Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಕೆರೆಗಳ ಅಭಿವೃದಿಗೆ ಮೀನಮೇಷ

ಮಂಗಳೂರು: ಕೆರೆಗಳ ಅಭಿವೃದಿಗೆ ಮೀನಮೇಷ

ಬೇಸಿಗೆಯಲ್ಲಿ ಮಾತ್ರ ನೆನಪಿಗೆ ಬರುವ ‘ಕೆರೆ’ಗಳು

ವಾರ್ತಾಭಾರತಿವಾರ್ತಾಭಾರತಿ6 March 2017 12:36 AM IST
share
ಮಂಗಳೂರು: ಕೆರೆಗಳ ಅಭಿವೃದಿಗೆ ಮೀನಮೇಷ

ಮಂಗಳೂರು, ಮಾ.5: ನಗರದ ಜಪ್ಪು ಮಾರ್ಕೆಟ್ ಬಳಿ ಗುಜ್ಜರಕೆರೆ, ಮಂಗಳಾದೇವಿ ಬಳಿ ಎಮ್ಮೆಕೆರೆ, ಕಾವೂರಿನಲ್ಲಿ ಕಾವೂರು ಕೆರೆ, ಪಡೀಲ್ ಬಳಿ ಬೈರಾಡಿ ಕೆರೆ, ಬಜ್ಜೋಡಿಯಲ್ಲಿ ಬಜ್ಜೋಡಿ ಕೆರೆ, ಕುಳಾಯಿ ಬಳಿ ಬಗ್ಗುಂಡಿ ಕೆರೆ ಹೀಗೆ ಹಲವು ಪ್ರಮುಖ ಕೆರೆಗಳಿವೆ. ಪ್ರತೀ ಬೇಸಿಗೆ ಕಾಲದಲ್ಲಿ ನಗರ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿ ಬಗ್ಗೆ ಮಾತನಾಡುವ ಜನಪ್ರತಿನಿ ಮತ್ತು ಅಕಾರಿಗಳು ಆ ಬಳಿಕ ಮರೆತು ಬಿಡುತ್ತಾರೆ ಎಂಬುದಕ್ಕೆ ಇತ್ತೀಚಿನ ವಿದ್ಯಮಾನವೇ ಸಾಕ್ಷಿ.

ಕಳೆದ ಬೇಸಿಗೆ ಕಾಲದಲ್ಲಿ ಬರಗಾಲ ತೀವ್ರವಾಗಿತ್ತು. ಆ ವೇಳೆ ಜನಪ್ರತಿನಿಗಳು ಕೆರೆಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ್ದರು. ಬಳಿಕ ಈ ಬಗ್ಗೆ ನಡೆದ ಬೆಳವಣಿಗೆ ಅಷ್ಟಕಷ್ಟೆ. ಈ ವರ್ಷ ಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ಬರಗಾಲ ಎಂದು ಸರಕಾರವೇ ಘೋಷಿಸಿದೆ. ಆದರೆ ಈ ನಿಟ್ಟಿನಲ್ಲಿ ನಡೆದ ಚಟುವಟಿಕೆ ಮಾತ್ರ ಶೂನ್ಯ. ಈ ಮಧ್ಯೆ ಕೆರೆಗಳ ಅಭಿವೃದ್ಧಿಯ ಕುರಿತು ಮಾತುಗಳು ಕೇಳಿ ಬರುತ್ತಿವೆ. ಅಭಿವೃದ್ಧಿಯ ಬಗ್ಗೆ ಇಚ್ಛಾಶಕ್ತಿಯ ಕೊರತೆಯಿರುವುದರಿಂದ ಈ ಮಾತು, ಭರವಸೆಗಳು ಕೂಡ ಗಾಳಿಯಲ್ಲೇ ತೇಲಾಡುತ್ತಿವೆ.

ರಾಜ್ಯದ ಎಲ್ಲ ಕೆರೆಗಳ ಸಂರಕ್ಷಣೆ ಮಾಡಬೇಕು ಎಂದು ಈ ಹಿಂದೆಯೇ ಹೈಕೋರ್ಟ್ ಆದೇಶಿಸಿತ್ತು. ಅದರಂತೆ ಕಂದಾಯ ಇಲಾಖೆಯ ಮೂಲಕ ಕೆರೆಗಳ ಸಮೀಕ್ಷೆ ಮತ್ತು ಸರ್ವೇ ಕಾರ್ಯ ನಡೆಯಬೇಕು. ಆದರೆ ಈ ಬಗ್ಗೆ ಯಾವುದೇ ಕಾರ್ಯಕ್ರಮ ನಡೆದಿಲ್ಲ. ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕುಳಾಯಿ ಸಮೀಪದ ಬಗ್ಗುಂಡಿ ಕೆರೆ ವೀಕ್ಷಣೆ ಮಾಡಿ ಅಭಿವೃದ್ಧಿ ಕುರಿತು ವರದಿ ತಯಾರಿಸಲು ಅಕಾರಿ ವರ್ಗಕ್ಕೆ ಸೂಚನೆ ನೀಡಿದ್ದಾರೆ. ಈ ಕೆರೆಯ ಅಭಿವೃದ್ಧಿ ಬಗ್ಗೆ ಮೂರು ವರ್ಷದ ಹಿಂದೆಯೇ ಸ್ಥಳೀಯರು ಸಮಿತಿ ರಚಿಸಿ ಕೆರೆಯಲ್ಲಿ ತುಂಬಿದ ತ್ಯಾಜ್ಯವನ್ನು ಶ್ರಮದಾನದ ಮೂಲಕ ತೆಗೆಯುತ್ತಿದ್ದು, ಹೇಗಾದರೂ ಸರಿ ಈ ಕೆರೆಯನ್ನು ಅಭಿವೃದ್ಧಿಪಡಿಸಿ ಎಂದು ಮನವಿ ಮಾಡಿದ್ದಾರೆ.

