Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಕದಿನ ಕ್ರಿಕೆಟ್ ಚರಿತ್ರೆಯಲ್ಲಿ ಏಳನೆ...

ಏಕದಿನ ಕ್ರಿಕೆಟ್ ಚರಿತ್ರೆಯಲ್ಲಿ ಏಳನೆ ಕನಿಷ್ಠ ಮೊತ್ತಕ್ಕೆ ಝಿಂಬಾಬ್ವೆ ಆಲೌಟ್

ಬೌಲರ್‌ಗಳ ಸಂಘಟಿತ ದಾಳಿ, ಸರಣಿ ಜಯಿಸಿದ ಅಫ್ಘಾನಿಸ್ತಾನ

ವಾರ್ತಾಭಾರತಿವಾರ್ತಾಭಾರತಿ27 Feb 2017 11:49 PM IST
share
ಏಕದಿನ ಕ್ರಿಕೆಟ್ ಚರಿತ್ರೆಯಲ್ಲಿ ಏಳನೆ ಕನಿಷ್ಠ ಮೊತ್ತಕ್ಕೆ ಝಿಂಬಾಬ್ವೆ ಆಲೌಟ್

ಹರಾರೆ, ಫೆ.26: ಸಂಘಟಿತ ದಾಳಿ ನಡೆಸಿದ ಅಫ್ಘಾನಿಸ್ತಾನದ ಬೌಲರ್‌ಗಳು ಇಲ್ಲಿ ರವಿವಾರ ನಡೆದ ಐದನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ಝಿಂಬಾಬ್ವೆಯನ್ನು ಕೇವಲ 54 ರನ್‌ಗಳಿಗೆ ಆಲೌಟ್ ಮಾಡಿದೆ. ಈ ಮೂಲಕ ಡಿ/ಎಲ್ ನಿಯಮದ ಪ್ರಕಾರ ಪಂದ್ಯವನ್ನು 106 ರನ್‌ಗಳ ಅಂತರದಿಂದ ಗೆದ್ದುಕೊಂಡಿದೆ. ಸರಣಿಯನ್ನು 3-2 ಅಂತರದಿಂದ ವಶಪಡಿಸಿಕೊಂಡಿದೆ.

  ಝಿಂಬಾಬ್ವೆ ತಂಡ ಏಕದಿನ ಇತಿಹಾಸದಲ್ಲಿ ಏಳನೆ ಕನಿಷ್ಠ ಮೊತ್ತಕ್ಕೆ ಆಲೌಟಾಗಿದೆ. ಏಕದಿನದಲ್ಲಿ ಕನಿಷ್ಠ ಸ್ಕೋರ್ ಗಳಿಸಿದ ತಂಡಗಳ ಪಟ್ಟಿಯಲ್ಲಿ ಭಾರತ(54) ಹಾಗೂ ವೆಸ್ಟ್‌ಇಂಡೀಸ್(54)ತಂಡದೊಂದಿಗೆ 7ನೆ ಸ್ಥಾನ ಹಂಚಿಕೊಂಡಿದೆ. ಸರಣಿಯ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಝಿಂಬಾಬ್ವೆ 2-2 ರಿಂದ ಸಮಬಲ ಸಾಧಿಸಿ ಸರಣಿ ಗೆಲ್ಲುವ ಫೇವರಿಟ್ ತಂಡವಾಗಿತ್ತು.

ಎರಡೂ ತಂಡಗಳಿಗೆ ರವಿವಾರದ ಪಂದ್ಯ ನಿರ್ಣಾಯಕವಾಗಿತ್ತು. ಆದರೆ, ಬ್ಯಾಟಿಂಗ್ ವೈಫಲ್ಯಕ್ಕೆ ಒಳಗಾಗಿರುವ ಝಿಂಬಾಬ್ವೆ ಏಕದಿನದಲ್ಲಿ ನಾಲ್ಕನೆ ಬಾರಿ ಕನಿಷ್ಠ ಮೊತ್ತವನ್ನು ಗಳಿಸಿತು. 2004ರಲ್ಲಿ ಹರಾರೆಯಲ್ಲಿ ಶ್ರೀಲಂಕಾದ ವಿರುದ್ಧ ಕೇವಲ 35 ರನ್‌ಗೆ ಆಲೌಟಾಗಿತ್ತು. ಇದು ತಂಡವೊಂದು ಏಕದಿನದಲ್ಲಿ ಗಳಿಸಿರುವ ಅತ್ಯಂತ ಕನಿಷ್ಠ ಮೊತ್ತವಾಗಿದೆ. ಝಿಂಬಾಬ್ವೆಯ ಅತ್ಯಂತ ಕಳಪೆ ಪ್ರದರ್ಶನವೂ ಇದಾಗಿದೆ.

 ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 253 ರನ್ ಗಳಿಸಿತ್ತು. ಆರಂಭಿಕ ಆಟಗಾರ ನೂರ್ ಅಲಿ ಝದ್ರಾನ್(46 ರನ್, 49 ಎಸೆತ, 7 ಬೌಂಡರಿ,1 ಸಿಕ್ಸರ್),ರಹಮತ್ ಶಾ(50) ಹಾಗೂ ಮುಹಮ್ಮದ್ ನಬಿ(48 ರನ್, 40 ಎಸೆತ, 4 ಬೌಂಡರಿ, 1 ಸಿಕ್ಸರ್) ಅಫ್ಘಾನಿಸ್ತಾನ ಗೌರವಾರ್ಹ ಮೊತ್ತ ಗಳಿಸಲು ನೆರವಾದರು.

ಪಂದ್ಯದ ದ್ವಿತೀಯಾರ್ಧದಲ್ಲಿ ಮಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪಂದ್ಯವನ್ನು 22 ಓವರ್‌ಗೆ ಕಡಿತಗೊಳಿಸಲಾಯಿತು. ಡಿಎಲ್ ನಿಯಮದ ಪ್ರಕಾರ ಝಿಂಬಾಬ್ವೆ ಗೆಲುವಿಗೆ 161 ರನ್ ಪರಿಷ್ಕೃತ ಗುರಿ ನೀಡಲಾಯಿತು.

ಆಮಿರ್ ಹಂಝಾ(3-20), ಆಲ್‌ರೌಂಡರ್ ಮುಹಮ್ಮದ್ ನಬಿ(3-14) ಹಾಗೂ ರಶೀದ್ ಖಾನ್(2-8) ಸಂಘಟಿತ ದಾಳಿಗೆ ತತ್ತರಿಸಿದ ಝಿಂಬಾಬ್ವೆ 13.5 ಓವರ್‌ಗಳಲ್ಲಿ 54 ರನ್‌ಗೆ ಆಲೌಟಾಯಿತು.

 ಝಿಂಬಾಬ್ವೆ ತಂಡ ಇನಿಂಗ್ಸ್‌ನ 2ನೆ ಓವರ್‌ನಲ್ಲಿ ಪೀಟರ್ ಮೂರ್ ವಿಕೆಟ್‌ನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ಎಡಗೈ ಸ್ಪಿನ್ನರ್ ಆಮಿರ್ ಹಂಝಾ ಅವರು ಸಲ್ಮಾನ್ ಮೀರ್ ವಿಕೆಟ್‌ನ್ನು ಕಬಳಿಸಿದ್ದಲ್ಲದೆ ಮುಂದಿನ ಓವರ್‌ನಲ್ಲಿ 4 ಎಸೆತಗಳಲ್ಲಿ ಮತ್ತೆರಡು ವಿಕೆಟ್‌ಗಳನ್ನು ಕಬಳಿಸಿದರು. ಆಗ ಝಿಂಬಾಬ್ವೆ 13 ರನ್‌ಗೆ 4 ವಿಕೆಟ್ ಕಳೆದುಕೊಂಡಿತು.

 ಆರಂಭಿಕ ಕುಸಿತದಿಂದ ಚೇತರಿಸಿಕೊಳ್ಳಲು ವಿಫಲವಾದ ಝಿಂಬಾಬ್ವೆ ಪರ ಕೇವಲ ಇಬ್ಬರು ಬ್ಯಾಟ್ಸ್‌ಮನ್‌ಗಳು ಎರಡಂಕೆಯ ಸ್ಕೋರ್ ದಾಖಲಿಸಿದರು. ಐಪಿಎಲ್ ಹರಾಜಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪಾಲಾಗಿರುವ ಅಫ್ಘಾನಿಸ್ತಾನದ ಮುಹಮ್ಮದ್ ನಬಿ ಹಾಗೂ ರಶೀದ್ ಖಾನ್ ಇಬ್ಬರು 5 ವಿಕೆಟ್‌ಗಳನ್ನು ಹಂಚಿಕೊಂಡರು. ಅರ್ಧಶತಕ ಬಾರಿಸಿದ್ದ ರಹಮತ್ ಶಾ(50 ರನ್, 79 ಎಸೆತ, 1 ಬೌಂಡರಿ) ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಸಂಕ್ಷಿಪ್ತ ಸ್ಕೋರ್

ಅಫ್ಘಾನಿಸ್ತಾನ: 50 ಓವರ್‌ಗಳಲ್ಲಿ 253/9

(ರಹಮತ್ ಶಾ 50, ನೂರ್ ಅಲಿ ಝದ್ರಾನ್ 46, ಮುಹಮ್ಮದ್ ನಬಿ 48, ಎಂಪೊಫು 3-46)

ಝಿಂಬಾಬ್ವೆ: 13.5 ಓವರ್‌ಗಳಲ್ಲಿ 54 ರನ್‌ಗೆ ಆಲೌಟ್

(ಕ್ರಿಮರ್ ಅಜೇಯ 14, ಬರ್ಲ್ 11, ಅಮಿರ್ ಹಂಝಾ 3-20, ನಬಿ 3-14, ರಶೀದ್ ಖಾನ್ 2-8)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X