Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಫು ಪುರಸಭೆ ಪ್ರಥಮ ಸ್ಥಾನದಲ್ಲಿದೆ;...

ಕಾಫು ಪುರಸಭೆ ಪ್ರಥಮ ಸ್ಥಾನದಲ್ಲಿದೆ; ಶಾಸಕವಿನಯಕುಮಾರ್ ಸೊರಕೆ

ವಾರ್ತಾಭಾರತಿವಾರ್ತಾಭಾರತಿ28 Feb 2017 11:54 PM IST
share
ಕಾಫು ಪುರಸಭೆ ಪ್ರಥಮ ಸ್ಥಾನದಲ್ಲಿದೆ; ಶಾಸಕವಿನಯಕುಮಾರ್ ಸೊರಕೆ

ಕಾಪು: ಕಾಪು ಪುರಸಭೆ ಪ್ರಥಮ ಸ್ಥಾನದಲ್ಲಿದ್ದು, ಅದನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕು ಎಂದು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು.

 ಮಂಗಳವಾರ ನಡೆದ ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಹೊಸದಾಗಿ ರಚನೆಯಾದ ಪುರಸಭೆಯಲ್ಲಿ ಆದಾಯ ಬರುವಂತೆ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಯೋಜನೆ ಹಾಕಿಕೊಳ್ಳಿ. ಹಸಿರು ಕಾಪು ನಿರ್ಮಾಣಕ್ಕಾಗಿ ಅರಣ್ಯ ಹಾಗೂ ತೋಟಗಾರಿಕಾ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗಿದ್ದು, ಅದಕ್ಕೆ ಬೇಕಾದ ಎಲ್ಲಾ ರೀತಿಯ ಯೋಜನೆಗಳನ್ನು ರೂಪಿಸುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಮಟ್ಟದಲ್ಲಿಯೂ ಕಾಪು ಪುರಸಭೆಯನ್ನು ಮಾದರಿಯಾಗಿ ಪರಿಗಣಿಸಿದ್ದು, ಪುರಸಭಾ ವ್ಯಾಪ್ತಿಯ ಸಮಗ್ರ ಭೌಗೋಳಿಕ ನಕ್ಷೆಯನ್ನು ಸಿದ್ದಪಡಿಸಲು ಕ್ರಮವಹಿಸಲಾಗಿದೆ. ಉಳಿಯಾರಗೋಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ, ವ್ಯವಸ್ಥಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅಲ್ಲದೆ ಈಗಾಗಲೇ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು ರೂ. 50 ಕೋಟಿಗೂ ಅಧಿಕ ಮೊತ್ತದ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಮಗಾರಿಯ ಗುಣಮಟ್ಟಕ್ಕೆ ಆದ್ಯತೆ ನೀಡಲಾಗುತ್ತದೆ. ದ್ವಿಪಥ ಹಾಗೂ ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಜನ ಸಹಕಾರ ನೀಡಬೇಕು ಎಂದರು.

ಶುಲ್ಕ ಸಹಿತ ಪಾರ್ಕಿಂಗ್:

ಕಾಪು ಪೊಲೀಸ್ ಠಾಣೆ ಹಾಗೂ ಇತರ ಕಡೆ ಶುಲ್ಕ ಸಹಿತ ಪಾರ್ಕಿಂಗ್ ವ್ಯವಸ್ಥೆಗೆ ಜಾಗ ಗುರುತಿಸಲಾಗಿದೆ. ಪುರಸಭಾ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಗೆ ದಾನಿಗಳು ವಾಹನಗಳನ್ನು ನೀಡಿದ್ದು, ಸಕ್ಕಿಂಗ್ ಯಂತ್ರದ ಅಗತ್ಯವಿದೆ. 14 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಅದನ್ನು ಖರೀದಿಸಲಾಗುವುದು ಎಂದು ಮುಖ್ಯಾಧಿಕಾರಿ ರಾಯಪ್ಪ ಹೇಳಿದರು.

