Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಾಕ್ಷಿಗೆ 2.5 ಕೋ.ರೂ. ಬಹುಮಾನ...

ಸಾಕ್ಷಿಗೆ 2.5 ಕೋ.ರೂ. ಬಹುಮಾನ ನೀಡಲಾಗಿದೆ: ಹರ್ಯಾಣದ ಕ್ರೀಡಾ ಸಚಿವ ವಿಜ್

ವಾರ್ತಾಭಾರತಿವಾರ್ತಾಭಾರತಿ5 March 2017 11:51 PM IST
share
ಸಾಕ್ಷಿಗೆ 2.5 ಕೋ.ರೂ. ಬಹುಮಾನ ನೀಡಲಾಗಿದೆ: ಹರ್ಯಾಣದ ಕ್ರೀಡಾ ಸಚಿವ ವಿಜ್

 ಚಂಡೀಗಡ, ಮಾ.5: ತಾನು ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದ ಸಂದರ್ಭದಲ್ಲಿ ಹರ್ಯಾಣ ಸರಕಾರ ನೀಡಿರುವ ಭರವಸೆಯನ್ನು ಇನ್ನೂ ಈಡೇರಿಸಿಲ್ಲ ಎಂಬ ಸಾಕ್ಷಿ ಮಲಿಕ್ ಹೇಳಿಕೆಯನ್ನು ರಾಜ್ಯದ ಕ್ರೀಡಾ ಸಚಿವ ಅನಿಲ್ ವಿಜ್ ನಿರಾಕರಿಸಿದ್ದಾರೆ.

‘‘ಸಾಕ್ಷಿ ಮಲಿಕ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡು ಭಾರತಕ್ಕೆ ಕಾಲಿಟ್ಟ ತಕ್ಷಣವೇ ನಾವು 2.5 ಕೋಟಿ ರೂ. ಚೆಕ್‌ನ್ನು ಹಸ್ತಾಂತರಿಸಿದ್ದೇವೆ. ಅವರು ರೋಹ್ಟಕ್‌ನ ಮಹರ್ಷಿ ದಯಾನಂದ ಯುನಿವರ್ಸಿಟಿ(ಎಂಡಿಯು)ಯಲ್ಲಿ ಉದ್ಯೋಗ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದರೆ, ಇಡೀ ಪ್ರಕ್ರಿಯೆ ಮುಗಿಯಲು ಸಾಕಷ್ಟು ಸಮಯ ಬೇಕಾಗುತ್ತದೆ. ಎಂಡಿಯು ನಿಯಮವನ್ನು ರೂಪಿಸಿದ್ದು, ಸಾಕ್ಷಿ ಅವರನ್ನು ಎಂಡಿಯು ಕ್ರೀಡಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗುತ್ತದೆ. ಕ್ರೀಡೆಯಲ್ಲಿನ ರಾಜಕೀಯವು ರಾಜಕಾರಣಿಗಳ ರಾಜಕೀಯಕ್ಕಿಂತಲೂ ಹೆಚ್ಚಾಗಿರುತ್ತದೆ. ಅದು ನಮಗೆ ಅರ್ಥವಾಗುವುದಿಲ್ಲ’’ಎಂದು ಕ್ರೀಡಾ ಸಚಿವರು ತಿಳಿಸಿದ್ದಾರೆ.

ಸಾಕ್ಷಿಗೆ ಇನ್ನು 3-4 ದಿನಗಳಲ್ಲಿ ನೇಮಕಾತಿ ಪತ್ರ ನೀಡಲಾಗುವುದು. ಇದೆಲ್ಲವೂ ಅವರಿಗೆ ಚೆನ್ನಾಗಿ ಗೊತ್ತಿದೆ. ಸಾಕ್ಷಿ ತನ್ನ ಕೋಚ್‌ಗಳಿಗೆ ಗೌರವ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಅವರಲ್ಲಿ ಕೋಚ್ ಹೆಸರನ್ನು ನೀಡುವಂತೆ ಸೂಚಿಸಲಾಗಿತ್ತು. ಆಕೆಯ ತಾನು ತರಬೇತಿ ಪಡೆದಿದ್ದ 3-4 ಕೋಚ್ ಹೆಸರನ್ನು ನೀಡಿದ್ದರು. ಒಬ್ಬ ಕೋಚ್ ಹೆಸರನ್ನು ಪ್ರಮಾಣಪತ್ರದೊಂದಿಗೆ ಸರಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ, ಈತನಕ ಆ ಕೆಲಸ ಮಾಡಿಲ್ಲ. ಎಲ್ಲ ಕೋಚ್‌ಗಳಿಂದ ಬಹುಮಾನ ನೀಡಲು ನಮ್ಮಿಂದ ಸಾಧ್ಯವಿಲ್ಲ’’ ಎಂದು ವಿಜ್ ಹೇಳಿದ್ದಾರೆ.

ರಿಯಾಯತಿ ದರದಲ್ಲಿ ನಿವೇಶನ ಖರೀದಿಸುವ ಬಗ್ಗೆ ಸಾಕ್ಷಿ ಅವರು ಹರ್ಯಾಣದ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಈ ತನಕ ಅರ್ಜಿ ಸಲ್ಲಿಸಿಲ್ಲ. ರಾಜ್ಯ ಸರಕಾರ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ರಿಯಾಯತಿ ದರದಲ್ಲಿ ನಿವೇಶನ ನೀಡಲು ಬಯಸಿದೆ. ಸಾಕ್ಷಿ ಮಲಿಕ್ ತರಬೇತಿ ನಡೆಸುವ ಸ್ಟೇಡಿಯಂನಲ್ಲಿ 80 ಲಕ್ಷ ರೂ ಮೊತ್ತದ ಏರ್‌ಕಂಡೀಶನ್ ಅಳವಡಿಸಲು ಸರಕಾರ ಒಪ್ಪಿಗೆ ನೀಡಿದೆ ಎಂದು ವಿಜ್ ಸ್ಪಷ್ಟಪಡಿಸಿದರು.

ರಿಯೋ ಗೇಮ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ನನಗೆ ಹರ್ಯಾಣ ಸರಕಾರ ಈ ತನಕ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ನಾನು ಒಲಿಂಪಿಕ್ಸ್ ಪದಕ ಗೆದ್ದ ತಕ್ಷಣವೇ ಸಕಾರ ಬಹುಮಾನವನ್ನು ಪ್ರಕಟಿಸಿತ್ತು. ಇದು ಮಾಧ್ಯಮ ಪ್ರಚಾರಕ್ಕೆ ಸೀಮಿತವಾಗಿದೆಯೇ? ಎಂದು ಸಾಕ್ಷಿ ಮಲಿಕ್ ರವಿವಾರ ಟ್ವೀಟ್ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X