Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮೀರ್ ಖಾನ್‌ಗೆ ಸ್ಫೂರ್ತಿಯಾದ...

ಆಮೀರ್ ಖಾನ್‌ಗೆ ಸ್ಫೂರ್ತಿಯಾದ ಇಂಜಿನಿಯರ್‌ಗೆ ರೋಲೆಕ್ಸ್ ಗೌರವ

ಭಾರತದ ಇಂಜಿನಿಯರ್‌ಗೆ ರೋಲೆಕ್ಸ್ ಉದ್ಯಮಶೀಲತೆ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ28 Feb 2017 3:01 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಮೀರ್ ಖಾನ್‌ಗೆ ಸ್ಫೂರ್ತಿಯಾದ ಇಂಜಿನಿಯರ್‌ಗೆ ರೋಲೆಕ್ಸ್ ಗೌರವ

ಲೇಹ್, ಫೆ.28: ಲಡಾಕ್‌ನ 50ರ ಹರೆಯದ ಇಂಜಿನಿಯರ್ ಸೋನಮ್ ವಾಂಗ್‌ಚುಕ್ ಅವರು ರೂಪಿಸಿದ ‘ಹಿಮದ ಸ್ತೂಪ’ ಯೋಜನೆ ‘ರೋಲೆಕ್ಸ್ ಎಂಟರ್‌ಪ್ರೈಸ್’ ಜಾಗತಿಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಲಾಸ್ ಏಂಜಲಿಸ್‌ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಈ ಪ್ರತಿಷ್ಠಿತ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ವರ್ಷ ಪುರಸ್ಕಾರಕ್ಕೆ ಆಯ್ಕೆಯಾದ ವಿಶ್ವಮಟ್ಟದ ಐದು ಯೋಜನೆಗಳಲ್ಲಿ ‘ಹಿಮದ ಸ್ತೂಪ’ ಒಂದಾಗಿದೆ.

 ಹಿಂದಿ ಸಿನೆಮಾ ನಟ ಅಮೀರ್‌ಖಾನ್ ಅವರ 2009ರ ಅತ್ಯಂತ ಯಶಸ್ವೀ ಚಿತ್ರ ಎನಿಸಿದ್ದ ‘ಥ್ರೀ ಈಡಿಯಟ್ಸ್’ ಸಿನೆಮಾದಲ್ಲಿ ಅಮೀರ್‌ಖಾನ್ ನಿರ್ವಹಿಸಿದ್ದ ಫುನ್‌ಸುಕ್ ವಾಂಗ್‌ಡು ಪಾತ್ರಕ್ಕೆ ಸೋನಮ್ ವಾಂಗ್‌ಚುಕ್ ಅವರೇ ಪ್ರೇರಣೆ ಎನ್ನಲಾಗಿದೆ.

 ರೋಲೆಕ್ಸ್ ಸಂಸ್ಥೆಯ ಹುಟ್ಟಿಗೆ ಕಾರಣವಾದ ಕಲ್ಪನಾಶಕ್ತಿಯ ಸ್ಫೂರ್ತಿಗೆ ಸಮವಾದ ಉದ್ಯಮಶೀಲತಾ ಮನೋಭಾವನೆಯನ್ನು ಬೆಂಬಲಿಸುವ ಉದ್ಧೇಶದಿಂದ ರೋಲೆಕ್ಸ್ ಪುರಸ್ಕಾರವನ್ನು ಆರಂಭಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ರೆಬೆಕ್ಕಾ ಇರ್ವಿನ್ ತಿಳಿಸಿದ್ದಾರೆ.

  ಹಿಮಾಲಯದ ಪಶ್ಚಿಮ ತಪ್ಪಲಿನ ಪ್ರದೇಶಗಳಲ್ಲಿ ಇರುವ ಬರದ ಸಮಸ್ಯೆಯನ್ನು ಹಿಮ ಸ್ತೂಪದ ನೆರವಿನಿಂದ ಹೇಗೆ ನಿವಾರಿಸಬಹುದು ಎಂದು ವಾಂಗ್‌ಚುಕ್ ಈ ಯೋಜನೆಯ ಮೂಲಕ ಪ್ರಸ್ತುತಪಡಿಸಿದ್ದರು. ಲಡಾಕ್‌ನ ಸಹ ಇಂಜಿನಿಯರ್ ಚೆವಾಂಗ್ ನಾರ್ಫೆಲ್ ಅವರಿಂದ ಸ್ಫೂರ್ತಿ ಪಡೆದು ಈ ಯೋಜನೆ ರೂಪಿಸಿದ್ದರು ವಾಂಗ್‌ಚುಕ್. ಹಿಮವನ್ನು ಸ್ತೂಪದ ರೀತಿಯಲ್ಲಿ ಕಾದಿರಿಸಿಕೊಂಡು ಬರಗಾಲ ಪೀಡಿತ ಪ್ರದೇಶದಲ್ಲಿ ಬೆಳೆಗಳಿಗೆ ನೀರುಣಿಸಲು ಬಳಸಬಹುದು ಎಂಬುದು ಈ ಯೋಜನೆಯ ಸಾರಾಂಶವಾಗಿದೆ. ಸುಮಾರು 30 ಮೀಟರ್ ಎತ್ತರದ ಸುಮಾರು 20 ಹಿಮಸ್ತೂಪ ನಿರ್ಮಿಸಿ ಮಿಲಿಯನ್‌ಗಟ್ಟಲೆ ಲೀಟರ್ ನೀರನ್ನು ಬೆಳೆಗಳಿಗೆ ಪೂರೈಸುವುದು ವಾಂಗ್‌ಚುಕ್ ಯೋಜನೆಯಾಗಿದೆ.

ಪ್ರಸ್ತುತ ವಾಂಗ್‌ಚುಕ್ ತಮಗೆ ಗ್ರಾಮಸ್ಥರು ಕೊಡುಗೆಯಾಗಿ ನೀಡಿದ 65 ಹೆಕ್ಟೇರ್ ಪ್ರದೇಶದಲ್ಲಿ ಒಂದು ಪರ್ಯಾಯ ವಿಶ್ವವಿದ್ಯಾನಿಲಯ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಈ ವಿವಿಯಲ್ಲಿ ಲಡಾಕ್, ಹಿಮಾಲಯ ಮತ್ತಿತರ ಪರ್ವತಪ್ರದೇಶಗಳ ಯುವಜನತೆಗೆ - ನಿಮ್ಮ ಬದುಕಿನ ಸವಾಲಿಗೆ ನೀವೇ ಪರಿಹಾರ ಕಂಡುಕೊಳ್ಳಿ - ಎಂಬ ಪರಿಕಲ್ಪನೆಯ ಶಿಕ್ಷಣ ನೀಡುವ ಉದ್ದೇಶವನ್ನು ಹೊಂದಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X