Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಟೆಸ್ಟ್: ಭಾರತ 189 ರನ್‌ಗೆ...

ದ್ವಿತೀಯ ಟೆಸ್ಟ್: ಭಾರತ 189 ರನ್‌ಗೆ ಆಲೌಟ್

ಶತಕ ವಂಚಿತ ರಾಹುಲ್, ಲಿಯೊನ್ ಅಮೋಘ ಬೌಲಿಂಗ್

ವಾರ್ತಾಭಾರತಿವಾರ್ತಾಭಾರತಿ4 March 2017 3:29 PM IST
share
ದ್ವಿತೀಯ ಟೆಸ್ಟ್: ಭಾರತ 189 ರನ್‌ಗೆ ಆಲೌಟ್

ಬೆಂಗಳೂರು, ಮಾ.4: ಆಫ್-ಸ್ಪಿನ್ನರ್ ನಥಾನ್ ಲಿಯೊನ್(8-50)ಸ್ಪಿನ್ ದಾಳಿಗೆ ನಲುಗಿದ ಭಾರತ ತಂಡ ಆಸ್ಟ್ರೇಲಿಯ ವಿರುದ್ಧದ ಎರಡನೆ ಟೆಸ್ಟ್‌ನಲ್ಲಿ ಕೇವಲ 189 ರನ್‌ಗೆ ಆಲೌಟಾಗಿದೆ.

ಮೊದಲ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯ ಮೊದಲ ದಿನದಾಟದಂತ್ಯಕ್ಕೆ 16 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ಡೇವಿಡ್ ವಾರ್ನರ್(ಅಜೇಯ 23) ಹಾಗೂ ರೆನ್‌ಶಾ(ಅಜೇಯ 15) ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ಲಿಯೊನ್ ಸ್ಪಿನ್ ಮೋಡಿಗೆ ಮರುಳಾಗಿ 71.2 ಓವರ್‌ಗಳಲ್ಲಿ ಕೇವಲ 189 ರನ್‌ಗೆ ಆಲೌಟಾಯಿತು. ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ಟಾಸ್ ಜಯಿಸಿದ ಭಾರತದ ನಾಯಕ ವಿರಾಟ್ ಕೊಹ್ಲಿ ಪಂದ್ಯದ ಮೊದಲೆರಡು ದಿನ ಪಿಚ್ ಬ್ಯಾಟಿಂಗ್‌ಗೆ ಪೂರಕವಾಗಿರುತ್ತದೆ ಎಂಬ ಯೋಚನೆಯೊಂದಿಗೆ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಮೊದಲ ದಿನದಾಟದಲ್ಲೇ ಪಿಚ್ ಸ್ಪಿನ್ನರ್‌ಗಳ ಸ್ನೇಹಿಯಾಗಿ ಪರಿಣಮಿಸಿದ್ದು 22.2 ಓವರ್‌ಗಳ ಬೌಲಿಂಗ್ ನಡೆಸಿದ ಲಿಯೊನ್ 4 ಮೇಡನ್ ಓವರ್ ಸಹಿತ 50 ರನ್‌ಗೆ 8 ವಿಕೆಟ್‌ಗಳನ್ನು ಉಡಾಯಿಸಿದರು.

 ಲೋಕಲ್ ಹೀರೊ ಕೆಎಲ್ ರಾಹುಲ್(90 ರನ್, 205 ಎಸೆತ, 9 ಬೌಂಡರಿ) ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದರೆ, ಉಳಿದ ದಾಂಡಿಗರು ಆಸೀಸ್‌ನ ಶಿಸ್ತುಬದ್ಧ ಬೌಲಿಂಗ್ ಎದುರಿಸಲಾಗದೇ ಶಸ್ತ್ರತ್ಯಾಗ ಮಾಡಿದರು.

 ಕರ್ನಾಟಕದ ಆರಂಭಿಕ ಬ್ಯಾಟ್ಸ್‌ಮನ್ ರಾಹುಲ್ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಟೆಸ್ಟ್ ಪಂದ್ಯವನ್ನು ಆಡಿದ್ದು ಕೇವಲ 10 ರನ್‌ನಿಂದ 5ನೇ ಶತಕ ವಂಚಿತರಾದರು. ರಾಹುಲ್ ವಿಕೆಟ್ ಲಿಯೊನ್ ಪಾಲಾಯಿತು.