ಗುಜ್ಜರಕೆರೆ ಅಭಿವೃದ್ಧಿ ಬಗ್ಗೆ ಕಳೆದ 15 ವರ್ಷಗಳಿಂದ ಸ್ಥಳೀಯರು ಹೋರಾಟ ಮಾಡುತ್ತಿದ್ದಾರೆ. ಈಗಾಗಲೇ ಇದಕ್ಕೆ ಸುಮಾರು 3 ಕೋಟಿ ರೂ. ವ್ಯಯಿಸಿದ್ದರೂ ಅಭಿವೃದ್ಧಿ ಮಾತ್ರ ಶೂನ್ಯ. ಇನ್ನು ಎಮ್ಮೆಕೆರೆಯೂ ಇದಕ್ಕೆ ಹೊರತಾಗಿಲ್ಲ. ಸುಮಾರು 3.5 ಎಕರೆ ವಿಸ್ತೀರ್ಣದ ಈ ಕೆರೆಯ ಬಹುಪಾಲು ಒತ್ತುವರಿಯಾಗಿದೆ. ಅಲ್ಲದೆ ಕೆರೆಯಲ್ಲಿ ಕೊಳಚೆ-ಹೂಳು ತುಂಬಿವೆ. ಈ ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸುವ ಸಲುವಾಗಿ ಈಗಾಗಲೇ ಕೋಟ್ಯಂತರ ರೂ. ವ್ಯಯಿಸಲಾಗಿದೆ. ಆದರೂ ಕೆರೆ ಇನ್ನೂ ಅಭಿವೃದ್ಧಿಯಾಗಿಲ್ಲ.

ಇತ್ತೀಚೆಗೆ ಸಚಿವ ರಮಾನಾಥ ರೈ ಮತ್ತು ಶಾಸಕ ಜೆ.ಆರ್.ಲೋಬೊ ಭೇಟಿ ನೀಡಿ ಪರಿಶೀಲಿಸಿ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈಗಾಗಲೇ ಇದರ ಹೂಳೆತ್ತಲು 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೆ ನೀರು ತುಂಬಿದ ಕಾರಣ ಹೂಳೆತ್ತಲು ಸಾಧ್ಯವಾಗಿಲ್ಲ ಎಂಬುದು ಗಮನಾರ್ಹ.

ನಗರ ಮತ್ತು ಆಸುಪಾಸಿನ ಗದ್ದೆ, ತೋಟ, ತಗ್ಗುಪ್ರದೇಶಗಳಿಗೆ ಮಣ್ಣು ತುಂಬಿಸಿ ಸಮತಟ್ಟು ಮಾಡಿ ಗಗನಚುಂಬಿ ಕಟ್ಟಡಗಳನ್ನು ಏರಿಸಲಾಗುತ್ತಿವೆ. ಜೊತೆಗೆ ಪಕ್ಕದ ಕೆರೆ, ತೋಡುಗಳನ್ನೂ ಅತಿಕ್ರಮಿಸಿ ನೀರಿನ ಮೂಲಕ್ಕೆ ಅಡ್ಡಿಪಡಿಸಲಾಗುತ್ತಿದೆ. ಕೆಲವೆಡೆ ಬೃಹತ್ ಕೈಗಾರಿಕೆಗಳ, ವಸತಿ ಸಮುಚ್ಚಯದ ತ್ಯಾಜ್ಯ ನೀರನ್ನು ಇಂತಹ ಕೆರೆಗಳಿಗೆ ಬಿಡಲಾಗುತ್ತದೆ. ಇದರಿಂದ ಪರಿಸರ ಮಾಲಿನ್ಯವೂ ಆಗುತ್ತದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಇದನ್ನು ತಡೆಗಟ್ಟದೆ ವೌನ ತಾಳಿದೆ.

ಒಟ್ಟಿನಲ್ಲಿ ಪ್ರತಿ ಬೇಸಿಗೆ ಸಂದರ್ಭದಲ್ಲಿ ಕೆರೆಗಳ ಅಭಿವೃದ್ಧಿ ಬಗ್ಗೆ ಮಾತನಾಡುವ ಜನಪ್ರತಿನಿಗಳು ಆ ಬಳಿಕ ಮರೆಯುತ್ತಾರೆ. ನೀರಿಗಾಗಿ ಜನರ ಹಾಹಾಕಾರಕ್ಕೆ ಕೊನೆಯೇ ಇಲ್ಲವಾಗಿದೆ. ಮಳೆಗಾಲದಲ್ಲಿ ಕೆರೆಯನ್ನು ಮರೆಯಲಾಗುತ್ತಿವೆ. ಡಿಸೆಂಬರ್ ಅಥವಾ ಜನವರಿಯಲ್ಲಿ ಇದರ ಅಭಿವೃದ್ದಿ ಕಾಮಗಾರಿ ಕೈಗೆತ್ತಿಕೊಂಡರೆ ಬೇಸಿಗೆ ಕಾಲದಲ್ಲಿ ಉಪಕಾರಕ್ಕೆ ಬಂದೀತು. ಜನಪ್ರತಿನಿಗಳ ಈ ನಿರ್ಲಕ್ಷಕ್ಕೆ ಜನರೂ ವೌನ ತಾಳಿರುವುದು ವಿಪರ್ಯಾಸ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X