Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಚ್-1ಬಿ ವೀಸಾ ವಿವಾದ : ಭಾರತ ಕಳವಳ ಪಡುವ...

ಎಚ್-1ಬಿ ವೀಸಾ ವಿವಾದ : ಭಾರತ ಕಳವಳ ಪಡುವ ಅಗತ್ಯವಿಲ್ಲ: ಅಮೆರಿಕದ ಭರವಸೆ

ವಾರ್ತಾಭಾರತಿವಾರ್ತಾಭಾರತಿ4 March 2017 7:47 PM IST
share
ಎಚ್-1ಬಿ ವೀಸಾ ವಿವಾದ : ಭಾರತ ಕಳವಳ ಪಡುವ ಅಗತ್ಯವಿಲ್ಲ: ಅಮೆರಿಕದ ಭರವಸೆ

ವಾಷಿಂಗ್ಟನ್, ಮಾ.4: ಎಚ್-1ಬಿ ವೀಸಾದ ವಿಷಯ ತನ್ನ ಆದ್ಯತೆಯ ಪಟ್ಟಿಯಲ್ಲಿ ಇಲ್ಲ ಎಂದು ಭಾರತಕ್ಕೆ ಭರವಸೆ ನೀಡಿರುವ ಅಮೆರಿಕ, ಇದು ಟ್ರಂಪ್ ಆಡಳಿತ ರೂಪಿಸುತ್ತಿರುವ ವಲಸೆ ಯೋಜನೆಯ ಒಂದು ಭಾಗವಾಗಿದೆ ಎಂದು ಭರವಸೆ ನೀಡಿದೆ.

 ಎಚ್-1ಬಿ ವೀಸಾದ ಬಳಕೆಯನ್ನು ಮೊಟಕುಗೊಳಿಸುವ ನಿಟ್ಟಿನಲ್ಲಿ ಟ್ರಂಪ್ ಆಡಳಿತವು ಒಂದು ಕಾರ್ಯನಿರ್ವಹಣಾ ಆದೇಶವನ್ನು ಜಾರಿಗೆ ತರಲು ಯತ್ನಿಸುತ್ತಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ಚರ್ಚೆಯ ಸಂದರ್ಭದಲ್ಲಿ ಅಮೆರಿಕದಿಂದ ಈ ಭರವಸೆ ದೊರೆತಿದೆ.

 ಭಾರತೀಯ ತಂತ್ರಜ್ಞಾನ ಕ್ಷೇತ್ರದ ಕೊಡುಗೆಯನ್ನು ಗೌರವಿಸಬೇಕು ಎಂಬ ಭಾವನೆಯಿದೆ. ಖಂಡಿತವಾಗಿಯೂ ಎಚ್-1ಬಿ ವೀಸಾದ ವಿಷಯಕ್ಕೆ ಸರಕಾರ ಆದ್ಯತೆ ನೀಡುತ್ತಿಲ್ಲ. ವಲಸೆ ಸಮಸ್ಯೆಯ ಬಗ್ಗೆ ಅವರ ಗಮನ ಕೇಂದ್ರಿತವಾಗಿದೆ ಎಂದು ಅಮೆರಿಕಕ್ಕೆ ಭೇಟಿ ನೀಡಿರುವ ವಾಣಿಜ್ಯ ಇಲಾಖೆಯ ಕಾರ್ಯದರ್ಶಿ ರೀಟಾ ತಿಯೋಟಿಯಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

 ವಿದೇಶ ವ್ಯವಹಾರ ಇಲಾಖೆಯ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಅಮೆರಿಕಕ್ಕೆ ಭೇಟಿ ನೀಡಿರುವ ರೀಟಾ, ಟ್ರಂಪ್ ಆಡಳಿತದ ಉನ್ನತ ಅಧಿಕಾರಿಗಳು ಹಾಗೂ ಅಮೆರಿಕ ಸಂಸತ್ತಿನ ಮುಖಂಡರೊಂದಿಗೆ ಚರ್ಚೆ ನಡೆಸಿದ್ದು ಈ ಚರ್ಚೆಯ ವೇಳೆ ಎಚ್-1ಬಿ ವೀಸಾದ ವಿಷಯವನ್ನು ಪ್ರಮುಖವಾಗಿ ಪ್ರಸ್ತಾವಿಸಲಾಗಿತ್ತು. ಎಚ್-1ಬಿ ವೀಸಾ ಎಂಬುದು ವ್ಯಾಪಾರ ಮತ್ತು ಸೇವೆಯ ವಿಭಾಗಕ್ಕೆ ಸೇರಿದ್ದು ಅಮೆರಿಕದ ಅರ್ಥವ್ಯವಸ್ಥೆ ಹೆಚ್ಚು ಸ್ಪರ್ಧಾತ್ಮಕವಾಗಿರಲು ನೆರವಾಗುತ್ತದೆ ಎಂಬ ಅಭಿಪ್ರಾಯವನ್ನು ಭಾರತ ಚರ್ಚೆಯ ವೇಳೆ ವ್ಯಕ್ತಪಡಿಸಿತ್ತು.

  ಅಮೆರಿಕದ ಸಂಸ್ಥೆಗಳನ್ನು ಅಮೆರಿಕಕ್ಕೆ ವಾಪಾಸು ಕರೆತರುವುದು ಮತ್ತು ಹೆಚ್ಚಿನ ವಿದೇಶಿ ಬಂಡವಾಳ ಆಕರ್ಷಿಸುವುದು ಟ್ರಂಪ್ ಆಡಳಿತದ ಉದ್ದೇಶವಾಗಿದ್ದಲ್ಲಿ , ಅಮೆರಿಕ ಹೆಚ್ಚು ಸ್ಪರ್ಧಾತ್ಮಕವಾಗಿರುವುದು ಮುಖ್ಯವಾಗಿದೆ. ಆದ್ದರಿಂದ ಈ ಸಹಭಾಗಿತ್ವಕ್ಕೆ ಹೆಚ್ಚಿನ ಅವಶ್ಯಕತೆಯಿದೆ ಎಂದು ಜೈಶಂಕರ್ ತಿಳಿಸಿದರು. ಎಚ್-1ಬಿ ಎಂಬುದು ವ್ಯವಹಾರ ಮತ್ತು ವ್ಯಾಪಾರದ ವಿಷಯವಾಗಿದ್ದು ಇದು ಆರ್ಥಿಕ ವಿಷಯವಾಗಿಲ್ಲ. ಅದಾಗ್ಯೂ, ಅಮೆರಿಕದ ಸಂದರ್ಭದಲ್ಲಿ ಇದನ್ನು ವಲಸೆ ವಿಷಯದ ಭಾಗವಾಗಿ ಸೇರಿಸಲಾಗಿದೆ ಎಂದು ಅವರು ಹೇಳಿದರು.

  ಅಧ್ಯಕ್ಷರು ಸಂಸತ್ತನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಈ ವಿಷಯದ ಬಗ್ಗೆ ಅರ್ಹತೆ ಆಧಾರಿತ ಪ್ರಸ್ತಾವನೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಭಾರತೀಯರ ಸಾಮರ್ಥ್ಯದ ಬಗ್ಗೆ ಅಮೆರಿಕದಲ್ಲಿ ಸಾಕಷ್ಟು ಗೌರವದ ಭಾವನೆಯಿದೆ ಎಂದು ಜೈಶಂಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X