Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ : ದೈವಸ್ಥಾನ ಜಾಗದ ದಾಖಲೆಗಳ...

ಮೂಡುಬಿದಿರೆ : ದೈವಸ್ಥಾನ ಜಾಗದ ದಾಖಲೆಗಳ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ28 Feb 2017 10:12 PM IST
share
ಮೂಡುಬಿದಿರೆ : ದೈವಸ್ಥಾನ ಜಾಗದ ದಾಖಲೆಗಳ ಹಸ್ತಾಂತರ

ಮೂಡುಬಿದಿರೆ, ಫೆ.28: ಬಿರಾವು ಕರಿಂಜೆಯಲ್ಲಿರುವ ದೈವಸ್ಥಾನವೊಂದರ ದಾಖಲೆ ಪತ್ರಗಳ ನೋಂದಣಿ ಖರ್ಚನ್ನು ಮೂಡುಬಿದಿರೆ ಪುರಸಭೆಯ ಎಸ್‌ಸಿ/ಎಸ್‌ಟಿ ಅನುದಾನದಿಂದ ನೀಡಲಾಗಿದ್ದು, ದಾಖಲೆ ಪತ್ರಗಳ ಹಸ್ತಾಂತರವು ಮಂಗಳವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಶಾಸಕ ಅಭಯಚಂದ್ರ ಜೈನ್ ಅವರು ದಾಖಲೆಗಳನ್ನು ಹಸ್ತಾಂತರಿಸಿದರು.

ಕರಿಂಜೆ ಗ್ರಾಮದ ಬಿರಾವಿನಲ್ಲಿರುವ ಶ್ರೀ ಗುರುಬ್ರಹ್ಮ ಶ್ರೀ ಸತ್ಯಸಾರಮಾಣಿ ದೈವಗಳ ಮತ್ತು ಪಂಜುರ್ಲಿ ಗುಳಿಗ ದೈವಗಳ ಸೇವಾ ಸಮಿತಿಯು ತಮ್ಮ ದೈವಸ್ಥಾನಕ್ಕಾಗಿ 6.5 ಸೆಂಟ್ಸ್ ಜಾಗವನ್ನು ಗೊತ್ತುಪಡಿಸಿಕೊಂಡಿದ್ದರು. ಆ ಜಾಗವು ಹೊಸಂಗಡಿ ಅರಮನೆಯ ನಿವಾಸಿಯಾಗಿರುವ ಸಂಕಪ್ಪ ಶೆಟ್ಟಿ ಎಂಬವರ ವಶದಲ್ಲಿತ್ತು.

ದಲಿತ ಸಮುದಾಯದ ಮಂದಿ ಪೂಜಿಸಿಕೊಂಡು ಬಂದಿದ್ದ ಈ ದೈವಸ್ಥಾನದ ಅಭಿವೃದ್ಧಿಗಾಗಿ ಜಾಗದ ದಾಖಲೆ ಪತ್ರಗಳ ಅಗತ್ಯ ಸಮಿತಿಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಅಭಯಚಂದ್ರ ಅವರು ದೈವಸ್ಥಾನಕ್ಕಾಗಿ ಜಾಗ ನೀಡುವಂತೆ ಜಾಗದ ಮಾಲಕರ ಜೊತೆ ಮಾತುಕತೆ ನಡೆಸಿ, ಮಧ್ಯಸ್ಥಿಕೆ ವಹಿಸಿದ್ದರು. ಜಾಗದ ನೋಂದಣಿ ಖರ್ಚನ್ನು ಪುರಸಭೆಯ ಎಸ್‌ಸಿ ಎಸ್‌ಟಿ ಅನುದಾನದಿಂದ ಬಳಕೆ ಮಾಡುವಂತೆ ಸೂಚಿಸಲಾಗಿದ್ದು, ಇದೀಗ ದಲಿತ ಮುಖಂಡರ ಕೈಗೆ ದೈವಸ್ಥಾನದ ಜಾಗದ ದಾಖಲೆಗಳು ಸೇರಿವೆ.

 ಶ್ರೀ ಗುರುಬ್ರಹ್ಮ ಶ್ರೀ ಸತ್ಯಸಾರಮಾಣಿ ದೈವಗಳ ಮತ್ತು ಪಂಜುರ್ಲಿ ಗುಳಿಗ ದೈವಗಳ ಸೇವಾ ಸಮಿತಿಯ ಆಡಳಿತ ಮೊಕ್ತೇಸರ ಹೊನ್ನಯ್ಯ ಅವರು ಶಾಸಕರಿಂದ ದಾಖಲೆ ಪತ್ರಗಳನ್ನು ಸ್ವೀಕರಿಸಿದರು. ನಂತರ ಮಾತನಾಡಿದ ಹೊನ್ನಯ್ಯ, ಶಾಸಕರ ಸಂಪೂರ್ಣ ಪ್ರಯತ್ನದಿಂದ ದೈವಸ್ಥಾನಕ್ಕೆ ದಾಖಲೆ ಪತ್ರಗಳು ಲಭ್ಯವಾಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆಎಂದರು. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸುವುದಾಗಿ ಶಾಸಕರು ಭರವಸೆ ನೀಡಿದರು.

ಈ ದೈವಸ್ಥಾನಕ್ಕಾಗಿ ಅರಮನೆಯವರು ಜಾಗ ನೀಡುವ ಸಂದರ್ಭ 2 ಸೆಂಟ್ಸ್ ಉದಾರವಾಗಿ ನೀಡಿದ್ದು ಉಳಿದ 4.5 ಸೆಂಟ್ಸ್ ಜಾಗವನ್ನು ರಿಯಾಯಿತಿ ಬೆಲೆಯಲ್ಲಿ (ರೂ. 1.20ಲಕ್ಷ)ಯಲ್ಲಿ ಅರಮನೆಯವರು ನೀಡಿದ್ದಾರೆ. ಶಾಸಕ ಅಭಯಚಂದ್ರ, ಮಾಜಿ ಪುರಸಭಾ ಸದಸ್ಯ ಅನಿಲ್ ಲೋಬೋ ಹಾಗೂ ಹಾಲಿ ಪುರಸಭಾ ಸದಸ್ಯರು ಮತ್ತು ಇತರ ದಾನಿಗಳು ಉಳಿದ ಮೊತ್ತವನ್ನು ಭರಿಸಿದ್ದಾರೆ.

 ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಡಾ ಮಾಜಿ ಅಧ್ಯಕ್ಷ ಸುರೇಶ್ ಕೋಟ್ಯಾನ್, ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಉಪಾಧ್ಯಕ್ಷ ವಿನೋದ್ ಸೆರಾವೋ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಪುರಸಭಾ ಸದಸ್ಯರಾದ ಪಿ.ಕೆ. ಥೋಮಸ್, ಎಮ್. ರತ್ನಾಕರ ದೇವಾಡಿಗ, ಅಬ್ದುಲ್ ಬಶೀರ್, ಮೂಡುಬಿದಿರೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಪುರಸಭಾ ಸದಸ್ಯೆ ಸುಪ್ರಿಯಾ ಡಿ. ಶೆಟ್ಟಿ, ನಾಮನಿರ್ದೇಶಿತ ಸದಸ್ಯರಾದ ಉಮೇಶ್ ದೇವಾಡಿಗ, ಇಕ್ಬಾಲ್ ಕರೀಮ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರೇಮನಾಥ ಮಾರ್ಲ, ಎಪಿಎಂಸಿ ಸದಸ್ಯ ಚಂದ್ರಹಾಸ ಸನಿಲ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X