Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ನಗರಸಭಾ ಆಡಳಿತ ವೈಫಲ್ಯದ...

ಪುತ್ತೂರು: ನಗರಸಭಾ ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 March 2017 6:36 PM IST
share
ಪುತ್ತೂರು: ನಗರಸಭಾ ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು, ಮಾ.4: ನಗರಸಭೆಯಲ್ಲಿ ಆದರ್ಶ ಆಡಳಿತ ತರುತ್ತೇವೆ ಎಂದು ಹೇಳಿ ಅಧಿಕಾರ ಪಡೆದು ಕೊಂಡ ಕಾಂಗ್ರೆಸ್ ಸದಸ್ಯರು ಇದೀಗ ಅಧಿಕಾರ ದುರುಪಯೋಗದೊಂದಿಗೆ ಅವರೊಳಗೆ ಜಗಳವಾಡುತ್ತಾ ಪುತ್ತೂರನ್ನು ಹಾಳುಮಾಡುತ್ತಿದ್ದಾರೆ. ಆಡಳಿತ ವ್ಯವಸ್ಥೆಯನ್ನು ವಾರದೊಳಗೆ ಸರಿಪಡಿಸಿಕೊಳ್ಳದಿದ್ದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದನದಲ್ಲಿ ನಗರಸಭೆಯ ದುರಾಡಳಿತದ ಬಗ್ಗೆ ಧ್ವನಿಯೆತ್ತಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಎಚ್ಚರಿಸಿದರು.

ಅವರು ಬಿಜೆಪಿ ನಗರ ಮಂಡಲದ ನೇತೃತ್ವದಲ್ಲಿ ನಗರಸಭೆಯ ಆಡಳಿತ ವೈಫಲ್ಯದ ವಿರುದ್ದ ಶನಿವಾರ ನಗರಸಭೆಯ ಮುಂಬಾಗದ ಕಿಲ್ಲೆ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ನಗರಸಭೆಯಲ್ಲಿ ಬಹುಮತವಿಲ್ಲದ ಕಾಂಗ್ರೆಸ್ ಮೀಸಲಾತಿಯ ಕಾರಣದಿಂದ ಅಧ್ಯಕ್ಷ ಪಟ್ಟವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಅವರದೇ ಸರ್ಕಾರವಿದ್ದ ಕಾರಣ ನಗರಸಭೆಯನ್ನು ಆದರ್ಶ ನಗರವನ್ನಾಗಿ ಪತಿವರ್ತಿಸುವ ಅವಕಾಶ ಅವರಿಗಿತ್ತು. ಆದರೆ ಇಲ್ಲಿ ನಗರಸಭೆಯ ಅನುದಾನದಿಂದ ಕಾಂಗ್ರೆಸ್ ಪುಡಾರಿಗಳ ಮನೆಗಳು ಮಾತ್ರ ಆದರ್ಶವಾಗಿದೆ ಎಂದು ಟೀಕಿಸಿದರು.

 ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮಾತನಾಡಿ, ನಗರಸಭೆ ಆಡಳಿತ ಎಲ್ಲಿಯ ತನಕ ವೈಫಲ್ಯ ಕಂಡಿದೆ ಎಂದರೆ ಬನ್ನೂರು ಡಂಪಿಂಗ್ ಯಾರ್ಡ್‌ನಲ್ಲಿ ಒಂದು ವಾರದಿಂದ ಬೆಂಕಿ ಬಿದ್ದರೂ ನಗರಸಭೆ ಅಧ್ಯಕ್ಷರು ಮತ್ತು ಶಾಸಕಿ ಅವರು ಆ ಬಗ್ಗೆ ಚಿಂತಿಸದೆ ಪಲಾಯನಗೈದಿದ್ದಾರೆ. ರಾಜ್ಯ ಸಂಸದೀಯ ಕಾರ್ಯದರ್ಶಿಯ ಪಟ್ಟ ಪಡೆದ ಪುತ್ತೂರಿನ ಶಾಸಕರು 70 ಸಂಭ್ರಮ ಆಚರಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೂ, ಪುತ್ತೂರಿನ ಶಾಸಕರಿಗೂ ಸರಿಯಾಗಿ ಹೊಂದಾಣಿಕೆ ಇಲ್ಲದ ಹಿನ್ನೆಲೆಯಲ್ಲಿ ಪುತ್ತೂರು ಬರಗಾಲ ಆಗುವ ದಿನ ಇನ್ನೂ ದೂರ ಉಳಿದಿಲ್ಲ. ಸಚಿವರು ಕೇವಲ ಮಂಗಳೂರು ಮತ್ತು ಬಂಟ್ವಾಳವನ್ನು ಬರಪೀಡಿತ ಪ್ರದೇಶದ ಎಂದು ಘೋಷಣೆ ಮಾಡಿ ಪುತ್ತೂರಿಗೆ ಬೋರ್ ಕೊರೆಯಲು ಅವಕಾಶ ನೀಡದೆ ಮಲತಾಯಿ ದೋರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ ನಗರಸಭೆಯಲ್ಲಿ ಬಹುಮತದಿಂದ ಕೂಡಿದ ಬಿಜೆಪಿ ಸದಸ್ಯರಿದ್ದರೂ ಕಾಂಗ್ರೆಸ್ ಸದಸ್ಯರು ಅಧ್ಯಕ್ಷತೆಯನ್ನು ಪಡೆದು ಆಡಳಿತ ನಡೆಸುತ್ತಿದ್ದಾರೆ. 6 ತಿಂಗಳಾದರೂ ಸ್ಥಾಯಿ ಸಮಿತಿ ಸದಸ್ಯರ ನೇಮಕ ಮಾಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತದಾರರು ಸರಿಯಾದ ಉತ್ತರ ನೀಡಿದ್ದರೂ ನಗರಸಭೆ ಆಡಳಿತ ಇನ್ನೂ ಪಾಠ ಕಲಿತಿಲ್ಲ ಎಂದು ದೂರಿದರು.

ನಗರಸಭೆ ಉಪಾಧ್ಯಕ್ಷ ವಿಶ್ವನಾಥ ಗೌಡ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಗೋಪಾಲಕೃಷ್ಣ ಹೇರಳೆ, ಪುರಸಭೆ ಮಾಜಿ ಅಧ್ಯಕ್ಷೆ ಪ್ರೇಮಲತಾ ರಾವ್, ಮಾಜಿ ಸದಸ್ಯೆ ಶಶಿಕಲಾ ಸಿ.ಹೆಚ್ ಮಾತನಾಡಿದರು. ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಪಕ್ಷದ ಮುಖಂಡರಾದ ವಿದ್ಯಾಗೌರಿ, ಶಂಭುಭಟ್, ಆರ್.ಸಿ.ನಾರಾಯಣ, ರಾಮದಾಸ್ ಹಾರಾಡಿ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ನಗರ ಯುವ ಮೋರ್ಛಾದ ಅಧ್ಯಕ್ಷ ಅನೀಷ್ ಬಡೆಕ್ಕಿಲ ಮನವಿಯನ್ನು ಸಭೆಯಲ್ಲಿ ಮಂಡಿಸಿದರು. ನಗರಸಭಾ ಸದಸ್ಯ ರಾಜೇಶ್ ಬನ್ನೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಜೀವಂಧರ್ ಜೈನ್ ಸ್ವಾಗತಿಸಿದರು.

ಪ್ರತಿಭಟನಾ ಸಭೆಯ ಬಳಿಕ ಬಳಿಕ ಜಿಲ್ಲಾಧಿಕಾರಿಯವರಿಗೆ ಸಹಾಯಕ ಕಮೀಷನರ್ ಮೂಲಕ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ನಗರಸಭೆಯ ನಿರ್ಣಯ ತಿರುಚುವಿಕೆ, ಸ್ಥಾಯಿ ಸಮಿತಿ ಆಯ್ಕೆಯಾಗಿ 3 ತಿಂಗಳಾದರೂ ದಾಖಲೆ ಮಾಡಲದಿರುವುದ. ಖಾತಾ ಬದಲಾವಣೆಯಲ್ಲಿ ವಿಳಂಬ, ಉದ್ಯಮ ಪರವಾನಿಗೆ ನೀಡದಿರುವುದು, ಬಹುಮತದ ನಿರ್ಣಯ ಉಲ್ಲಂಘಿಸಿ ವಾರದ ಸಂತೆ ಸ್ಥಳಾಂತರ ಸೇರಿದಂತೆ 9 ಅಂಶಗಳನ್ನು ಉಲ್ಲೇಖಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X