Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಧ್ಯಕ್ಷ-ಸದಸ್ಯ ಸ್ಥಾನಕ್ಕೆ ಮುಂದುವರಿದ...

ಅಧ್ಯಕ್ಷ-ಸದಸ್ಯ ಸ್ಥಾನಕ್ಕೆ ಮುಂದುವರಿದ ಲಾಬಿ

ಮುಗಿದ ಸಾಹಿತ್ಯ ಅಕಾಡಮಿಗಳ ಅಕಾರಾವ

ಹಂಝ ಮಲಾರ್ಹಂಝ ಮಲಾರ್26 Feb 2017 11:37 PM IST
share
ಅಧ್ಯಕ್ಷ-ಸದಸ್ಯ ಸ್ಥಾನಕ್ಕೆ ಮುಂದುವರಿದ ಲಾಬಿ

ಮಂಗಳೂರು, ೆ.26: ಮಂಗಳೂರಿನಲ್ಲಿ ಕಚೇರಿಯನ್ನು ಹೊಂದಿರುವ ತುಳು, ಕೊಂಕಣಿ ಸಾಹಿತ್ಯ ಅಕಾಡಮಿಗಳ ಅಕಾರಾವ ೆ.26ಕ್ಕೆ ಕೊನೆಗೊಂಡಿದ್ದು, ನೂತನ ಅಧ್ಯಕ್ಷ-ಸದಸ್ಯ ಸ್ಥಾನಕ್ಕಾಗಿ ಲಾಬಿ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕಾರ ಸ್ವೀಕರಿಸಿದ ಒಂದು ವರ್ಷದ ಬಳಿಕ ತುಳು, ಕೊಂಕಣಿ, ಬ್ಯಾರಿ ಅಕಾಡಮಿಗಳ ಅಧ್ಯಕ್ಷ-ಸದಸ್ಯರ ನೇಮಕ ಮಾಡಲಾಗಿತ್ತು. ಕೊಡವ ಮತ್ತು ಅರೆ ಭಾಷೆ ಅಕಾಡಮಿಗೆ ನೇಮಕಮಾಡುವಾಗ ಮತ್ತಷ್ಟು ವಿಳಂಬವಾಗಿತ್ತು.

ಬ್ಯಾರಿ ಅಕಾಡಮಿಯ ನಿಕಟಪೂರ್ವ ಅಧ್ಯಕ್ಷರು ಹೈಕೋರ್ಟ್ ಮೆಟ್ಟಲೇರಿದ ಕಾರಣ 2014ರಲ್ಲಿ ಸರಕಾರ ತಾನು ನೇಮಕ ಮಾಡಿದ್ದ ಆದೇಶವನ್ನು ವಾಪಸ್ ಪಡೆದಿತ್ತು. ಪ್ರಕರಣ ನ್ಯಾಯಾಲಯದಿಂದ ಮುಕ್ತಗೊಳ್ಳಲು ನಾಲ್ಕೆದು ತಿಂಗಳು ಬೇಕಾಗಿತ್ತು. ಅದರಂತೆ ಸರಕಾರ ಬ್ಯಾರಿ ಅಕಾಡಮಿಯ ಅಧ್ಯಕ್ಷ-ಸದಸ್ಯರ ಪಟ್ಟಿಯನ್ನು ಮತ್ತೊಮ್ಮೆ ಬಿಡುಗಡೆಗೊಳಿಸಿತ್ತು.

ತುಳು, ಕೊಂಕಣಿ ಅಕಾಡಮಿಯ ಅವಯು ೆ.26ಕ್ಕೆ ಕೊನೆಗೊಂಡಿದ್ದರೂ ಬ್ಯಾರಿ ಅಕಾಡಮಿಯ ಅವ ಆಗಸ್ಟ್‌ವರೆಗೆ ಮುಂದು ವರಿಯುವ ಸಾಧ್ಯತೆ ನಿಚ್ಚಳ ವಾಗಿದೆ. ಆದರೂ ಮೂರು ಅಕಾಡಮಿಗಳ ಅಧ್ಯಕ್ಷ-ಸದಸ್ಯ ಸ್ಥಾನಕ್ಕೆ ಬಿರುಸಿನ ಪೈಪೋಟಿ ಆರಂಭವಾಗಿದೆ.

