Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 113 ಅಡಿ ಎತ್ತರದ ಶಿವನ ಮೂರ್ತಿ...

113 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಿಸಲು ಇಶಾ ಪ್ರತಿಷ್ಠಾನ ಅನುಮತಿ ಪಡೆದಿಲ್ಲ : ತಮಿಳುನಾಡು ಸರಕಾರ

ವಾರ್ತಾಭಾರತಿವಾರ್ತಾಭಾರತಿ2 March 2017 7:52 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
113 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಿಸಲು ಇಶಾ ಪ್ರತಿಷ್ಠಾನ ಅನುಮತಿ ಪಡೆದಿಲ್ಲ : ತಮಿಳುನಾಡು ಸರಕಾರ

ಚೆನ್ನೈ,ಮಾ.2 : ಕೊಯಂಬತ್ತೂರಿನಲ್ಲಿ ತಲೆಯೆತ್ತಿರುವ 113 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಿಸಲು ಇಶಾ ಪ್ರತಿಷ್ಠಾನ ಅನುಮತಿ ಪಡೆದಿಲ್ಲ ಎಂದು ಇಶಾ ಯೋಗಾ  ಸೆಂಟರ್ ವಿರುದ್ಧ ಮದ್ರಾಸ್ ಹೈಕೋರ್ಟಿನಲ್ಲಿ ದಾಖಲಾಗಿರುವ ಅಪೀಲೊಂದರ ಸಂಬಂಧ ತಮಿಳುನಾಡು ಸರಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ. ವಿವಿಧ ಸಂಘಟನೆಗಳ ಪ್ರತಿಭಟನೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಈ ಬೃಹತ್ ಮೂರ್ತಿಯನ್ನು ಫೆಬ್ರವರಿ 24ರಂದು ಅನಾವರಣಗೊಳಿಸಿದ್ದರು.

ಈ ಶಿವನ ಮೂರ್ತಿ ನಿರ್ಮಾಣವನ್ನು ಅಗತ್ಯ ಅನುಮತಿಗಳನ್ನು ಪಡೆಯದೆಯೇ ಮಾಡಲಾಗಿದೆ ಎಂದು ಫೆಬ್ರವರಿ 17ರಂದು ವೆಲ್ಲಿಂಗಿರಿ ಹಿಲ್ ಟ್ರೈಬಲ್ ಪ್ರೊಟೆಕ್ಷನ್ ಸೊಸೈಟಿ ಹೈಕೋರ್ಟಿನಲ್ಲಿ ದಾಖಲಿಸಿದ ಅರ್ಜಿಯಲ್ಲಿ ಹೇಳಲಾಗಿತ್ತಲ್ಲದೆ ಇಕ್ಕರೈ ಪೊಲುವಂಪಟ್ಟಿ ಗ್ರಾಮದಲ್ಲಿ ತಲೆಯೆತ್ತಿರುವ ಈ ಮೂರ್ತಿಯನ್ನು ಕೆಡವಬೇಕೆಂದೂ ಆಗ್ರಹಿಸಲಾಗಿತ್ತು.

ತಮ್ಮ ಇಲಾಖೆ ಯೋಗ ಗುರು ಜಗ್ಗಿ ವಾಸುದೇವ್ ಅವರ ನೇತೃತ್ವದ ಸಂಘಟನೆಗೆ ಈ ಮೂರ್ತಿ ನಿರ್ಮಿಸಲು ಅನುಮತಿ ನೀಡಿಲ್ಲ ಎಂದು ಕೊಯಂಬತ್ತೂರಿನ ನಗರ ಯೋಜನಾ ವಿಭಾಗದ ಪ್ರಭಾರ ಉಪ ನಿರ್ದೇಶಕ ಆರ್ ಸೆಲ್ವರಾಜ್ ಹೇಳಿದ್ದಾರೆ. ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರದಿಂದ ಅನುಮತಿ ಪಡೆಯುವಂತೆ ತಾನು ಇಶಾ ಪ್ರತಿಷ್ಠಾನಕ್ಕೆ ನಿರ್ದೇಶನ ನೀಡಿರುವುದಾಗಿಯೂ ಅವರು ತಿಳಿಸಿದ್ದಾರೆ.

ಪ್ರತಿಷ್ಠಾನಕ್ಕೆ ಡಿಸೆಂಬರ್ 2012ರಲ್ಲಿಯೇ ನೀಡಲಾಗಿದ್ದ ಬೀಗ ಮತ್ತು ಮುದ್ರೆ ನೊಟೀಸಿನ ಬಗ್ಗೆಯೂ ತಮ್ಮ ಅಫಿಡವಿಟ್ ನಲ್ಲಿ ಸೆಲ್ವರಾಜ್ ಉಲ್ಲೇಖಿಸಿದ್ದಾರೆ. ಇಶಾ ಮೆಡಿಟೇಶನ್ ಲಿಂಗಂ ರಿಲಿಜಿಯಸ್ ವರ್ಕ್ ಶಾಪ್ ಮತ್ತು ಇತರ ಕಟ್ಟಡಗಳಿರುವ 109 ಎಕ್ರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಅಕ್ರಮ ಕಟ್ಟಡಗಳ ಸಂಬಂಧ ಈ ನೊಟೀಸ್ ಜಾರಿಗೊಳಿಸಲಾಗಿತ್ತು.

ಇಶಾ ಪ್ರತಿಷ್ಠಾನ ತನ್ನ ಬ್ಲಾಗಿನಲ್ಲಿ ನೀಡಿದ ಹೇಳಿಕೆಯೊಂದರಲ್ಲಿ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದೆಯಲ್ಲದೆ ಎಲ್ಲಾ ಅನುಮತಿಗಳನ್ನು ಪಡೆದುಕೊಳ್ಳಲಾಗಿದೆ ಎಂದೂ ಹೇಳಿಕೊಂಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X