Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಕಾರ್ಯಕರ್ತರಲ್ಲಿ ಕಾಣದ...

ಆರೆಸ್ಸೆಸ್ ಕಾರ್ಯಕರ್ತರಲ್ಲಿ ಕಾಣದ ಉತ್ಸಾಹ, ಮುಖಂಡರಿಗೆ ಓಲೈಸುವ ತಲೆನೋವು

ಉತ್ತರ ಪ್ರದೇಶ ಚುನಾವಣಾ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ6 March 2017 12:25 PM IST
share
ಆರೆಸ್ಸೆಸ್ ಕಾರ್ಯಕರ್ತರಲ್ಲಿ ಕಾಣದ ಉತ್ಸಾಹ, ಮುಖಂಡರಿಗೆ ಓಲೈಸುವ ತಲೆನೋವು

ಲಕ್ನೌ, ಮಾ.6: ಟಿಕೆಟ್ ಹಂಚಿಕೆ ವಿಚಾರದಲ್ಲಿ ಎದ್ದಿದ್ದ ಭಿನ್ನಮತದ ಹೊರತಾಗಿಯೂ ಆರೆಸ್ಸೆಸ್ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದಾರಾದರೂ ಅವರಲ್ಲಿ ಹಿಂದಿನಂತೆ ಉತ್ಸಾಹ ಕಾಣಿಸಿಕೊಂಡಿಲ್ಲ. ಗೋರಖಪುರ ಹಾಗೂ ವಾರಣಾಸಿಯಲ್ಲಿ ಹಲವು ಪ್ರಚಾರಕರು ತೋರಿಸುತ್ತಿರುವ ಅನಾಸಕ್ತಿ ಆರೆಸ್ಸೆಸ್ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿದೆ.

ಈ ಎರಡು ನಗರಗಳಲ್ಲಿ ಎರಡು ದಶಕಗಳ ಹಿಂದೆ ಕಾರ್ಯನಿರ್ವಹಿಸಿದ್ದ ಆರೆಸ್ಸೆಸ್ ಸಹ ಕಾರ್ಯವಾಹ ಕೃಷ್ಣ ಗೋಪಾಲ್ ಅವರು ಸ್ವತಃ ಕಾರ್ಯಕರ್ತರ ಬಳಿ ಹೋಗಿ ದೇಶದ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸುವಂತೆ ಅವರ ಮನವೊಲಿಸಬೇಕಾಗಿ ಬಂದಿತ್ತು.

ಅದೇ ಸಮಯ ಬಿಜೆಪಿಯ ಪೋಲಿಂಗ್ ಏಜೆಂಟರಾಗಿ ಬೂತುಗಳಲ್ಲಿ ಕಾರ್ಯನಿರ್ವಹಿಸದಂತೆ ಆರೆಸ್ಸೆಸ್ ಕಾರ್ಯಕರ್ತರಿಗೆ ಹೇಳಲಾಗಿದ್ದು ಅವರ ಬದಲು ಬೂತ್, ಸೆಕ್ಟರ್ ಹಾಗೂ ಅಸೆಂಬ್ಲಿ ಕ್ಷೇತ್ರದಲ್ಲಿ ಕಾರ್ಯಾಚರಿಸುತ್ತಿರುವ ಸಂಘಟಕರೇ ಜನರನ್ನು ಮತಗಟ್ಟೆಗಳಿಗೆ ಹೋಗಿ ಮತ ಚಲಾಯಿಸಲು ಪ್ರೇರೇಪಿಸುತ್ತಿದ್ದಾರೆ.
''ನಾವು ಮನೆ ಮನೆಗೆ ತೆರಳೀ ಜನರು ಮತ ಚಲಾಯಿಸಲು ಹೋಗುವಂತೆ ಉತ್ತೇಜಿಸುತ್ತಿದ್ದೇವೆ. ಹೆಚ್ಚಿನ ಕಡೆ ಬಿಜೆಪಿ ಬೆಂಬಲಿಗರು ಮತ ಚಲಾವಣೆಗೆ ಹಿಂದೇಟು ಹಾಕುತ್ತಿದ್ದಾರೆ'' ಎಂದು ವಾರಣಾಸಿಯ ಹಿರಿಯ ಪ್ರಚಾರಕರೊಬ್ಬರು ಹೇಳಿದ್ದಾರೆ.

ಹಲವು ನಾಯಕರ ಅಸಮಾಧಾನದಿಂದ ಕಂಗೆಟ್ಟಿರುವ ಪಕ್ಷವು ಲಕ್ನೌನಿಂದ ಮಾಜಿ ಆರೆಸ್ಸೆಸ್ ಪ್ರಚಾರಕರೊಬ್ಬರನ್ನು ಕರೆಸಿ ಅವರಿಂದ ಸಂಘಟನಾತ್ಮಕ ಕಾರ್ಯ ನಡೆಸುತ್ತಿದೆ. ಕೆಲವೆಡೆ ತಮ್ಮ ಅಸಮಾಧಾನದಿಂದ ಪಕ್ಷಕ್ಕೆ ನಷ್ಟವುಂಟಾಗಬಹುದೆಂದು ಅರಿತ ಕೆಲ ಬಿಜೆಪಿ ಕಾರ್ಯಕರ್ತರು ಮತ್ತೆ ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

ತರುವಾಯ ಗೋರಖಪುರದಲ್ಲಿನ ಆರೆಸ್ಸೆಸ್ ಪದಾಧಿಕಾರಿಯೊಬ್ಬರು ಇನ್ನೊಂದು ಕುತೂಹಲಕಾರಿ ಮಾಹಿತಿ ನೀಡುತ್ತಾರೆ. ''ಇತ್ತೀಚಿಗಿನ ದಿನಗಳಲ್ಲಿ ಎಲ್ಲವೂ ರಾಜಕೀಯಗೊಂಡಿದೆ. ಬಿಜೆಪಿಗಾಗಿ ಕೆಲಸ ಮಾಡಿ ಎಂದು ಸ್ವಯಂಸೇವಕರಿಗೆ ಹೇಳಿದರೆ, ಹಣಕ್ಕಾಗಿ ಕೆಲಸ ನಿರ್ವಹಿಸುವ ಬಿಜೆಪಿ ಕಾರ್ಯಕರ್ತರ ಬಗ್ಗೆ ಅವರು ಹೇಳುತ್ತಾರೆ. ಹೆಚ್ಚೆಚ್ಚು ಸ್ವಯಂಸೇವಕರು ತಮ್ಮ ಕಾರ್ಯಗಳಿಗಾಗಿ ಹಣವನ್ನು ಅಪೇಕ್ಷಿಸುತ್ತಿದ್ದಾರೆ,'' ಎಂದವರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X