Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಕಾಡಿನಲ್ಲಿ ಮಂಗಗಳ ಸರಣಿ...

ಚಿಕ್ಕಮಗಳೂರು ಕಾಡಿನಲ್ಲಿ ಮಂಗಗಳ ಸರಣಿ ಸಾವು

ಮಂಗನ ಕಾಯಿಲೆಯ ಆತಂಕದಲ್ಲಿ ಜನತೆ

ಅಝೀಝ್ ಕಿರುಗುಂದಅಝೀಝ್ ಕಿರುಗುಂದ28 Feb 2017 11:02 PM IST
share
ಚಿಕ್ಕಮಗಳೂರು ಕಾಡಿನಲ್ಲಿ ಮಂಗಗಳ ಸರಣಿ ಸಾವು

ಚಿಕ್ಕಮಗಳೂರು, ಫೆ.28: ಕಾಫಿ ನಾಡು ಖ್ಯಾತಿಯ ಚಿಕ್ಕಮಗಳೂರು ಜಿಲ್ಲೆಗೆ ಮಂಗನ ಕಾಯಿಲೆ ಹರಡಿದೆಯೇ ಎನ್ನುವ ಅನುಮಾನ ಹುಟ್ಟಿಕೊಂಡಿದೆ. ಗಿರಿ-ಕಣಿವೆಗಳಲ್ಲಿ, ಕಾಫಿ ತೋಟಗಳಲ್ಲಿ ಹಿಂಡು, ಹಿಂಡು ಮಂಗಗಳು ಅಲ್ಲಲ್ಲಿ ಸಾವನ್ನಪ್ಪಿದ್ದು, ಹೀಗೊಂದು ದಟ್ಟ ಅನುಮಾನಗಳಿಗೆ ಮೂಲ ಕಾರಣವಾಗಿದೆ.
ಮಂಗನ ಕಾಯಿಲೆ ಶಿವಮೊಗ್ಗದ ತೀರ್ಥಹಳ್ಳಿ, ಬೆಳಗಾವಿಯ ಖಾನಾಪುರದಲ್ಲಿ ಕಂಡು ಬಂದಿರುವ ಬಗ್ಗೆ ಈತನಕ ಸುದ್ದಿಯಾಗಿತ್ತು.


ಆದರೆ ಈ ಬಾರಿ ಚಿಕ್ಕಮಗಳೂರು ಜಿಲ್ಲೆಯ ಕಾಫಿ ತೋಟಗಳ ಕೂಲಿ ಲೈನುಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಕಳೆದೊಂದು ವಾರದಿಂದ ಮೈ-ಕೈ ನೋವು, ಜ್ವರ, ತಲೆನೋವಿನಿಂದ ಬಳಲುತ್ತಿರುವ ಮಾಹಿತಿ ಇದೆ. ಇದು ಮಂಗನ ಕಾಯಿಲೆಯ ಮುನ್ಸೂಚನೆಯೇ ಎಂದು ಗ್ರಾಮೀಣ ಭಾಗದ ಜನ ಆತಂಕಕ್ಕೀಡಾಗಿದ್ದಾರೆ.

ಈ ಕಾಯಿಲೆ ಚಿಕ್ಕಮಗಳೂರಿಗೂ ಕಾಲಿಟ್ಟಿರುವ ಲಕ್ಷಣಗಳು ಕಂಡು ಬಂದಿವೆ. ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಬಳಿಯ ಬೈನೇಕೂಲ್ ಎಸ್ಟೇಟ್, ಮುಳ್ಳಯ್ಯನಗಿರಿ ಸಮೀಪದ ಕಾಫಿತೋಟ ಹಾಗೂ ಗಿರಿಭಾಗದ ತೋಟಗಳಲ್ಲಿ ಅಲ್ಲಲ್ಲಿ ಮಂಗಗಳ ಹಿಂಡು ಸಾವನ್ನಪ್ಪಿದೆ. ಇದರಿಂದ ಗಿರಿಭಾಗದಲ್ಲಿ ವಾಸಿಸುವ ಜನರು ತೀವ್ರ ಭೀತಿಗೊಂಡಿದ್ದಾರೆ.


