Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೇನಾಮಿ ವಹಿವಾಟುದಾರರಿಗೆ ಇನ್ನಷ್ಟು...

ಬೇನಾಮಿ ವಹಿವಾಟುದಾರರಿಗೆ ಇನ್ನಷ್ಟು ಬಿಗಿಯಾದ ಕಾನೂನಿನ ಕುಣಿಕೆ

ವಾರ್ತಾಭಾರತಿವಾರ್ತಾಭಾರತಿ3 March 2017 11:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೇನಾಮಿ ವಹಿವಾಟುದಾರರಿಗೆ ಇನ್ನಷ್ಟು ಬಿಗಿಯಾದ ಕಾನೂನಿನ ಕುಣಿಕೆ

ಹೊಸದಿಲ್ಲಿ,ಮಾ.3: ಬೇನಾಮಿ ವಹಿವಾಟುಗಳನ್ನು ನಡೆಸುವವರು ಏಳು ವರ್ಷಗಳ ವರೆಗೆ ಕಠಿಣ ಜೈಲುಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಮತ್ತು ಆದಾಯ ತೆರಿಗೆ ಕಾಯ್ದೆಯಡಿಯೂ ಆರೋಪಗಳನ್ನು ಎದುರಿಸಬೇಕಾಗುತ್ತದೆ ಎಂದು ತೆರಿಗೆ ಇಲಾಖೆಯು ಶುಕ್ರವಾರ ಎಚ್ಚರಿಕೆಯನ್ನು ನೀಡಿದೆ.

ಈ ಸಂಬಂಧ ಪ್ರಮುಖ ರಾಷ್ಟ್ರೀಯ ದೈನಿಕಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿರುವ ಆದಾಯ ತೆರಿಗೆ ಇಲಾಖೆಯು, 1988ರ ಬೇನಾಮಿ ಆಸ್ತಿ ವಹಿವಾಟುಗಳ ಕಾಯ್ದೆಯು 2016,ನ.1ರಿಂದ ‘ಸಕ್ರಿಯ ’ಗೊಂಡಿರುವುದರಿಂದ ಬೇನಾಮಿ ವಹಿವಾಟುಗಳಲ್ಲಿ ಭಾಗಿಯಾಗದಂತೆ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದೆ.

ಕಪ್ಪುಹಣವು ಮಾನವತೆಯ ವಿರುದ್ಧದ ಅಪರಾಧವಾಗಿದೆ. ಅದನ್ನು ನಿರ್ಮೂಲಿಸಲು ಸರಕಾರಕ್ಕೆ ನೆರವಾಗುವಂತೆ ಪ್ರತಿಯೊಬ್ಬ ಪ್ರಜ್ಞಾವಂತ ಪ್ರಜೆಯನ್ನು ನಾವು ಆಗ್ರಹಿಸುತ್ತಿದ್ದೇವೆ ಎಂದಿರುವ ಇಲಾಖೆಯು ನೂತನ ಕಾಯ್ದೆಯ ಕೆಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಿದೆ. ತಮ್ಮ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದವರು,ಇದಕ್ಕಾಗಿ ಹೂಡಿಕೆ ಮಾಡಿದವರು ಮತ್ತು ಬೇನಾಮಿ ವಹಿವಾಟುಗಳಿಗ ಕುಮ್ಮಕ್ಕು ನೀಡಿದವರು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಮತ್ತು ಏಳು ವರ್ಷಗಳವರೆಗೆ ಕಠಿಣ ಶಿಕ್ಷೆಗೊಳಗಾಗಬಹುದು, ಜೊತೆಗೆ ತಮ್ಮ ಬೇನಾಮಿ ಆಸ್ತಿಯ ಮಾರುಕಟ್ಟೆ ವೌಲ್ಯದ ಶೇ.25ರವರೆಗೆ ಮೊತ್ತವನ್ನು ದಂಡವಾಗಿ ಪಾವತಿಸಬೇಕಾಗುತ್ತದೆ ಎಂದು ಅದು ತಿಳಿಸಿದೆ.

 ಬೇನಾಮಿ ಆಸ್ತಿ ಕಾಯ್ದೆಯಡಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡುವವರು ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಬೇನಾಮಿ ಆಸ್ತಿ ವೌಲ್ಯದ ಶೇ. 10ರವರೆಗಿನ ಮೊತ್ತವನ್ನು ದಂಡವಾಗಿ ನೀಡಬೇಕಾಗುತ್ತದೆ ಎಂದಿರುವ ಇಲಾಖೆಯು, ಬೇನಾಮಿ ಆಸ್ತಿಯನ್ನು ವಶಪಡಿಸಿಕೊಳ್ಳಬಹುದು ಮತ್ತು ಸರಕಾರವು ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದೆ.

ಕಾಯ್ದೆಯು ಕಳೆದ ವರ್ಷ ಜಾರಿಗೊಂಡ ನಂತರ ಆದಾಯ ತೆರಿಗೆ ಇಲಾಖೆಯು ದೇಶಾದ್ಯಂತ 230ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿಕೊಂಡಿದೆ ಮತ್ತು 55 ಕೋ.ರೂ.ಮೌಲ್ಯದ ಆಸ್ತಿಗಳನ್ನು ವಶಪಡಿಸಿಕೊಂಡಿದೆ. 200 ಕೋ.ರೂ.ಮೌಲ್ಯದ ಬೇನಾಮಿ ಆಸ್ತಿಗಳಿಗೆ ಸಂಬಂಧಿಸಿದ 140 ಪ್ರಕರಣಗಳಲ್ಲಿ ಜಪ್ತಿ ನೋಟಿಸುಗಳನ್ನು ಜಾರಿಗೊಳಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X