Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಮಾರು 43 ಕಾರ್ಪೋರೇಟರ್ ವಿರುದ್ಧ...

ಸುಮಾರು 43 ಕಾರ್ಪೋರೇಟರ್ ವಿರುದ್ಧ ಕ್ರಿಮಿನಲ್ ಕೇಸ್

ಬೃಹನ್ಮುಂಬಯಿ ಮಹಾನಗರ ಪಾಲಿಕೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ2 March 2017 1:18 PM IST
share
ಸುಮಾರು 43 ಕಾರ್ಪೋರೇಟರ್ ವಿರುದ್ಧ ಕ್ರಿಮಿನಲ್ ಕೇಸ್

ಮುಂಬೈ, ಮಾ.2: ಇತ್ತೀಚೆಗಷ್ಟೇ ಕೊನೆಗೊಂಡ ಬೃಹನ್ಮುಂಬಯಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ವಿಜೇತರಾಗಿರುವ ಸುಮಾರು 43 ಕಾರ್ಪೋರೇಟರ್‌ಗಳು ಅತ್ಯಾಚಾರ ಸಹಿತ ಹಲವು ಗಂಭೀರ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿದ್ದಾರೆ ಎಂದು ಎನ್‌ಜಿಒ ನಡೆಸಿರುವ ಸಮೀಕ್ಷೆಯಿಂದ ಬಹಿರಂಗವಾಗಿದೆ.

ನೂತನವಾಗಿ ಆಯ್ಕೆಯಾಗಿರುವ ಬಿಎಂಸಿ ಕಾರ್ಪೋರೇಟರ್‌ಗಳ ಪೈಕಿ ಸುಮಾರು ಶೇ.19ರಷ್ಟು ಮಂದಿ ಹತ್ಯೆ ಯತ್ನ ಹಾಗೂ ರೇಪ್ ಪ್ರಕರಣವನ್ನು ಎದುರಿಸುತ್ತಿದ್ದಾರೆ ಎಂದು ಎರಡು ಎನ್‌ಜಿಒಗಳು ಬಿಎಂಸಿಯ 227 ವಿಜೇತ ಅಭ್ಯರ್ಥಿಗಳ ಪೈಕಿ 225 ಅಭ್ಯರ್ಥಿಗಳ ಅಫಿದಾವಿತ್ ಪರಿಶೀಲನೆ ವೇಳೆ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಜನರು ಸಾಕಷ್ಟು ಸಂಖ್ಯೆಯಲ್ಲಿ ಚುನಾವಣೆಯಲ್ಲಿ ಮತ ಚಲಾಯಿಸದೇ ಇದ್ದರೆ ರಾಜಕೀಯ ಪಕ್ಷಗಳು ಹಣ ಹಾಗೂ ತೋಳ್ಬಲವಿರುವ ವ್ಯಕ್ತಿಗಳನ್ನೇ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸುತ್ತವೆೆ ಎಂದು ಎನ್‌ಜಿಒ ಮಹಾರಾಷ್ಟ್ರ ಎಲೆಕ್ಷನ್ ವಾಚ್‌ನ ಸಂಯೋಜಕ ಶರದ್ ಕುಮಾರ್ ಹೇಳಿದ್ದಾರೆ.

 115ನೆ ವಾರ್ಡ್‌ನಿಂದ ವಿಜೇತರಾಗಿರುವ ಶಿವಸೇನೆಯ ಅಭ್ಯರ್ಥಿ ಉಮೇಶ್ ಎಸ್. ಮಾನೆ ಹತ್ಯೆಗೆ ಯತ್ನ(ಐಪಿಸಿ ಸೆಕ್ಷನ್ 307) ಪ್ರಕರಣ ಎದುರಿಸುತ್ತಿದ್ದಾರೆ. ಮೂವರು ವಿಜೇತ ಅಭ್ಯರ್ಥಿಗಳು ಅತ್ಯಾಚಾರ ಯತ್ನ(ಐಪಿಸಿ ಸೆಕ್ಷನ್ 376), ಮಹಿಳೆಯರಿಗೆ ಲೈಂಗಿಕ ಕಿರುಕುಳ(ಐಪಿಸಿ ಸೆಕ್ಷನ್ 354) ಪ್ರಕರಣದ ಆರೋಪಿಗಳಾಗಿದ್ದಾರೆ.

225 ವಿಜೇತ ಅಭ್ಯರ್ಥಿಗಳ ಪ್ರಮಾಣಪತ್ರದ ಅವಲೋಕನದ ವೇಳೆ ಶಿವಸೇನೆಯ 22, ಬಿಜೆಪಿಯ 11, ಎಂಎನ್‌ಎಸ್‌ನ 2 ಹಾಗೂ ಕಾಂಗ್ರೆಸ್‌ನ ಇಬ್ಬರು, ಎನ್‌ಸಿಪಿ, ಎಸ್ಪಿ ಹಾಗೂ ಎಂಐಎಂ 1 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ. ಸಮೀಕ್ಷೆಯ ವರದಿ ಸಿದ್ಧವಾಗುವಾಗ ಇನ್ನಿಬ್ಬರು ವಿಜೇತ ಅಭ್ಯರ್ಥಿಗಳ ಅಫಿದಾವಿತ್ ಲಭ್ಯವಾಗಿರಲಿಲ್ಲ ಎಂದು ತಿಳಿದುಬಂದಿದೆ.

ಈ ವರ್ಷ 25 ವರ್ಷಗಳಲ್ಲಿ ಮೊದಲ ಬಾರಿ ಮತದಾನದ ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ಅಪರಾಧ ಹಿನ್ನೆಲೆಯ ಅಭ್ಯರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಕುಮಾರ್ ತಿಳಿಸಿದರು.

ಬಿಎಂಸಿ ಚುನಾವಣೆಯ ವಿಜೇತರಲ್ಲಿ 144 ಮಂದಿ ಕೋಟ್ಯಧಿಪತಿಗಳು, ಐವರು ವಿಜೇತ ಅಭ್ಯರ್ಥಿಗಳು 4 ಲಕ್ಷ ಗಿಂತ ಕಡಿಮೆ ಆದಾಯ ಘೋಷಿಸಿದ್ದಾರೆ. ಇನ್ನು ಕೆಲವರು ತಮ್ಮ ವಾರ್ಷಿಕ ಆದಾಯ 50 ಲಕ್ಷಗಿಂತ ಹೆಚ್ಚು ಎಂದು ಘೋಷಿಸಿಕೊಂಡಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಇತ್ತೀಚೆಗೆ ಕೊನೆಗೊಂಡಿರುವ ಬಿಎಂಸಿ ಚುನಾವಣೆಯಲ್ಲಿ ಶಿವಸೇನೆ 84 ಕ್ಷೇತ್ರಗಳಲ್ಲಿ ಜಯ ಸಾಧಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ (82) ಹಾಗೂ ಕಾಂಗ್ರೆಸ್ (31) ಕ್ರಮವಾಗಿ 2ನೆ ಹಾಗೂ 3ನೆ ಸಾನ್ಥ ಪಡೆದಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X