ಸಾಮಾನ್ಯವಾಗಿ ಮಂಗನ ಕಾಯಿಲೆ ಬೇಸಿಗೆಯಲ್ಲಿ ಹರಡುತ್ತದೆ. ಮಂಗಗಳು ಇದ್ದಕ್ಕಿ ದ್ದಂತೆ ಸಾಯುತ್ತವೆ. ಇದರ ವೈರಾಣುಗಳು ಮನುಷ್ಯನಿಗೂ ಹರಡಿ ಮನುಷ್ಯ ತಲೆನೋವು, ಕೆಮ್ಮು, ಜ್ವರದಿಂದ ಬಳಲಿ ಸಾಯುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.


ಕೂಲಿ ಕಾರ್ಮಿಕರು ಕಳೆದೊಂದು ವಾರ ದಿಂದಲೂ ತಲೆನೋವು, ಜ್ವರ, ಕೆಮ್ಮಿನಿಂದ ಬಳಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಮಳೆ ಇಲ್ಲದೆ ಕಾಫಿಯೂ ಸಂಪೂರ್ಣ ನಾಶವಾಗಿದ್ದು, ಮಂಗಗಳು ಸತ್ತ ಬಳಿಕ ವಾಸನೆಯ ಮೂಲಕವಷ್ಟೇ ಸಾವಿನ ಸ್ಪಷ್ಟತೆಸಿಗುತ್ತಿದೆ. ಸ್ಥಳಕ್ಕೆ ಬಂದ ವೈದ್ಯರು ಮಂಗಗಳ ಮೈಮೇಲಿನ ಕೂದಲು ಉದುರಿಲ್ಲ. ಲೈನ್‌ಗಳಲ್ಲಿ ವಾಸ ಮಾಡುವ ಜನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಾರಕ ಕಾಯಿಲೆ ಬರುವ ಸೂಚನೆಗಳಿದ್ದರೆ ಅವರ ರಕ್ತದ ಮಾದರಿಗಳನ್ನು ಲ್ಯಾಬ್‌ಗೆ ಕಳುಹಿಸಿ, ವರದಿ ಬಂದ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಾರೆ.


ಇಂದಿನ ಬೆಳೆವಣಿಗೆಗಳನ್ನು ಗಮನಿಸಿದರೆ ಕಾಫಿನಾಡಿನ ಇತಿಹಾಸದಲ್ಲಿ ಜನ ಮಂಗನ ಕಾಯಿಲೆ ಹೆಸರನ್ನೇಕೇಳಿರಲಿಲ್ಲ. ಆದರೆ ಭೀಕರ ಬರಗಾಲಕ್ಕೆ ತುತ್ತಾಗಿರುವ ಕಾಫಿ ನಾಡಿಗೆ ಕಾಲಿಟ್ಟಿದ್ದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.


ಇಲ್ಲಿನ ಪರಿಸ್ಥಿತಿ, ವೈದ್ಯರ ಹೇಳಿಕೆ ಗಮನಿಸಿ ದರೆ ಇದು ನಿಜಕ್ಕೂ ಮಂಗನ ಕಾಯಿಲೆ ಇರಬಹುದೇ ಎನ್ನುವ ಅನುಮಾನ ಹುಟ್ಟಿಸುತ್ತದೆ. ಹೊಟ್ಟೆಪಾಡಿಗಾಗಿ ಎಲ್ಲಿಂದಲೋ ಬಂದು ಬದುಕು ಕಟ್ಟಿಕೊಂಡಿರುವ ಮಂದಿ ಹೆಚ್ಚಿದ್ದಾರೆ. ಇದು ಮಂಗನ ಕಾಯಿಲೆ ಆಗದಿದ್ದರೆ ಸಾಕು ಎನ್ನುವುದು ಜನರ ಹೆಬ್ಬಯಕೆ.

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X