Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಲವನ ಜಿಮ್ ಕೇಂದ್ರ ಸ್ಥಳಾಂತರಕ್ಕೆ...

ಬಾಲವನ ಜಿಮ್ ಕೇಂದ್ರ ಸ್ಥಳಾಂತರಕ್ಕೆ ಅವಕಾಶ ನೀಡುವುದಿಲ್ಲ: ಶಕುಂತಳಾ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ5 March 2017 5:51 PM IST
share
ಬಾಲವನ ಜಿಮ್ ಕೇಂದ್ರ ಸ್ಥಳಾಂತರಕ್ಕೆ ಅವಕಾಶ ನೀಡುವುದಿಲ್ಲ: ಶಕುಂತಳಾ ಶೆಟ್ಟಿ

ಪುತ್ತೂರು, ಮಾ.5: ಡಾ.ಶಿವರಾಮ ಕಾರಂತರ ಬಾಲವನಕ್ಕೆ ಮಂಜೂರುಗೊಂಡಿರುವ ಜಿಮ್ ಕೇಂದ್ರವನ್ನು ಯಾವುದೇ ಕಾರಣಕ್ಕೂ ಇತರೆಡೆಗೆ ಸ್ಥಳಾಂತರ ಮಾಡಲಾಗುವುದಿಲ್ಲ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.

ಅವರು ಭಾನುವಾರ ಪರ್ಲಡ್ಕದಲ್ಲಿನ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ನಡೆದ ಪುತ್ತೂರು ಅಕ್ವೆಟಿಕ್ ಕ್ಲಬ್ ವಾರ್ಷಿಕ ದಿನಾಚರಣೆ, ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರದಿಂದ ಬಾಲವನಕ್ಕೆ ಮಂಜೂರುಗೊಂಡಿರುವ ಜಿಮ್ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸುವ ಹುನ್ನಾರ ನಡೆಯುತ್ತಿದೆ. ಈ ಉದ್ದೇಶವನ್ನು ಯಾವುದೇ ಕಾರಣಕ್ಕೂ ಈಡೇರಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

ಡಾ. ಕಾರಂತರ ವಾಸದ ಮನೆ ತೀರಾ ಅಜೀರ್ಣಾವಸ್ಥೆಯಲ್ಲಿದ್ದಾಗ ಯಾರೂ ಮಾತನಾಡಿಲ್ಲ. ತನ್ನ ಪ್ರಯತ್ನದಿಂದ ಮನೆ ದುರಸ್ತಿಗೆ ಅನುದಾನ ಮಂಜೂರುಗೊಂಡಾಗ ಕಾರಂತರ ಮೂಲಪರಂಪರೆಗೆ ಧಕ್ಕೆಯಾಗಬಾರದು ಎನ್ನುತ್ತಾ ಹಲವರು ಮಾತನಾಡಲಾರಂಭಿಸಿದರು. ಅನುದಾನ ಮಂಜೂರುಗೊಳ್ಳುವ ಮೊದಲು ಕಾರಂತರ ಕರ್ಮಭೂಮಿಯ ಬಗ್ಗೆ ಮೌನವಾಗಿದ್ದವರು ಇದೀಗ ಮಾತನಾಡಲಾರಂಬಿಸಿದ್ದಾರೆ ಎಂದು ದೂರಿದರು.

ಅಧ್ಯಕ್ಷತೆ ವಹಿಸಿದ್ದ ಸವಣೂರು ಸೀತಾರಾಮ ರೈ ಮಾತನಾಡಿ ಬಾಲವನದ ಈಜುಕೊಳ ಸ್ಥಾಪನೆಯ ಸಂದರ್ಭದಲ್ಲಿದ್ದ ವಿರೋಧಕ್ಕೆ ಇದೀಗ ಈಜುಕೊಳದಲ್ಲಿ ತರಬೇತಿ ಪಡೆದವರು ಸಾಧನೆಯ ಮೂಲಕ ಉತ್ತರ ನೀಡಿದ್ದಾರೆ. 1000ಕ್ಕೂ ಅಧಿಕ ಪದಕಗಳೊಂದಿಗೆ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಿದ ಅಕ್ವೆಟಿಕ್ ಕ್ಲಬ್ ಸಾಧಕರ ಸಾಧನೆ ಅಭಿನಂದನಾರ್ಹ ಎಂದರು.
 ಈ ಸಂದರ್ಭದಲ್ಲಿ ಅಕ್ವೆಟಿಕ್ ಕ್ಲಬ್ ಸದಸ್ಯರಾಗಿದ್ದು, ಜಿಲ್ಲಾ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಅಕ್ವೆಟಿಕ್ ಕ್ಲಬ್ ಕಾರ್ಯದರ್ಶಿ ಗಣೇಶ್ ಶೆಟ್ಟಿ, ತರಬೇತುದಾರ ಪಾರ್ಥಾ ವಾರಣಾಸಿ ಉಪಸ್ಥಿತರಿದ್ದರು.

ತರಬೇತುದಾರ ವಸಂತ ಕುಮಾರ್ ಸಾಧಕರ ಪಟ್ಟಿ ವಾಚಿಸಿದರು. ಡಾ. ಗಾಯತ್ರಿ ಅನಿಸಿಕೆ ವ್ಯಕ್ತಪಡಿಸಿದರು. ಪ್ರತಿಮಾ ಹೆಗ್ಡೆ ಪ್ರಸ್ತಾವಿಕ ಮಾತುಗಳನ್ನಾಡಿದರು. ಎವೆರೆಸ್ಟ್ ರೋಡ್ರಿಗಸ್ ಸ್ವಾಗತಿಸಿದರು. ತರಬೇತುದಾರ ನಿರುಫ್ ಜಿ.ಆರ್ ವಂದಿಸಿದರು. ದಿವ್ಯಾ ಅನಿಲ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X