Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ವರ್ಷ ಕೇರಳದಲ್ಲಿ 2,568 ಅತ್ಯಾಚಾರ...

ಕಳೆದ ವರ್ಷ ಕೇರಳದಲ್ಲಿ 2,568 ಅತ್ಯಾಚಾರ ಪ್ರಕರಣಗಳು ಬೆಳಕಿಗೆ

ವಾರ್ತಾಭಾರತಿವಾರ್ತಾಭಾರತಿ26 Feb 2017 11:44 PM IST
share

 ತಿರುವನಂತಪುರ, ಫೆ.26: ಕೇರಳದಲ್ಲಿ ಕಳೆದ ಒಂದು ವರ್ಷದಲ್ಲಿ 2,568 ಅತ್ಯಾಚಾರ ಪ್ರಕರಣಗಳು ಸೇರಿದಂತೆ ಮಹಿಳೆಯರು ಹಾಗೂ ಮಕ್ಕಳ ಮೇಲೆ ಒಟ್ಟು 16,960 ಅಪರಾಧ ಕೃತ್ಯಗಳು ವರದಿಯಾಗಿವೆ. ಕೊಚ್ಚಿ ಸಮೀಪ ಬಹುಭಾಷಾ ನಟಿಯೊಬ್ಬಳನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಘಟನೆಯು ರಾಜ್ಯದಲ್ಲಿ ಭಾರೀ ಕೋಲಾಹಲವನ್ನು ಸೃಷ್ಟಿಸಿದ ಬೆನ್ನಲ್ಲೇ ಈ ವರದಿ ಪ್ರಕಟವಾಗಿದೆ.
     ರಾಜ್ಯಪೊಲೀಸ್ ಇಲಾಖೆಯು ಬಿಡುಗಡೆಗೊಳಿಸಿದ ತಾತ್ಕಾಲಿಕ ಅಂಕಿಅಂಶಗಳ ಪ್ರಕಾರ 2016ರಲ್ಲಿ ರಾಜ್ಯಾದ್ಯಂತ, 1,644 ಅಪರಾಧ ಪ್ರಕರಣಗಳಲ್ಲಿ ಮಹಿಳೆಯರು ಹಾಗೂ 924 ಘಟನೆಗಳಲ್ಲಿ ಪ್ರಕರಣಗಳಲ್ಲಿ ಮಕ್ಕಳ ಪೀಡಿತರಾಗಿದ್ದರು. 2015ರಲ್ಲಿ 1,263 ಪ್ರಕರಣಗಳಲ್ಲಿ ಮಹಿಳೆಯರು ಹಾಗೂ 720 ಪ್ರಕರಣಗಳಲ್ಲಿ ಮಕ್ಕಳು ಸಂತ್ರಸ್ತರಾಗಿದ್ದರು.
    14,061 ಪ್ರಕರಣಗಳಲ್ಲಿ ಮಹಿಳೆಯರು ಹಾಗೂ 2,899 ಪ್ರಕರಣಗಳಲ್ಲಿ ಮಕ್ಕಳ ವಿರುದ್ಧ ಅಪರಾಧಗಳು ನಡೆದಿದ್ದವು ಎಂದು ವರದಿಯು ಹೇಳಿದೆ. ಇದೇ ಅವಧಿಯಲ್ಲಿ ಮಕ್ಕಳ ವಿರುದ್ಧ ಲೈಂಗಿಕ ಅಪರಾಧಗಳ ಕಾಯ್ದೆ (ಪೊಕ್ಸೊ)ಯಡಿ 2,093 ಪ್ರಕರಣಗಳನ್ನು ದಾಖಲಿಸಲಾಗಿತ್ತು.

 ಅತ್ಯಾಚಾರವಲ್ಲದೆ, ಲೈಂಗಿಕ ಕಿರುಕುಳ, ಅಪಹರಣ, ವರದಕ್ಷಿಣೆ ಸಾವು ಹಾಗೂ ಪತಿ/ ಬಂಧುಗಳಿಂದ ದೌರ್ಜನ್ಯದ ಅಪರಾಧಗಳ ಸಂಖ್ಯೆಯಲ್ಲೂ ಕಳೆದ ವರ್ಷ ಹೆಚ್ಚಳ ಕಂಡುಬಂದಿದೆ. ಈ ಅಂಕಿಅಂಶಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಾಮಾಜಿಕ ನ್ಯಾಯ ಹಾಗೂ ಆರೋಗ್ಯ ಸಚಿವೆ ಶೈಲಜಾ, ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲು ರಾಜ್ಯ ಸರಕಾರ ಬದ್ಧವಾಗಿದೆಯೆಂದು ತಿಳಿಸಿದ್ದಾರೆ. ಇಂತಹ ಪ್ರಕರಣಗಳ ಬಗ್ಗೆ ಸಾಧ್ಯವಿದ್ದಷ್ಟು ತ್ವರಿತವಾಗಿ ದೂರು ದಾಖಲಿಸಿಕೊಳ್ಳಲು ಹಾಗೂ ವರದಿ ಮಾಡಲು ಕೇರಳ ಗೃಹ ಸಚಿವಾಲಯವು ಈಗಾಗಲೇ ಬಲವಾದ ಕ್ರಮಗಳನ್ನು ಕೈಗೊಂಡಿದೆ. ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಪ್ರಕರಣಗಳ ದಾಖಲಾತಿಯಲ್ಲಿ ಯಾವುದೇ ಲೋಪದೋಷಗಳು ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಶೈಲಜಾ ತಿಳಿಸಿದ್ದಾರೆ. ಇಂತಹ ಪ್ರಕರಣಗಳ ತ್ವರಿತ ವಿಚಾರಣೆ ನಡೆಸಲು ನ್ಯಾಯಾಲಯ ಸೌಕರ್ಯಗಳಲ್ಲಿ ಸುಧಾರಣೆಗಳನ್ನು ಮಾಡಲಾಗುವುದು ಎಂದವರು ಹೇಳಿದ್ದಾರೆ.
 ದೌರ್ಜನ್ಯ,ಕಿರುಕುಳಗಳ ವಿರುದ್ಧ ಮಹಿಳೆಯರಿಗೆ ರಕ್ಷಣೆ ನೀಡಲು ಸಾಮಾಜಿಕ ನ್ಯಾಯ ಹಾಗೂ ಆರೋಗ್ಯ ಇಲಾಖೆಯು ಶೀಘ್ರದಲ್ಲೇ ಸಹಾಯವಾಣಿಯೊಂದನ್ನು ಆರಂಭಿಸಲಿದೆಯೆಂದು ಶೈಲಜಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X