Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನಲ್ಲಿ ವಾಯುಮಾಲಿನ್ಯ...

ಮಂಗಳೂರಿನಲ್ಲಿ ವಾಯುಮಾಲಿನ್ಯ ಅಧಿಕ:ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ5 March 2017 9:11 PM IST
share
ಮಂಗಳೂರಿನಲ್ಲಿ ವಾಯುಮಾಲಿನ್ಯ ಅಧಿಕ:ಅಧ್ಯಯನ

ಮಂಗಳೂರು,ಮಾ.5: ನಗರದ ಎಪಿಡಿ ಪ್ರತಿಷ್ಠಾನವು ತನ್ನ ‘ಶುದ್ಧ ಗಾಳಿ’ ಯೋಜನೆ ಯಡಿ ಸೈಂಟ್ ಜಾರ್ಜ್‌ಸ್ ಹೋಮಿಯೊಪತಿಯ ಸಹಯೋಗದೊಂದಿಗೆ ನಡೆಸಿದ ಅಧ್ಯಯನವು ಮಂಗಳೂರಿನ ವಾತಾವರಣದಲ್ಲಿ ಸೀಸದ ಅಂಶ ಮತ್ತು ಇತರ ಮಾಲಿನ್ಯಕಾರಕಗಳು ಅನುಮತಿಸಲ್ಪಟ್ಟ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿವೆ ಎನ್ನುವುದನ್ನು ಬೆಳಕಿಗೆ ತಂದಿದೆ.

ಮಂಗಳೂರಿನಲ್ಲಿ ವಾಯು ಗುಣಮಟ್ಟದ ಕುರಿತು ತಾಂತ್ರಿಕ ವರದಿಯನ್ನು ಎಪಿಡಿ ಪ್ರತಿಷ್ಠಾನದ ಮುಖ್ಯಸ್ಥ ಅಬ್ದುಲ್ಲಾ ಎ.ರೆಹಮಾನ್ ಮತ್ತು ರಾಜ್ಯ ಸಮನ್ವಯಕಾರ ಅರ್ಜುನ ರೈ ಅವರು ಇತ್ತೀಚಿಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪರಿಸರ ಮತ್ತು ಅರಣ್ಯಖಾತೆ ಸಚಿವ ಬಿ.ರಮಾನಾಥ ರೈ ಅವರಿಗೆ ಸಲ್ಲಿಸಿದ್ದಾರೆ. ವಾಯು ಮಾಲಿನ್ಯವನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸಚಿವರನ್ನು ಆಗ್ರಹಿಸಿದ್ದಾರೆ.

ಮಂಗಳೂರಿನ ವಾಯು ಗುಣಮಟ್ಟ ಕುರಿತು ಸ್ವತಂತ್ರ ತನಿಖೆಯನ್ನು ಎಪಿಡಿ ಪ್ರತಿಷ್ಠಾನವು ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಡೆಸಿತ್ತು.

ನಗರದ ಒನ್ ಅರ್ತ್ ಎನ್ವಿರೊ ಲ್ಯಾಬ್ಸ್‌ನ ತಾಂತ್ರಿಕ ತಜ್ಞರು ಅಧ್ಯಯನವನ್ನು ನಡೆಸಿದ್ದು, ಡಿ.1ರಿಂದ 8ರವರೆಗೆ ಎಂಟು ಗಂಟೆಗಳ ಅವಧಿಗೆ ನಗರದ 12 ಪ್ರಮುಖ ತಾಣಗಳಿಂದ ವಾಯು ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿತ್ತು. ಸೈಂಟ್ ಜಾರ್ಜ್‌ಸ್ ಹೋಮಿಯೊಪತಿ ಈ ಅಧ್ಯಯನವನ್ನು ಪ್ರಾಯೋಜಿಸಿದ್ದರೆ, ಕಂಪನಿಯ ಮುಖ್ಯಸ್ಥ  (ಕ್ಲೈಂಟ್ಆ್ಯಂಡ್ ಮಾರ್ಕೆಟಿಂಗ್) ನೀಲ್ ಝಕಾರಿಯಾಸ್ ಅವರು ಸಂಘಟಿಸಿದ್ದರು.

ಪಾರ್ಟಿಕ್ಯುಲೇಟ್ ಮ್ಯಾಟರ್,10 ಮೈಕ್ರೋಮೀಟರ ಅಥವಾ ಅದಕ್ಕೂ ಸಣ್ಣ ವ್ಯಾಸದ ಉಸಿರಾಟದಲ್ಲಿ ಸೇರಬಹುದಾದ ಕಣಗಳು, 2.5 ಮೈಕ್ರೋಮೀಟರ್ ಅಥವಾ ಅದಕ್ಕೂ ಸಣ್ಣ ವ್ಯಾಸದ ಸೂಕ್ಷ್ಮ ಕಣಗಳು ಸೇರಿದಂತೆ ಆರು ಬಾಹ್ಯ ಮಾಲಿನ್ಯಕಾರಕಗಳನ್ನು ಪರಿಶೀಲನೆಗೊಳಪಡಿಸಲಾಗಿತ್ತು.

ಉಸಿರಾಟದ ಮೂಲಕ ಇವು ಮಾನವ ಶರೀರವನ್ನು ಪ್ರವೇಶಿಸಿದರೆ ಹೃದಯ ಮತ್ತು ಶ್ವಾಸಕೋಶಗಳ ಮೇಲೆ ದುಷ್ಪರಿಣಾಮ ಬೀರಿ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಸೀಸದ ಜೊತೆಗೆ ನೈಟ್ರೋಜನ್ ಡಯಾಕ್ಸೈಡ್, ಸಲ್ಫರ್ ಡಯಾಕ್ಸೈಡ್ ಇವು ಮಂಗಳೂರಿನ ಗಾಳಿಯಲ್ಲಿ ಪತ್ತೆಯಾಗಿರುವ ಇತರ ಮಾಲಿನ್ಯಕಾರಕಗಳಾಗಿವೆ.

ಮಾಲಿನ್ಯಕಾರಕಗಳು ಕೆಲವು ಪ್ರದೇಶಗಳಲ್ಲಿ ಅನುಮತಿಸಲ್ಪಟ್ಟ ಮಿತಿಗಿಂತ ಹೆಚ್ಚಾಗಿವೆ ಎನ್ನುವುದನ್ನು ಅಧ್ಯಯನವು ತೋರಿಸಿದೆ. ನಗರದ ಕೆಲವು ಪ್ರದೇಶಗಳಲ್ಲಿ ಒಟ್ಟಾರೆ ವಾಯು ಗುಣಮಟ್ಟವು ಉತ್ತಮವಾಗಿದೆ ಎನ್ನುವುದನ್ನು ಅಧ್ಯಯನವು ಬೆಟ್ಟು ಮಾಡಿದೆಯಾದರೂ ಸುದೀರ್ಘ ಅವಧಿಯಲ್ಲಿ ಇದೂ ಹದಗೆಡುವ ಸಂಕೇತಗಳಿವೆ. ಸಕಾಲಿಕ ಕ್ರಮಗಳಷ್ಟೇ ನಗರವನ್ನು ವಾಯುಮಾಲಿನ್ಯದ ವಿಷಮಸ್ಥಿತಿಯಿಂದ ಪಾರು ಮಾಡಬಹುದಾಗಿದೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X