1994ರಲ್ಲಿ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದಾಗ ಭಾಷಾ ಅಕಾಡಮಿಗಳ ಸ್ಥಾಪನೆಗೆ ನಾಂದಿ ಹಾಡಿದ್ದರು. ಆವಾಗ ಸಾಹಿತ್ಯ, ಭಾಷೆ, ಸಂಸ್ಕೃತಿಗೆ ಸಂಬಂಧಪಟ್ಟು ಕೆಲಸ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಸರಕಾರ ಬದಲಾವಣೆಗೊಂಡಾಗಲೆಲ್ಲಾ ಅಕಾಡಮಿಗಳ ಅಧ್ಯಕ್ಷ-ಸದಸ್ಯರ ಬದಲಾವಣೆಯಾಗತೊಡಗಿತು. ಹಾಗಾಗಿ ಅಕಾಡಮಿಗಳ ಉದ್ದೇಶ ಏನು ಎಂದು ಗೊತ್ತಿಲ್ಲದವರು ಕೂಡ ಸದಸ್ಯರಾಗಿ ನೇಮಕ ಗೊಳ್ಳತೊಡಗಿದರು. ಕೆಲವರಿಗೆ ಇದು ಗಂಜಿಕೇಂದ್ರವಾಗಿಯೂ ಮಾರ್ಪಾಟು ಆಗಿತ್ತು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇದೆ. ಮೂರು ಅಕಾಡಮಿಗಳ ಅಧ್ಯಕ್ಷ -ಸದಸ್ಯ ಸ್ಥಾನಕ್ಕಾಗಿ ಕಾಂಗ್ರೆಸ್‌ನೊಳಗೆ ಪೈಪೋಟಿಯೂ ಇದೆ. ಹಾಲಿ ಸರಕಾರದ ಅವ ಇನ್ನು ಕೇವಲ 1 ವರ್ಷವಿದ್ದು, ಈಗ ನೇಮಕಗೊಂಡರೆ ಹೊಸ ಸರಕಾರ ಬಂದಾಗ ಮತ್ತೆ ಬದಲಾವಣೆಯಾಗಬಹುದು ಎಂಬ ಕಾರಣಕ್ಕಾಗಿ ಕೆಲವರು ಆಸಕ್ತಿ ವಹಿಸುತ್ತಿಲ್ಲ ಎನ್ನಲಾಗಿದೆ. ಆದರೆ ವರ್ಷ ಒಂದಿರಲಿ, ಎರಡಿರಲಿ ಒಮ್ಮೆ ಅಧ್ಯಕ್ಷ ಅಥವಾ ಸದಸ್ಯರಾದರೆ ಸಾಕು ಎಂಬ ಭಾವನೆ ಹೊಂದಿದವರು ಪಕ್ಷದ ಶಾಸಕರು, ಸಚಿವರೊಂದಿಗೆ ಲಾಬಿ ಆರಂಭಿಸಿದ್ದಾರೆ. ಈ ಮಧ್ಯೆ ಸಾಹಿತ್ಯ ಪರಿಚಾರಿಕೆ ಮಾಡುವವರು ವೌನವಾಗಿ ಉಳಿದಿರುವುದು ಸುಳ್ಳಲ್ಲ.

ಕೊಂಕಣಿಯನ್ನು ಹಿಂದೂ, ಮುಸ್ಲಿಮ್, ಕ್ರೈಸ್ತ ಧರ್ಮಗಳಿಗೆ ಸೇರಿದ 41 ಸಮುದಾಯಗಳ ಜನರು ಮಾತನಾಡುತ್ತಾರೆ. ಹೆಚ್ಚಿನ ಸಮುದಾಯವು ಉತ್ತರ ಕರ್ನಾಟಕದಲ್ಲಿರುವುದು ವಿಶೇಷ. ಹಾಗಾಗಿ ಕೊಂಕಣಿ ಅಕಾಡಮಿಯ ಅಧ್ಯಕ್ಷ ಸ್ಥಾನ ಮಾತ್ರವಲ್ಲ ಅಕಾಡಮಿಯ ಕಚೇರಿಯನ್ನೂ ಕಾರವಾರಕ್ಕೆ ಸ್ಥಳಾಂತರಿಸಬೇಕು ಎಂಬ ಪ್ರಯತ್ನ ನಡೆಯುತ್ತಿದೆ.

ಇನ್ನು ತುಳು ಭಾಷೆಯನ್ನು ಬೇರೆ ಬೇರೆ ಜಾತಿಯ ಮಂದಿ ಮಾತನಾಡುತ್ತಾರೆ. ಕಳೆದ ಬಾರಿ ಸ್ವಲ್ಪದರಲ್ಲೇ ಅಧ್ಯಕ್ಷ ಸ್ಥಾನ ತಪ್ಪಿದವರಿಗೆ ಈ ಬಾರಿ ಸಿಗುವ ಸಾಧ್ಯತೆಯಿದೆ. ಕಾಂಗ್ರೆಸ್‌ನ ಈ ಹಿರಿಯ ಮುಖಂಡರಿಗೆ ಅಧ್ಯಕ್ಷ ಸ್ಥಾನ ಖಚಿತವಾದರೂ ಆಕಾಂಕ್ಷಿಗಳು ಸ್ಪರ್ಧೆಯಿಂದ ದೂರ ಉಳಿದಿಲ್ಲ.

 ಬ್ಯಾರಿ ಅಕಾಡಮಿಗೆ ಕಳೆದ ಅವಯಲ್ಲಿ ಸ್ವಲ್ಪದರಲ್ಲೇ ಅಧ್ಯಕ್ಷ ಸ್ಥಾನದಿಂದ ವಂಚಿತ ರಾದವರ ಸಹಿತ 10ಕ್ಕೂ ಅಕ ಮಂದಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಸದಸ್ಯ ಸ್ಥಾನಕ್ಕೂ ಭಾರೀ ಲಾಬಿ ಇದೆ. ಯಾವುದಕ್ಕೂ ಸಚಿವರ, ಶಾಸಕರ ಹಸಿರು ನಿಶಾನೆ ಸಿಗಬೇಕಿದೆ.

share
ಹಂಝ ಮಲಾರ್
ಹಂಝ ಮಲಾರ್
Next Story
X