Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಲ್ಲೂರು ಸಮೀಪದ ಹರವರಿಯಲ್ಲಿ ಪ್ರಾಚೀನ...

ಕೊಲ್ಲೂರು ಸಮೀಪದ ಹರವರಿಯಲ್ಲಿ ಪ್ರಾಚೀನ ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ4 March 2017 7:28 PM IST
share
ಕೊಲ್ಲೂರು ಸಮೀಪದ ಹರವರಿಯಲ್ಲಿ ಪ್ರಾಚೀನ ಶಾಸನ ಪತ್ತೆ

ಉಡುಪಿ, ಮಾ.4: ಕುಂದಾಪುರ ತಾಲೂಕು ಕೊಲ್ಲೂರು ಸಮೀಪದ ಹರವರಿಯಲ್ಲಿ ವಿಜಯನಗರ ಕಾಲದ ಕನ್ನಡ ಶಾಸನ ಪತ್ತೆಯಾಗಿದೆ ಎಂದು ಕರಾವಳಿಯ ಖ್ಯಾತ ಪುರಾತತ್ವ ವಿದ್ವಾಂಸ ಪ್ರೊ.ಟಿ.ಮುರುಗೇಶಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಯತಾಕಾರದ ಸುಮಾರು 110 ಸೆ.ಮೀ ಉದ್ದದ ಕಲ್ಲು ಚಪ್ಪಡಿಯ ಮೇಲ್ಭಾಗವನ್ನು ಕುದುರೆ ಲಾಳಾಕೃತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ಮೇಲಿನ ಪಟ್ಟಿಕೆಯಲ್ಲಿ ಸೂರ್ಯ-ಚಂದ್ರ, ಶಿವಲಿಂಗ, ದೀಪದಕಂಭ ಮತ್ತು ರಾಜ ಶಾಸನ ಎಂಬುದರ ಪ್ರತೀಕವಾಗಿ ಚಿತ್ರಿಸಿರುವ ಖಡ್ಗವಿದೆ.

ಶಾಸನದ ಆರಂಭಿಕ ಬರಹ ಸಂಪೂರ್ಣವಾಗಿ ಅಳಿಸಿ ಹೋಗಿದೆ. ಶಾಸನದ ಕೆಳಗಿನ 12 ಸಾಲುಗಳು ಮಾತ್ರ ಸ್ಪಷ್ಟವಾಗಿವೆ.

ಶಾಸನದ ವಿಷಯ:

ಲಭ್ಯ ಶಾಸನದ ಬರಹದ ಪ್ರಕಾರ ಹರವರಿಯ ಭೂಮಿಯನ್ನು ಶ್ರೀತಿಂಮಂಣ ಗುರುರಾಯರಿಗೆ ಆಯುಷ್ಯ ಆರೋಗ್ಯ ಅಭಿವೃದ್ಧಿಯಾಗಲೆಂದು ದೇವರಾಯಪುರದ ಮಹಾಜನಂಗಳಿಗೆ ನೀರನೆರೆದು ದಾನವಾಗಿ ನೀಡಲಾಯಿತೆಂದು ಶಾಸನದಲ್ಲಿ ಹೇಳಲಾಗಿದೆ. ಈ ದಾನ ಶಾಸನಕ್ಕೆ ಸಾಕ್ಷಿಗಳು ತಿಮ್ಮಂಣಗಳು, ಅವಧಾನಿ ನಾಗಂಣಗಳು ಎಂದು ಹೇಳಲಾಗಿದೆ.

ಶಾಸನದ ಮಹತ್ವ:

ಶಾಸನದ ಮೇಲಿನ ಬರಹ ಪೂರ್ತಿಯಾಗಿ ಅಳಿಸಿ ಹೋಗಿರುವುದರಿಂದ, ಶಾಸನ ನೀಡಿದ ರಾಜ ಮನೆತನ ಮತ್ತು ರಾಜ ಯಾರು ಎಂದು ತಿಳಿಯುವುದಿಲ್ಲ. ಆದರೆ ಕರಾವಳಿ ಮತ್ತು ಮಲೆನಾಡಿನಲ್ಲಿ ದೊರೆಯುವ ವಿಜಯನಗರದ ಶಾಸನಗಳಲ್ಲಿ ಶಿವಲಿಂಗವನ್ನು ಪ್ರಭಾವಳಿಯಲ್ಲಿ ತೋರಿಸಲಾಗಿರುತ್ತದೆ. ಹಾಗೂ ಶಾಸನದ ಬರಹದ ಶೈಲಿ ವಿಜಯನಗರದ ಬರಹದ ಶೈಲಿಯನ್ನು ಹೋಲುತ್ತದೆ. ಇವುಗಳ ಆಧಾರದ ಮೇಲೆ ಶಾಸನದ ಕಾಲವನ್ನು ವಿಜಯನಗರದ ಕಾಲದ ಶಾಸನವೆಂದು ಪರಿಗಣಿಸಲಾಗಿದೆ.

ಶಾಸನೋಕ್ತ ತಿಂಮಂಣ ಗುರುರಾಯರನ್ನು ವಿಜಯನಗರದ ಪ್ರಖ್ಯಾತ ಚಕ್ರವರ್ತಿ ಕೃಷ್ಣದೇವರಾಯನ ಪ್ರಧಾನ ಮಂತ್ರಿಯಾಗಿರಬೇಕೆಂದು ಗುರುತಿಸಲಾಗಿದೆ. ದಾನವನ್ನು ಸ್ವೀಕರಿಸಿದ ದೇವರಾಯಪುರದ ಮಹಾಜನಂಗಳು ಶೃಂಗೇರಿಯ ದೇವರಾಯಪುರದ ಮಹಾಜನಗಳೆಂದು ಗುರುತಿಸಲಾಗಿದೆ.

ಈ ಶಾಸನ ಅಧ್ಯಯನದಲ್ಲಿ ತಮಗೆ ಹರವರಿಯ ರವೀಂದ್ರ ಶೆಟ್ಟಿ, ಜಯಕರ ಶೆಟ್ಟಿ, ಕೊಲ್ಲೂರಿನ ಮುರುಳೀಧರ ಹೆಗಡೆ ಮತ್ತು ಸುಬಾಷ್ ಸಹಕರಿಸಿದ್ದರೆಂದು ಪ್ರೊ.ಮುರುಗೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X