ಕಾಮಗಾರಿಗಳ ವಿಳಂಬ ತಪ್ಪಿಸಲು 2017-18 ನೇ ಸಾಲಿನ ಎಸ್‌ಎಫ್‌ಸಿ ಮುಕ್ತ ನಿಧಿಯ ಕಾಮಗಾರಿಗಳಿಗೆ ಮಾರ್ಚ್ ಅಂತ್ಯದೊಳಗೆ ಕೌನ್ಸಿಲ್ ಅನುಮೋದನೆ ಪಡೆಯುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ ಎಂದರು.

ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಲು ಪುರಸಭಾ ಸದಸ್ಯರನ್ನೊಳಗೊಂಡ ಪರಿಶೀಲನಾ ಸಮಿತಿ ರಚಿಸಬೇಕು. ಗುಣಮಟ್ಟ ಕಾಯ್ದುಕೊಳ್ಳದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಯಾವುದೇ ಕಾಮಗಾರಿ ಮಾಡುವ ಮೊದಲು ವಾರ್ಡ್ ಸದಸ್ಯರ ಗಮನಕ್ಕೆ ತರಬೇಕು, ಕೇವಲ ಗುದ್ದಲಿ ಪೂಜೆಗೆ ಆಹ್ವಾನಿಸುವುದಲ್ಲ ಎಂದು ವಿರೋಧ ಪಕ್ಷದ ನಾಯಕ ಅರುಣ್ ಶೆಟ್ಟಿ ದೂರಿದರು.

ಅಸಮಾಧಾನ: ಅಭಿವೃದ್ಧಿಗೆ ರೂ. 33 ಲಕ್ಷ ದೊಡ್ಡ ಕೆರೆಗೆ 17 ಲಕ್ಷ ಇದು ಯಾವ ನ್ಯಾಯ ಎಂದು ರಮೇಶ್ ಹೆಗ್ಡೆ ಪ್ರಶ್ನಿಸಿದರೆ, ಟೆಂಡರ್ ಬಳಿಕ ನನ್ನ ವಾರ್ಡ್‌ನ ಕಾಮಗಾರಿ ಸ್ಥಗಿತಗೊಂಡಿದೆ. ಬೇಡಿಕೆ ಇಟ್ಟ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದರಿಂದ ಜನರಿಗೆ ಹೇಗೆ ಉತ್ತರಕೊಡಲಿ ಎಂದು ಶಾಂತಲತಾ ಶೆಟ್ಟಿ ಅಸಮಾದಾನ ವ್ಯಕ್ತಪಡಿಸಿದರು.
ಪಕ್ಷಪಾತ ಬೇಡ: ಸಣ್ಣಕೆರೆ ಎಲ್ಲಾ ವಾರ್ಡ್‌ಗಳಿಗೆ ಸಮಾನ ನ್ಯಾಯವೊದಗಿಸಿ ಪಕ್ಷಪಾತ ಮಾಡದೆ ಯೋಜನೆ ರೂಪಿಸಿ ಎಂದು ಕಿರಣ್ ಆಳ್ವ ಆಗ್ರಹಿಸಿದರು. ಸಿಎಫ್‌ಎಲ್ ಬೀದಿ ದೀಪಗಳ ಬದಲಿಗೆ ಎಲ್‌ಇಡಿ ದೀಪಗಳನ್ನು ಅಳವಡಿಸುವಂತೆ ಸದಸ್ಯರು ಒತ್ತಾಯಿಸಿದರು.

ಕಾಪು ಪುರಸಭೆ ವ್ಯಾಪ್ತಿಯ ಸ್ವಚ್ಛ ಭಾರತ ಯೋಜನೆಯ ರಾಯಭಾರಿ ಶಿವಣ್ಣ ಬಾಯಾರ್ ಅವರು ಸ್ವಚ್ಛ ಸುಂದರ ಕಾಪು ನಿರ್ಮಾಣ ಕುರಿತು ಹೊರತಂದ ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಲಾಯಿತು. ಪುರಸಭೆ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷ ಕೆ.ಎಚ್. ಉಸ್ಮಾನ್, ಸ್ಥಾಯೀ ಸಮಿತಿ ಅಧ್ಯಕ್ಷ ಹಮೀದ್ ಮೂಳೂರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X