ಮಂಗಳೂರು: ಲೇಖಕರಿಂದ ಅರ್ಜಿ ಆಹ್ವಾನ

ಮಂಗಳೂರು, ಫೆ.28: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡಮಿ ಯಕ್ಷಗಾನ (ಬಡಗು, ತೆಂಕು ಮತ್ತು ಘಟ್ಟದ ಕೋರೆ), ಮೂಡಲಪಾಯ, ಯಕ್ಷಗಾನ ಗೊಂಬೆಯಾಟ (ಸೂತ್ರದ ಮತ್ತು ತೊಗಲುಗೊಂಬೆ), ಶ್ರೀಕೃಷ್ಣಪಾರಿಜಾತ, ಸಣ್ಣಾಟ, ದೊಡ್ಡಾಟ ಇತ್ಯಾದಿ ಕಲಾಪ್ರಕಾರಗಳಲ್ಲಿ 2016ನೆ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
2016ನೆ ಸಾಲಿನಲ್ಲಿ ಪ್ರಕಟವಾಗಿ ಆಯ್ಕೆಯಾದ ಪುಸ್ತಕಕ್ಕೆ 25 ಸಾವಿರ ರೂ. ಬಹುಮಾನ ನೀಡಲಾಗುವುದು. ಯಕ್ಷಗಾನ ಮತ್ತು ಬಯಲಾಟಗಳ ವಿವಿಧ ಆಯನಗಳ ಬಗ್ಗೆ ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು, ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.
ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಬಯಲಾಟ ಅಕಾಡಮಿ, ಕನ್ನಡ ಭವನ, 2ನೆ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ ರಸ್ತೆ, ಬೆಂಗಳೂರು 560002, ಇವರಿಗೆ ಮಾ.23ರೊಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಯನ್ನು ಕಡ್ಡಾಯವಾಗಿ ಕಳುಹಿಸುಬೇಕು.
ಅರ್ಜಿ ನಮೂನೆಯು ಆಯಾಯ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಲಭ್ಯವಿದೆ. ಮಾಹಿತಿಗಾಗಿ ಅಕಾಡಮಿಯ ದೂ.ಸಂ: 080-22113146 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.







