Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2 ಬಾರಿ ರಶ್ಯ ರಾಯಭಾರಿಯನ್ನು...

2 ಬಾರಿ ರಶ್ಯ ರಾಯಭಾರಿಯನ್ನು ಭೇಟಿಯಾಗಿದ್ದ ಟ್ರಂಪ್‌ರ ಅಟಾರ್ನಿ : ‘ವಾಶಿಂಗ್ಟನ್ ಪೋಸ್ಟ್’ ವರದಿ

ಆದರೆ, ಅಟಾರ್ನಿ ಸೆನೆಟ್ ವಿಚಾರಣೆಯಲ್ಲಿ ಸುಳ್ಳು ಹೇಳಿದ್ದರು!

ವಾರ್ತಾಭಾರತಿವಾರ್ತಾಭಾರತಿ2 March 2017 6:09 PM IST
share
2 ಬಾರಿ ರಶ್ಯ ರಾಯಭಾರಿಯನ್ನು ಭೇಟಿಯಾಗಿದ್ದ ಟ್ರಂಪ್‌ರ ಅಟಾರ್ನಿ : ‘ವಾಶಿಂಗ್ಟನ್ ಪೋಸ್ಟ್’ ವರದಿ

ವಾಶಿಂಗ್ಟನ್, ಮಾ. 2: ಅಮೆರಿಕದ ಅಟಾರ್ನಿ ಜನರಲ್ ಜೆಫ್ ಸೆಶನ್ಸ್ ಕಳೆದ ವರ್ಷ ಎರಡು ಬಾರಿ ಅಮೆರಿಕಕ್ಕೆ ರಶ್ಯದ ರಾಯಭಾರಿಯನ್ನು ಭೇಟಿಯಾಗಿದ್ದರು ಎಂದು ‘ವಾಶಿಂಗ್ಟನ್ ಪೋಸ್ಟ್’ ವರದಿ ಮಾಡಿದೆ.

ಆದರೆ, ಜನವರಿಯಲ್ಲಿ ಸೆನೆಟ್ ನಡೆಸಿದ್ದ ವಿಚಾರಣೆಯ ವೇಳೆ, ಸೆಶನ್ಸ್ ಇದಕ್ಕೆ ವಿರುದ್ದವಾದ ಹೇಳಿಕೆಗಳನ್ನು ನೀಡಿದ್ದರು. ಹಾಗಾಗಿ, ಪತ್ರಿಕೆಯ ಈ ವರದಿಯ ಹಿನ್ನೆಲೆಯಲ್ಲಿ ಅವರು ವಿವಾದಕ್ಕೆ ಸಿಲುಕುವ ಸಾಧ್ಯತೆಗಳು ವಿಪುಲವಾಗಿವೆ.

  ಹೊಸ ಮಾಹಿತಿಯ ಬಳಿಕ, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಆಡಳಿತದ ಮೇಲೆ ಹೊಸದಾಗಿ ಸಂದೇಹದ ಮೋಡಗಳು ಹಬ್ಬಿವೆ. ಅಧ್ಯಕ್ಷೀಯ ಚುನಾವಣೆಯ ಅವಧಿಯಲ್ಲಿ ರಿಪಬ್ಲಿಕನ್ ಪಕ್ಷದ ಚುನಾವಣಾ ಪ್ರಚಾರ ತಂಡ ಮತ್ತು ರಶ್ಯದ ನಡುವೆ ಯಾವುದೇ ಸಂಶಯಾಸ್ಪದ ಸಂಪರ್ಕಗಳು ಇರಲಿಲ್ಲ ಎಂಬುದಾಗಿ ಟ್ರಂಪ್ ತಂಡ ಪದೇ ಪದೇ ಹೇಳಿತ್ತು.

ಚುನಾವಣೆಯ ವೇಳೆ ರಶ್ಯವು ಟ್ರಂಪ್ ಪರವಾಗಿ ಮತ್ತು ಅವರ ಎದುರಾಳಿ ಡೆಮಾಕ್ರಟಿಕ್ ಪಕ್ಷದ ಹಿಲರಿ ಕ್ಲಿಂಟನ್ ವಿರುದ್ಧವಾಗಿ ಕೆಲಸ ಮಾಡಿತ್ತು ಎಂಬುದಾಗಿ ಅಮೆರಿಕದ ಗುಪ್ತಚರ ಇಲಾಖೆ ಹೇಳಿದೆ.

ವರದಿಗೆ ತಕ್ಷಣ ಪ್ರತಿಕ್ರಿಯಿಸಿರುವ ಶ್ವೇತಭವನ, ಇದು ಪಕ್ಷಪಾತಪೂರಿತ ಡೆಮಾಕ್ರಟ್‌ಗಳು ನಡೆಸಿದ ದಾಳಿ ಎಂದು ಬಣ್ಣಿಸಿದೆ. ಸೆಶನ್ಸ್ ರಶ್ಯದ ಅಧಿಕಾರಿಗಳನ್ನು ಭೇಟಿ ಮಾಡಿರುವುದನ್ನು ಅದು ಖಚಿತಪಡಿಸಿದೆಯಾದರೂ, ಅವರು ಯಾವುದೇ ತಪ್ಪು ಮಾಡಿಲ್ಲ ಎಂದಿದೆ.

‘‘ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ನಾನು ರಶ್ಯದ ಅಧಿಕಾರಿಗಳನ್ನು ಯಾವತ್ತೂ ಭೇಟಿ ಮಾಡಿಲ್ಲ. ಈ ಆರೋಪ ಯಾಕೆ ಎನ್ನುವುದು ನನಗೆ ತಿಳಿದಿಲ್ಲ. ಅದು ತಪ್ಪು’’ ಎಂದು ಹೇಳಿಕೆಯೊಂದರಲ್ಲಿ ಸೆಶನ್ಸ್ ಹೇಳಿದರು.

