Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 20 ಕ್ವಿಂಟಲ್ ಆಲೂಗಡ್ಡೆ ಮಾರಿ 1 ರೂ. ಲಾಭ...

20 ಕ್ವಿಂಟಲ್ ಆಲೂಗಡ್ಡೆ ಮಾರಿ 1 ರೂ. ಲಾಭ ! : ಪ್ರಧಾನಿಗೆ ರೈತನ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ4 March 2017 6:39 PM IST
share
20 ಕ್ವಿಂಟಲ್ ಆಲೂಗಡ್ಡೆ ಮಾರಿ 1 ರೂ. ಲಾಭ ! : ಪ್ರಧಾನಿಗೆ ರೈತನ ಟ್ವೀಟ್

ಇಂದೋರ್ , ಮಾ. 4 : ಧವಸ ಧಾನ್ಯಗಳನ್ನು ಬಿಟ್ಟು ತರಕಾರಿ ಬೆಳೆದರೆ ಲಾಭ ಹೆಚ್ಚು ಎಂದು ಹೆಚ್ಚಿನವರು ಹೇಳುತ್ತಾರೆ. ಆದರೆ ಈಗ ಕೃಷಿಕರ ಪಾಲಿಗೆ ಏನನ್ನೂ ಬೆಳೆದರೂ ನಷ್ಟವೇ ಆಗುವಂತಹ ಪರಿಸ್ಥಿತಿ ಬಂದೊದಗಿದೆ. ಇಲ್ಲಿನ ರೈತ ರಾಜಾ ಚೌಧರಿ ಲಾಭ ಸಿಗಬಹುದು ಎಂಬ ಆಸೆಯಿಂದ ಆಲೂಗಡ್ಡೆ ಬೆಳೆದು ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. 

ತಾನು ಬೆಳೆದ 20 ಕ್ವಿಂಟಲ್ ಆಲೂಗಡ್ಡೆಯನ್ನು ಇಲ್ಲಿನ ಚೊಯ್ತಾರಾಂ ಮಂಡಿಯಲ್ಲಿ ಜುಜುಬಿ 1075 ರೂಪಾಯಿಗೆ ಮಾರಬೇಕಾಯಿತು. ಆದರೆ ಮಂಡಿಗೆ ಆಲೂಗಡ್ಡೆಯನ್ನು ತಲುಪಿಸಲು ಅವರಿಗೆ 1074 ರೂ. ಖರ್ಚಾಗಿದೆ ! ಅಂದರೆ , ಅವರಿಗೆ 20 ಕ್ವಿಂಟಲ್ ಆಲೂಗಡ್ಡೆಯನ್ನು ಮಾರಿ ಸಿಕ್ಕಿದ ಲಾಭ ಒಂದು ರೂಪಾಯಿ !

ವಿಶೇಷವೆಂದರೆ, ರಾಜಾ ಚೌಧರಿ ಪ್ರಕಾರ ಅವರಿಗೆ ಈ ಬಾರಿ ಒಂದು ರೂಪಾಯಿಯಾದರೂ ಲಾಭ ಸಿಕ್ಕಿದೆ. ಆದರೆ ಕಳೆದ ಬಾರಿ 2393 ರೂ. ಖರ್ಚು  ಮಾಡಿ ಅವರಿಗೆ ಸಿಕ್ಕಿದ್ದು  1620 ರೂ . ! ಇದಕ್ಕೆ ಸಂಬಂಧಿಸಿದ ಬಿಲ್ ಗಳ ದಾಖಲೆಯನ್ನು ರಾಜಾ ಜೋಪಾನವಾಗಿಇಟ್ಟುಕೊಂಡಿದ್ದಾರೆ. 

ಇಲ್ಲಿನ ಕೃಷಿಕರ ಸಂಘದ ಕೇದಾರ್ ಸಿರೋಹಿ ಅವರು ಈ ಖರ್ಚು ಹಾಗು ಆದಾಯದ ವಿವರಗಳನ್ನು ಪ್ರಧಾನಿಗೆ ಟ್ವೀಟ್ ಮಾಡಿದ್ದಾರೆ. 2000 ಕೇಜಿ ಆಲೂಗಡ್ಡೆಗೆ 1 ರೂ. ಸಿಕ್ಕಿದರೆ ಒಂದು ಕೇಜಿಗೆ ಎಷ್ಟು ಆದಾಯ ರೈತನಿಗೆ ಸಿಗುತ್ತದೆ ಎಂದು ಅವರು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ. 

ಈಗ ಈ ಟ್ವೀಟ್ ಜನರ ನಡುವೆ ಚರ್ಚೆಗೆ ಕಾರಣವಾಗಿದೆ. ಪ್ರಧಾನಿಯವರ ಅಚ್ಛೇದಿನ್ ಭರವಸೆಯನ್ನು ನೆನಪಿಸಿ ಜನರು ಈ ಬಗ್ಗೆ ಕಮೆಂಟ್ ಮಾಡುತ್ತಿದ್ದಾರೆ. 

2000 किलो आलू की कीमत १ रुपया इसमें बताओ कितना रुपया किलो मिलेगा किसान को ? विद्वान गुना भाग और जोड़ कर बताये |@PMOIndia pic.twitter.com/Kb9Vyh3sH5

— Kedar Sirohi (@KedarSirohi) February 28, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X