Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಿ ತನಗಾಗಿ ಖರೀದಿಸಿದ್ದ ಆಸ್ತಿಯ ಮೇಲೆ...

ಪತಿ ತನಗಾಗಿ ಖರೀದಿಸಿದ್ದ ಆಸ್ತಿಯ ಮೇಲೆ ವಿಧವೆಗೆ ಹಕ್ಕು ಇದೆ : ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ5 March 2017 9:54 PM IST
share
ಪತಿ ತನಗಾಗಿ ಖರೀದಿಸಿದ್ದ ಆಸ್ತಿಯ ಮೇಲೆ ವಿಧವೆಗೆ ಹಕ್ಕು ಇದೆ : ನ್ಯಾಯಾಲಯ

ಹೊಸದಿಲ್ಲಿ,ಮಾ.5: ಪತಿಯು ತನ್ನ ಹೆಸರಿನಲ್ಲಿ ಖರೀದಿಸಿರುವ ಆಸ್ತಿಯನ್ನು ತನಗೆ ಇಷ್ಟ ಬಂದಂತೆ ಅನುಭವಿಸಲು ವಿಧವೆಗೆ ಹಕ್ಕು ಇದೆ ಮತ್ತು ಆಕೆಯ ಪತಿ ಅಥವಾ ಅಳಿಯ ಅದರ ಮೇಲೆ ಹಕ್ಕು ಸಾಧಿಸುವಂತಿಲ್ಲ ಎಂದು ದಿಲ್ಲಿಯ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಎತ್ತಿ ಹಿಡಿದಿದೆ.

ಮನೆಯ ಒಂದು ಭಾಗವನ್ನು ತೆರವುಗೊಳಿಸಲು ತನ್ನ ಪುತ್ರಿ ಮತ್ತು ಅಳಿಯನ ನಿರಾಕರಣೆ ಹಾಗು ಆಸ್ತಿ ಮೇಲಿನ ತನ್ನ ಹಕ್ಕನ್ನು ಪ್ರಶ್ನಿಸುತ್ತಿರುವುದರ ವಿರುದ್ದ ವಾಯುವ್ಯ ದಿಲ್ಲಿಯ ಶಾಸ್ತ್ರಿ ನಗರದ ನಿವಾಸಿ ಲಾಜವಂತಿ ದೇವಿ(65) ನ್ಯಾಯಾಲಯದ ಮೆಟ್ಟಿಲ ನ್ನೇರಿದ್ದು, ಆಕೆಯ ಪರವಾಗಿ ತೀರ್ಪು ಹೊರಬಿದ್ದಿದೆ.

ಲಾಜವಂತಿ 1985ರಲ್ಲಿ ತನ್ನ ಮನೆಯ ಒಂದು ಭಾಗವನ್ನು ಪುತ್ರಿ ಮತ್ತು ಅಳಿಯನ ವಾಸಕ್ಕಾಗಿ ನೀಡಿದ್ದರು, ಆದರೆ ಬಳಿಕ ತೆರುವುಗೊಳಿಸುವಂತೆ ಸೂಚಿಸಿದ್ದರೂ ಅವರು ನಿರಾಕರಿಸಿದ್ದರು. ಇದಕ್ಕಾಗಿ ವಿಧವೆ ಮಹಿಳೆ ನ್ಯಾಯಾಲಯವನ್ನು ಹತ್ತುವಂತೆ ಮಾಡಿದ್ದಕ್ಕೆ ನ್ಯಾ.ಕಾಮಿನಿ ಲವು ಅವರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಲಾಜವಂತಿಯ ಪತಿ ತನ್ನ ನಿಧನಾನಂತರ ಆಕೆಗೆ ಸುಭದ್ರ ಬದುಕನು ಒದಗಿಸುವ ಉದ್ದೇಶದಿಂದ 1965ರಲ್ಲಿ ಆಕೆಯ ಹೆಸರಿನಲ್ಲಿ ಆಸ್ತಿಯನ್ನು ಖರೀದಿಸಿದ್ದರು. ಆಕೆಯ ಪುತ್ರಿ ಮತ್ತು ಅಳಿಯ ಆಕೆಯ ಅನುಮತಿಯ ಮೇರೆಗೆ ಮಾತ್ರವೇ ಮನೆಯ ಒಂದು ಭಾಗವನ್ನು ತಮ್ಮ ವಶದಲ್ಲಿ ಹೊಂದಿದ್ದರು ಮತ್ತು ಅವರು ಆಕೆಯ ಹಕ್ಕು ಕಿತ್ತುಕೊಳ್ಳಲು ಅವಕಾಶ ನೀಡುವಂತಿಲ್ಲ ಎಂದು ನ್ಯಾಯಾಲಯವು ಹೇಳಿತು.

ಮನೆಯನ್ನು ಆರು ತಿಂಗಳುಗಳಲ್ಲಿ ತೆರವುಗೊಳಿಸುವಂತೆ ದಂಪತಿಗೆ ನಿರ್ದೇಶ ನೀಡಿದ ನ್ಯಾಯಾಲಯವು, 2014ರಲ್ಲಿ ಮೊಕದ್ದಮೆ ದಾಖಲಾದಾಗಿನಿಂದ ತೀರ್ಪಿನ ಬಳಿಕ ಮನೆಯನ್ನು ತೆರವುಗೊಳಿಸುವವರೆಗೆ ಪ್ರತಿ ತಿಂಗಳು 10,000 ರೂ.ನಂತೆ ಮೊತ್ತವನ್ನು ಬಡ್ಡಿಸಹಿತವಾಗಿ ಲಾಜವಂತಿಗೆ ಪಾವತಿಸುವಂತೆ ಆದೇಶಿಸಿತು.

ಲಾಜವಂತಿಯ ಪತಿ ತನ್ನ ಸ್ವಂತ ಹಣದಲ್ಲಿ ಆಸ್ತಿಯನ್ನು ಖರೀದಿಸಿದ್ದರಿಂದ ಆಕೆಗೆ ಯಾವುದೇ ಅದರ ಮೇಲೆ ಹಕ್ಕು ಇಲ್ಲ ಮತ್ತು ಆಕೆ ಮನೆಯ ಮಾಲಿಕಳಲ್ಲವಾದ್ದರಿಂದ ಮೊಕದ್ದಮೆಯನ್ನು ದಾಖಲಿಸುವ ಅಧಿಕಾರ ಹೊಂದಿಲ್ಲ ಎಂದು ಪುತ್ರಿ ಮತ್ತು ಅಳಿಯ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X