯಾರಥಾನ್: ಗೋಪಿ, ಮೋನಿಕಾ ಚಾಂಪಿಯನ್

ಹೊಸದಿಲ್ಲಿ, ಫೆ.26: ದ್ವಿತೀಯ ಆವೃತ್ತಿಯ ದಿಲ್ಲಿ ಮ್ಯಾರಥಾನ್‌ನಲ್ಲಿ ರಿಯೋ ಒಲಿಂಪಿಯನ್ ಟಿ. ಗೋಪಿ ಹಾಗೂ ಮೋನಿಕಾ ಅಥರೆ ಕ್ರಮವಾಗಿ ಪುರುಷರ ಹಾಗೂ ಮಹಿಳೆಯರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

ರವಿವಾರ ಐಡಿಬಿಐ ಫೆಡರಲ್ ಲೈಫ್ ಇನ್ಯೂನೆನ್ಸ್ ಪ್ರಾಯೋಜಕತ್ವದಲ್ಲಿ ನಡೆದ ಮ್ಯಾರಥಾನ್‌ನಲ್ಲಿ ಗೋಪಿ 2 ಗಂಟೆ, 15 ನಿಮಿಷ, 37 ಸೆಕೆಂಡ್‌ನಲ್ಲಿ ಗುರಿ ತಲುಪಿದರು. ಈ ಮೂಲಕ ಮೊದಲ ಬಾರಿ ಪೂರ್ಣ ಮ್ಯಾರಥಾನ್‌ನಲ್ಲಿ ವಿಜಯಿಯಾದರು.

ಪುಣೆಯ ಆರ್ಮಿ ಸ್ಪೋರ್ಟ್ಸ್ ಸಂಸ್ಥೆಯನ್ನು ಪ್ರತಿನಿಧಿಸುತ್ತಿರುವ ಗೋಪಿ ಆಗಸ್ಟ್‌ನಲ್ಲಿ ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಈಗಾಗಲೇ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ರಿಯೋ ಒಲಿಂಪಿಕ್ಸ್‌ನಲ್ಲಿ 2:15.25 ಸೆಕೆಂಡ್‌ನಲ್ಲಿ ಗುರಿ ತಲುಪಿದ್ದ ಗೋಪಿ 25ನೆ ಸ್ಥಾನ ಪಡೆದಿದ್ದರು.

ಪುಣೆಯ ಆರ್ಮಿ ಸ್ಪೋರ್ಟ್ಸ್ ಸಂಸ್ಥೆಯ ಬಹಾದೂರ್ ಸಿಂಗ್ ಧೋನಿ(2:16:09) ಹಾಗೂ ಟಿಎಚ್ ಸಂಜಿತ್(2:17:20) 42.19 ಕಿ.ಮೀ.ದೂರವನ್ನು ಕ್ರಮಿಸಿ ಕ್ರಮವಾಗಿ 2ನೆ ಹಾಗೂ 3ನೆ ಸ್ಥಾನವನ್ನು ಪಡೆದರು.

ಮಹಿಳೆಯರ ಪೂರ್ಣ ಮ್ಯಾರಥಾನ್‌ನಲ್ಲಿ ನಾಸಿಕ್‌ನ ಮೋನಿಕಾ ಅಥರೆ 2:39:08 ನಿಮಿಷದಲ್ಲಿ ಗುರಿ ತಲುಪಿ ಮೊದಲ ಸ್ಥಾನ ಪಡೆದು ಚೊಚ್ಚಲ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು. ಆರಂಭದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡ ಮೋನಿಕಾ ರೇಸ್‌ನ್ನು ಸುಲಭವಾಗಿ ಗೆದ್ದುಕೊಂಡರು. 2:45:00 ನಿಮಿಷದಲ್ಲಿ ಗುರಿ ತಲುಪಿದ್ದ ಮೋನಿಕಾ ಈಗಾಗಲೇ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ.

ಜ್ಯೋತಿ ಗವಾಟೆ(2:53:48) ಹಾಗೂ ರಂಜನ್ ಕುಮಾರಿ(3:08:04) ಕ್ರಮವಾಗಿ ಎರಡನೆ ಹಾಗೂ ಮೂರನೆ ಸ್ಥಾನ ಪಡೆದರು.

ಕ್ರಿಕೆಟ್ ಐಕಾನ್ ಸಚಿನ್ ತೆಂಡುಲ್ಕರ್ ಹಾಗೂ ದೂರದ ಓಟದ ದಂತಕತೆ ಇಥಿಯೋಪಿಯದ ಹೈಲಿ ಗೆಬ್ರೆಸ್‌ಲಸ್ಸಿ ಮ್ಯಾರಥಾನ್‌ಗೆ ಚಾಲನೆ ನೀಡಿದರು.

‘‘ಪ್ರಶಸ್ತಿ ಜಯಿಸಿ ತುಂಬಾ ಸಂತೋಷವಾಗಿದೆ. ಧೋನಿ ಹಾಗೂ ನಾನು ಆರಂಭದಿಂದ 25ಕೀ.ಮೀ.ತನಕ ಒಟ್ಟಿಗೆ ಇದ್ದೆವು. 2017ರಲ್ಲಿ ಇದು ನನ್ನ ಮೊದಲ ಮ್ಯಾರಥಾನ್. ಜೂನ್‌ನಲ್ಲಿ ರಾಂಚಿಯಲ್ಲಿ ಏಷ್ಯನ್ ಚಾಂಪಿಯನ್‌ಶಿಪ್ ಹಾಗೂ ಲಂಡನ್‌ನಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವೆ’’ಎಂದು ಗೋಪಿ ಹೇಳಿದ್ದಾರೆ.

ನಾನು ಇದೇ ಮೊದಲ ಬಾರಿ ಫುಲ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದೇನೆ. ಮ್ಯಾರಥಾನ್‌ನಲ್ಲಿ ವಿಜಯಿಯಾಗಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. 2:40ನಿಮಿಷದೊಳಗೆ ಓಟವನ್ನು ಕೊನೆಗೊಳಿಸಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಫುಲ್ ಮ್ಯಾರಥಾನ್ ಬಳಿಕ ಮೋನಿಕಾ ಹೇಳಿದರು.

ಹಾಫ್ ಮ್ಯಾರಥಾನ್‌ನ ಪುರುಷರ ವಿಭಾಗದಲ್ಲಿ ಜಿ. ಲಕ್ಷ್ಮಣನ್ 1:04:29 ನಿಮಿಷದಲ್ಲಿ ಗುರಿ ತಲುಪಿ ಮೊದಲ ಸ್ಥಾನ ಪಡೆದರು. ಮಾನ್ ಸಿಂಗ್(1:04:19)) ಹಾಗೂ ಒಲಿಂಪಿಯನ್ ಖೇತ ರಾಮ್(1:06:15) ಕ್ರಮವಾಗಿ 2ನೆ ಹಾಗೂ 3ನೆ ಸ್ಥಾನ ಪಡೆದರು.

 ಮಹಿಳೆಯರ ವಿಭಾಗದಲ್ಲಿ ಮಂಜೂ ಯಾದವ್(1:21:02) ಮೊದಲ ಸ್ಥಾನ ಪಡೆದರೆ, ಅರ್ಪಿತಾ ಸೈನಿ(1:25:34) ಹಾಗೂ ನೀತು ಸಿಂಗ್(1:27:11) 2ನೆ ಹಾಗೂ 3ನೆ ಸ್ಥಾನ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X