Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೆಕ್ಸಿಕೊ ಓಪನ್: ನಡಾಲ್‌ಗೆ ಶಾಕ್ ನೀಡಿದ...

ಮೆಕ್ಸಿಕೊ ಓಪನ್: ನಡಾಲ್‌ಗೆ ಶಾಕ್ ನೀಡಿದ ಕ್ವೆರಿಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ5 March 2017 11:53 PM IST
share
ಮೆಕ್ಸಿಕೊ ಓಪನ್: ನಡಾಲ್‌ಗೆ ಶಾಕ್ ನೀಡಿದ ಕ್ವೆರಿಗೆ ಪ್ರಶಸ್ತಿ

 ಅಕಾಪುಲ್ಕೊ, ಮಾ.5: ಸ್ಪೇನ್‌ನ ದ್ವಿತೀಯ ಶ್ರೇಯಾಂಕಿತ ರಫೆಲ್ ನಡಾಲ್‌ರನ್ನು ನೇರ ಸೆಟ್‌ಗಳಿಂದ ಮಣಿಸಿದ ಅಮೆರಿಕದ ಸ್ಯಾಮ್ ಕ್ವೆರಿ ಎಟಿಪಿ ಮೆಕ್ಸಿಕೊ ಓಪನ್ ಪ್ರಶಸ್ತಿಯನ್ನು ಗೆದ್ದುಕೊಂಡರು.

ಇಲ್ಲಿ ಶನಿವಾರ ನಡೆದ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಶ್ರೇಯಾಂಕರಹಿತ ಅಮೆರಿಕದ ಆಟಗಾರ ಕ್ವೆರಿ ಸ್ಪೇನ್‌ನ ನಡಾಲ್‌ರನ್ನು 6-3, 7-6(3) ಸೆಟ್‌ಗಳಿಂದ ಮಣಿಸಿದರು. ವಿಶ್ವ ರ್ಯಾಂಕಿಂಗ್‌ನಲ್ಲಿ 40ನೆ ಸ್ಥಾನದಲ್ಲಿರುವ ಕ್ವೆರಿ ಅವರು ನಡಾಲ್ ವಿರುದ್ಧ ಆಡಿರುವ 5 ಪಂದ್ಯಗಳ ಪೈಕಿ ಮೊದಲ ಜಯ ಸಾಧಿಸಿದರು.

2005 ಹಾಗೂ 2013ರಲ್ಲಿ ಮೆಕ್ಸಿಕೊ ಓಪನ್ ಪ್ರಶಸ್ತಿಯನ್ನು ಜಯಿಸಿದ್ದ ನಡಾಲ್ ಮೆಕ್ಸಿಕೊ ಓಪನ್‌ನಲ್ಲಿ ಈ ತನಕ ಒಂದೂ ಸೆಟ್‌ನ್ನು ಸೋತಿರಲಿಲ್ಲ. ಅಜೇಯ ಗೆಲುವಿನ ಓಟದಲ್ಲಿದ್ದ ನಡಾಲ್‌ರನ್ನು ಸೋಲಿಸಿದ ಕ್ವೆರಿ 9ನೆ ಬಾರಿ ಎಟಿಪಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು. ಕ್ವೆರಿ ಪ್ರಸ್ತುತ ಟೂರ್ನಿಯಲ್ಲಿ ಅಗ್ರ-10ರಲ್ಲಿ ನಾಲ್ವರು ಆಟಗಾರರಾದ ಬೆಲ್ಜಿಯಂನ ಡೇವಿಡ್ ಗೊಫಿನ್, ಆಸ್ಟ್ರೀಯದ ಡೊಮಿನಿಕ್ ಥಿಯೆಮ್, ಆಸ್ಟ್ರೇಲಿಯದ ನಿಕ್ ಕಿರ್ಗಿಯೊಸ್ ಹಾಗೂ 6ನೆ ರ್ಯಾಂಕಿನ ನಡಾಲ್‌ರನ್ನು ಸೋಲಿಸಿದ್ದಾರೆ.

ಆಸ್ಟ್ರೇಲಿಯನ್ ಓಪನ್ ಫೈನಲ್‌ನಲ್ಲಿ ರೋಜರ್ ಫೆಡರರ್ ವಿರುದ್ಧ ಐದು ಸೆಟ್‌ಗಳ ಅಂತರದಿಂದ ಸೋತ ಬಳಿಕ ಮೊದಲ ಟೂರ್ನಮೆಂಟ್‌ನ್ನು ಆಡಿರುವ ನಡಾಲ್‌ಗೆ 2014ರ ಬಳಿಕ ಮೊದಲ ಬಾರಿ ಹಾರ್ಡ್‌ಕೋರ್ಟ್ ಪ್ರಶಸ್ತಿಯನ್ನು ಜಯಿಸುವ ಅವಕಾಶವನ್ನು ಕ್ವೆರಿ ನಿರಾಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X