 ಸ್ಟಾರ್ಕ್ ಹಾಗೂ ಹೇಝಲ್‌ವುಡ್ ಹೊಸ ಚೆಂಡಿನಲ್ಲಿ ಬಿಗಿ ಬೌಲಿಂಗ್ ಮಾಡಿ ಆರಂಭದಲ್ಲೇ ಸವಾಲಾದರು. ಸ್ಟಾರ್ಕ್ ಅವರು ಅಭಿನವ್ ಮುಕುಂದ್ ವಿಕೆಟ್ ಪಡೆದು ವಿಕೆಟ್ ಬೇಟೆಗೆ ಚಾಲನೆ ನೀಡಿದರು.

ಗಾಯಗೊಂಡಿರುವ ಮುರಳಿ ವಿಜಯ್ ಬದಲಿಗೆ ರಾಹುಲ್‌ರೊಂದಿಗೆ ಇನಿಂಗ್ಸ್ ಆರಂಭಿಸುವ ಅವಕಾಶ ಪಡೆದಿದ್ದ ಅಭಿನವ್ ಮುಕುಂದ್ 8 ಎಸೆತಗಳನ್ನು ಎದುರಿಸಿದರೂ ಖಾತೆ ತೆರೆಯಲು ವಿಫಲವಾಗಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು.

ಆಗ 2ನೆ ವಿಕೆಟ್‌ಗೆ ಚೇತೇಶ್ವರ ಪೂಜಾರ(17) ಅವರೊಂದಿಗೆ 61 ರನ್ ಜೊತೆಯಾಟ ನಡೆಸಿದ ರಾಹುಲ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡುವ ಯತ್ನ ನಡೆಸಿದರು. ಈ ಜೋಡಿಯನ್ನು ಲಿಯೊನ್ ಬೇರ್ಪಡಿಸಿದರು. 66 ಎಸೆತಗಳಲ್ಲಿ 1 ಬೌಂಡರಿ ಸಹಿತ ಕೇವಲ 17 ರನ್ ಗಳಿಸಿದ್ದ ಪೂಜಾರ ಅವರು ಲಿಯೊನ್‌ಗೆ ವಿಕೆಟ್ ಒಪ್ಪಿಸಿದರು. ಪೂಜಾರ ಔಟಾದ ಬಳಿಕ ಬಂದ ನಾಯಕ ಕೊಹ್ಲಿ ಹಾಗೂ ರಹಾನೆ(17) ಬೇಗನೆ ಔಟಾಗಿ ನಿರಾಸೆಗೊಳಿಸಿದರು.

 ನಾಯಕ ಕೊಹ್ಲಿ 17 ಎಸೆತಗಳನ್ನು ಎದುರಿಸಿ 2 ಬೌಂಡರಿಗಳಿರುವ 12 ರನ್ ಗಳಿಸಿ ಲಿಯೊನ್ ಬೀಸಿದ ಎಲ್‌ಬಿಡಬ್ಲು ಬಲೆಗೆ ಬಿದ್ದರು. ಆಗ ತಂಡದ ಸ್ಕೋರ್ 3 ವಿಕೆಟ್‌ಗೆ 88. 4ನೆ ವಿಕೆಟ್‌ಗೆ ರಹಾನೆ-ರಾಹುಲ್ 30 ರನ್ ಸೇರಿಸಿದರು. 17 ರನ್ ಗಳಿಸಿದ್ದ ರಹಾನೆ ಅವರು ಲಿಯೊನ್ ಎಸೆತದಲ್ಲಿ ವಿಕೆಟ್‌ಕೀಪರ್ ವೇಡ್‌ರಿಂದ ಸ್ಟಂಪ್ ಔಟಾದರು.

ಆಗ 5ನೆ ವಿಕೆಟ್‌ಗೆ ಕರುಣ್ ನಾಯರ್(26) ಹಾಗೂ ರಾಹುಲ್ 38 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸುವ ಸೂಚನೆ ನೀಡಿದ್ದರು. ಕನ್ನಡಿಗ ನಾಯರ್ ವಿಕೆಟ್ ಉರುಳಿಸಿದ ಸ್ಪಿನ್ನರ್ ಸ್ಟೀಫನ್ ಓ’ಕೀಫೆ ಆಸೀಸ್‌ಗೆ ಮತ್ತೊಮ್ಮೆ ಮೇಲುಗೈ ತಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X