ಆದರೆ, ಈ ರಶ್ಯ ಹಗರಣದ ಬಗ್ಗೆ ಅಮೆರಿಕದ ಗುಪ್ತಚರ ಸಂಸ್ಥೆಗಳು, ಕಾನೂನು ಇಲಾಖೆ ಮತ್ತು ನಾಲ್ಕು ಕಾಂಗ್ರೆಸ್ ಸಮಿತಿಗಳು ಪರಿಶೀಲನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ತನಿಖೆಯನ್ನು ಎದುರಿಸುವಂತೆ ಡೆಮಾಕ್ರಟಿಕ್ ಪಕ್ಷ ಸೆಶನ್ಸ್‌ರನ್ನು ಒತ್ತಾಯಿಸಿದೆ ಹಾಗೂ ವಿಸ್ತ್ರತ ತನಿಖೆಯೊಂದರ ಉಸ್ತುವಾರಿ ನೋಡಿಕೊಳ್ಳಲು ಸ್ವತಂತ್ರ ವಿಶೇಷ ತನಿಖಾಧಿಕಾರಿಯೊಬ್ಬರನ್ನು ನೇಮಿಸುವಂತೆ ಕಾಂಗ್ರೆಸನ್ನು ಒತ್ತಾಯಿಸಿದೆ. ಸೆಶನ್ಸ್ ಟ್ರಂಪ್ ಆಡಳಿತದ ಉನ್ನತ ಕಾನೂನು ಅನುಷ್ಠಾನ ಅಧಿಕಾರಿಯಾಗಿದ್ದಾರೆ.

‘‘ರಶ್ಯದ ಅಧಿಕಾರಿಗಳೊಂದಿಗಿನ ಸಂಪರ್ಕಗಳ ಬಗ್ಗೆ ಸೆಶನ್ಸ್ ತಪ್ಪು ಹೇಳಿಕೆಗಳನ್ನು ನೀಡಿರುವುದರಿಂದ, ಟ್ರಂಪ್ ಸಹಾಯಕರು ರಶ್ಯದೊಂದಿಗೆ ಹೊಂದಿರುವ ಸಂಬಂಧಗಳ ಬಗ್ಗೆ ತನಿಖೆ ನಡೆಸಲು ವಿಶೇಷ ವಕೀಲರೊಬ್ಬರು ಅಗತ್ಯವಿದೆ’’ ಎಂದು ಸೆನೆಟ್ ಗುಪ್ತಚರ ಸಮಿತಿಯ ಸದಸ್ಯ ಡೆಮಾಕ್ರಟಿಕ್ ಸೆನೆಟರ್ ರಾನ್ ವೈಡನ್ ಹೇಳಿದರು.

ಜುಲೈ, ಸೆಪ್ಟಂಬರ್‌ನಲ್ಲಿ ಭೇಟಿ
ಮಾಜಿ ಸೆನೆಟರ್ ಜೆಫ್ ಸೆಶನ್ಸ್ ರಶ್ಯದ ರಾಯಭಾರಿ ಸರ್ಗಿ ಕಿಸ್‌ಲ್ಯಾಕ್‌ರನ್ನು ಜುಲೈ ಮತ್ತು ಸೆಪ್ಟಂಬರ್‌ನಲ್ಲಿ ಭೇಟಿಯಾಗಿದ್ದಾರೆ ಎಂದು ‘ವಾಶಿಂಗ್ಟನ್ ಪೋಸ್ಟ್’ ವರದಿ ಮಾಡಿದೆ.
ಚುನಾವಣಾ ಪ್ರಚಾರದ ವೇಳೆ ಸೆಶನ್ಸ್ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಟ್ರಂಪ್‌ಗೆ ವಿದೇಶ ನೀತಿ ಮತ್ತು ಇತರ ವಿಷಯಗಳ ಸಲಹಾಕಾರರಾಗಿದ್ದರು.
ಚುನಾವಣೆಯಲ್ಲಿ ರಶ್ಯದ ಹಸ್ತಕ್ಷೇಪದ ಬಗ್ಗೆ ಆಗ ಆರೋಪಗಳು ಕೇಳಿಬರುತ್ತಿದ್ದವು.

ರಶ್ಯನ್ನರೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದಿದ್ದರು
ಜನವರಿ 10ರಂದುದ ನಡೆದ ಸೆನೆಟ್ ನ್ಯಾಯಾಂಗ ಸಮಿತಿಯ ವಿಚಾರಣೆಯ ವೇಳೆ, ಟ್ರಂಪ್ ಅಭಿಯಾನ ಸದಸ್ಯರು ಮತ್ತು ರಶ್ಯದ ನಡುವಿನ ಸಂಪರ್ಕಗಳ ಬಗ್ಗೆ ತನಗೆ ಮಾಹಿತಿಯಿಲ್ಲ ಎಂದು ಅಟಾರ್ನಿ ಜನರಲ್ ಜೆಫ್ ಸೆಶನ್ಸ್ ಹೇಳಿರುವುದನ್ನು ಸ್ಮರಿಸಬಹುದಾಗಿದೆ.
‘‘ರಶ್ಯನ್ನರೊಂದಿಗೆ ನಾನು ಯಾವುದೇ ಸಂಪರ್ಕಗಳನ್ನು ಹೊಂದಿಲ್ಲ’’ ಎಂದು ಅವರು ಪ್ರಮಾಣ ಮಾಡಿ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X